<p><strong>ಟೊರೊಂಟೊ:</strong> ಬಂದೂಕುಗಳನ್ನು ಹೊಂದಿರುವುದಕ್ಕೆ ಸಂಬಂಧಿಸಿದ ಡಜನ್ಗೂ ಹೆಚ್ಚು ಪ್ರಕರಣಗಳಲ್ಲಿನ ಅಪರಾಧಕ್ಕಗಿ ಖಾಲಿಸ್ತಾನಿ ನಾಯಕ ಇಂದ್ರಜೀತ್ ಸಿಂಗ್ ಗೋಸಲ್ (36) ಅವರನ್ನು ಕೆನಡಾ ಪೊಲೀಸರು ಒಂಟಾರಿಯೊದ ವಿಟ್ಬಿಯಲ್ಲಿ ಬಂಧಿಸಿದ್ದಾರೆ. </p>.<p>ಒಂಟಾರಿಯೊದ ಪ್ರಾಂತ್ಯದ ಪೊಲೀಸ್ ಅಧಿಕಾರಿಗಳು ಅವರನ್ನು ಶುಕ್ರವಾರ ಬಂಧಿಸಿದ್ದಾರೆ ಎಂದು ನ್ಯಾಯಾಲಯದ ದಾಖಲೆಗಳನ್ನು ಉಲ್ಲೇಖಿಸಿ ‘ಗ್ಲೋಬಲ್ ನ್ಯೂಸ್’ ಸೋಮವಾರ ವರದಿ ಮಾಡಿದೆ.</p>.<p>ಗೋಸಲ್ ಸೋಮವಾರ ಓಶಾವಾ ನ್ಯಾಯಾಲಯದ ಮುಂದೆ ಹಾಜರಾಗಿದ್ದು, ಅವರ ಜೊತೆಗೆ ಟೊರೊಂಟೊದ ಅರ್ಮಾನ್ ಸಿಂಗ್ (23) ಮತ್ತು ನ್ಯೂಯಾರ್ಕ್ ನಿವಾಸಿ ಜಗದೀಪ್ ಸಿಂಗ್ (41) ಅವರನ್ನೂ ಆರೋಪಿಗಳು ಎಂದು ಹೆಸರಿಸಲಾಗಿದೆ.</p>.<p>ಪ್ರತ್ಯೇಕ ಖಾಲಿಸ್ತಾನ ರಾಷ್ಟ್ರವನ್ನು ಪ್ರತಿಪಾದಿಸುವ ‘ಸಿಖ್ಸ್ ಫಾರ್ ಜಸ್ಟೀಸ್’ನ (ಎಸ್ಎಫ್ಜಿ) ಸದಸ್ಯನಾಗಿರುವ ಗೋಸಲ್ ಖಾಲಿಸ್ತಾನದ ಕುರಿತು ಜನಾಭಿಪ್ರಾಯ ಸಂಗ್ರಹ ಅಭಿಯಾನ ನಡೆಸುತ್ತಿದ್ದಾರೆ.</p>.<p>ಈ ಹಿಂದೆ ಅದನ್ನು ಹರ್ದೀಪ್ ಸಿಂಗ್ ನಿಜ್ಜರ್ ನಡೆಸುತ್ತಿದ್ದರು. ಅವರನ್ನು ಬ್ರಿಟಿಷ್ ಕೊಲಂಬಿಯಾದ ಸರ್ರೆಯಲ್ಲಿ ಗುಂಡಿಕ್ಕಿ ಕೊಂದ ನಂತರ ಅವರು ಈ ಹುದ್ದೆಯನ್ನು ವಹಿಸಿಕೊಂಡಿದ್ದಾರೆ ಎಂದು ವರದಿ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಟೊರೊಂಟೊ:</strong> ಬಂದೂಕುಗಳನ್ನು ಹೊಂದಿರುವುದಕ್ಕೆ ಸಂಬಂಧಿಸಿದ ಡಜನ್ಗೂ ಹೆಚ್ಚು ಪ್ರಕರಣಗಳಲ್ಲಿನ ಅಪರಾಧಕ್ಕಗಿ ಖಾಲಿಸ್ತಾನಿ ನಾಯಕ ಇಂದ್ರಜೀತ್ ಸಿಂಗ್ ಗೋಸಲ್ (36) ಅವರನ್ನು ಕೆನಡಾ ಪೊಲೀಸರು ಒಂಟಾರಿಯೊದ ವಿಟ್ಬಿಯಲ್ಲಿ ಬಂಧಿಸಿದ್ದಾರೆ. </p>.<p>ಒಂಟಾರಿಯೊದ ಪ್ರಾಂತ್ಯದ ಪೊಲೀಸ್ ಅಧಿಕಾರಿಗಳು ಅವರನ್ನು ಶುಕ್ರವಾರ ಬಂಧಿಸಿದ್ದಾರೆ ಎಂದು ನ್ಯಾಯಾಲಯದ ದಾಖಲೆಗಳನ್ನು ಉಲ್ಲೇಖಿಸಿ ‘ಗ್ಲೋಬಲ್ ನ್ಯೂಸ್’ ಸೋಮವಾರ ವರದಿ ಮಾಡಿದೆ.</p>.<p>ಗೋಸಲ್ ಸೋಮವಾರ ಓಶಾವಾ ನ್ಯಾಯಾಲಯದ ಮುಂದೆ ಹಾಜರಾಗಿದ್ದು, ಅವರ ಜೊತೆಗೆ ಟೊರೊಂಟೊದ ಅರ್ಮಾನ್ ಸಿಂಗ್ (23) ಮತ್ತು ನ್ಯೂಯಾರ್ಕ್ ನಿವಾಸಿ ಜಗದೀಪ್ ಸಿಂಗ್ (41) ಅವರನ್ನೂ ಆರೋಪಿಗಳು ಎಂದು ಹೆಸರಿಸಲಾಗಿದೆ.</p>.<p>ಪ್ರತ್ಯೇಕ ಖಾಲಿಸ್ತಾನ ರಾಷ್ಟ್ರವನ್ನು ಪ್ರತಿಪಾದಿಸುವ ‘ಸಿಖ್ಸ್ ಫಾರ್ ಜಸ್ಟೀಸ್’ನ (ಎಸ್ಎಫ್ಜಿ) ಸದಸ್ಯನಾಗಿರುವ ಗೋಸಲ್ ಖಾಲಿಸ್ತಾನದ ಕುರಿತು ಜನಾಭಿಪ್ರಾಯ ಸಂಗ್ರಹ ಅಭಿಯಾನ ನಡೆಸುತ್ತಿದ್ದಾರೆ.</p>.<p>ಈ ಹಿಂದೆ ಅದನ್ನು ಹರ್ದೀಪ್ ಸಿಂಗ್ ನಿಜ್ಜರ್ ನಡೆಸುತ್ತಿದ್ದರು. ಅವರನ್ನು ಬ್ರಿಟಿಷ್ ಕೊಲಂಬಿಯಾದ ಸರ್ರೆಯಲ್ಲಿ ಗುಂಡಿಕ್ಕಿ ಕೊಂದ ನಂತರ ಅವರು ಈ ಹುದ್ದೆಯನ್ನು ವಹಿಸಿಕೊಂಡಿದ್ದಾರೆ ಎಂದು ವರದಿ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>