‘ಕಾಣೆಯಾಗಿರುವ ಇತರರಿಗಾಗಿ ಶೋಧ ನಡೆಸಲಾಗುತ್ತಿದೆ. ಆದರೆ, ಈ ರೀತಿಯ ದುರಂತಗಳು ಸಂಭವಿಸಿದಾಗ ಹೆಚ್ಚಿನ ಸಂಖ್ಯೆಯಲ್ಲಿ ಸಾವು–ನೋವು ಉಂಟಾಗುವ ಸಾಧ್ಯತೆ ಇರುತ್ತದೆ. ಹೀಗಾಗಿ ಎಷ್ಟು ಜನರು ನೀರಿನಲ್ಲಿ ಮುಳುಗಿದ್ದಾರೆ ಎಂದು ಈಗಲೇ ಖಚಿತವಾಗಿ ಹೇಳುವುದು ಕಷ್ಟ. ಜನರನ್ನು ರಕ್ಷಿಸುವುದು ಮತ್ತು ಅವರು ಚೇತರಿಸಿಕೊಳ್ಳುವಂತೆ ಮಾಡುವುದರ ಕಡೆಗೆ ಈಗ ನಾವು ದೃಷ್ಟಿ ನೆಟ್ಟಿದ್ದೇವೆ. ಇದೊಂದು ಘೋರ ವಿಪತ್ತು’ ಎಂದು ಮತ್ತೊಬ್ಬ ಅಧಿಕಾರಿ ತಿಳಿಸಿದ್ದಾರೆ.