ಕರ್ನಲ್ ಬಿ. ಸಂತೋಷ್ ಬಾಬು, ಹವಾಲ್ದಾರ್ ಪಳನಿ ಮತ್ತು ಸಿಪಾಯಿ ಓಝಾ ಹುತಾತ್ಮರಾಗಿದ್ದಾರೆ ಎಂದಷ್ಟೇ ಸೇನೆಯು ಆರಂಭದಲ್ಲಿ ಹೇಳಿತ್ತು. ಆದರೆ, ಸಂಘರ್ಷದ ಸ್ಥಳದಲ್ಲಿ ಕರ್ತವ್ಯದಲ್ಲಿದ್ದು ಗಂಭೀರವಾಗಿ ಗಾಯಗೊಂಡಿದ್ದ ಇನ್ನೂ 17 ಯೋಧರು ಮೃತಪಟ್ಟಿದ್ದಾರೆ ಎಂದು ಮಂಗಳವಾರ ರಾತ್ರಿ ತಿಳಿಸಿತು. ಗಾಯಗೊಂಡ ಯೋಧರುಅತಿ ಎತ್ತರದ ಪ್ರದೇಶದಲ್ಲಿ, ಅತಿಯಾದ ಚಳಿಯಿಂದಾಗಿ ಚೇತರಿಸಿಕೊಳ್ಳಲು ಸಾಧ್ಯವಾಗಲಿಲ್ಲ.