<p><strong>ಬೀಜಿಂಗ್:</strong> ಚೀನಾ–ಭಾರತ ದ್ವಿಪಕ್ಷೀಯ ಒಪ್ಪಂದವು ಕೇವಲ ಎರಡು ದೇಶಗಳ ನಡುವಿನ ಗಡಿ ವಿವಾದಕ್ಕೆ ಮಾತ್ರ ಸಂಬಂಧಿಸಿದ್ದಲ್ಲ ಎಂದು ಚೀನಾ ಬುಧವಾರ ಪ್ರತಿಪಾದಿಸಿದೆ.</p>.<p>ಎರಡು ದೇಶಗಳ ನಡುವೆ ತಪ್ಪು ತಿಳಿವಳಿಕೆ ಮತ್ತು ತಪ್ಪು ನಿರ್ಣಯಗಳನ್ನು ಹೋಗಲಾಡಿಸಲು ಪರಸ್ಪರ ವಿಶ್ವಾಸವನ್ನು ಹೆಚ್ಚಿಸಬೇಕು ಎಂದು ಚೀನಾ ಕರೆ ನೀಡಿದೆ.</p>.<p>2020ರ ಜೂನ್ನಲ್ಲಿ ಗಾಲ್ವನ್ ಕಣಿವೆಯಲ್ಲಿ ಎರಡೂ ದೇಶಗಳ ನಡುವೆ ನಾಲ್ಕು ದಶಕಗಳಲ್ಲಿಯೇ ಗಂಭೀರವಾದ ಸೇನಾ ಸಂಘರ್ಷ ನಡೆದಿತ್ತು. ಅದರ ನಂತರ ಗಡಿಯಲ್ಲಿ ಶಾಂತಿ ನೆಲಸದ ಹೊರತು ಚೀನಾದೊಂದಿಗಿನ ಒಪ್ಪಂದಕ್ಕೆ ಅರ್ಥವಿಲ್ಲ ಎಂದು ಭಾರತ ಪ್ರತಿಪಾದಿಸಿತ್ತು. </p>.<p>ಸೋಮವಾರ, ಚೀನಾದ ರಾಜತಾಂತ್ರಿಕರ ಪ್ರಶ್ನೆಗೆ ಉತ್ತರಿಸುವ ವೇಳೆ ಭಾರತದ ವಿದೇಶಾಂಗ ಸಚಿವ ಜೈಶಂಕರ್ ‘ವಾಸ್ತವ ನಿಯಂತ್ರಣ ರೇಖೆಯಲ್ಲಿ (ಎಲ್ಎಸಿ) ಹೆಚ್ಚು ಪಡೆಗಳನ್ನು ನಿಯೋಜಿಸದೇ ಇರುವುದು ಎರಡೂ ದೇಶಗಳ ಹಿತದೃಷ್ಟಿಯಿಂದ ಒಳ್ಳೆಯದು’ ಎಂದು ಹೇಳಿದ್ದರು.</p>.<p>‘ಸಮಾನ ಹಿತಾಸಕ್ತಿಗಾಗಿ ನಮ್ಮ ನಡುವೆ ಆಗಿರುವ ಒಪ್ಪಂದವನ್ನು ನಾವು ಗಮನಿಸಬೇಕಿದೆ. ಅದು ಕೇವಲ ನಮ್ಮ ಹಿತಾಸಕ್ತಿಗಾಗಿ ಮಾತ್ರವೇ ಆದದ್ದಲ್ಲ. ಚೀನಾದ ಹಿತಾಸಕ್ತಿಯೂ ಅದರಲ್ಲಿದೆ. ಕಳೆದ ನಾಲ್ಕು ವರ್ಷಗಳಿಂದ ಎರಡೂ ದೇಶಗಳು ಉದ್ವಿಗ್ನತೆ ಅನುಭವಿಸುತ್ತಿವೆ’ ಎಂದು ಜೈಶಂಕರ್ ಹೇಳಿದ್ದರು.</p>.<p>ಜೈಶಂಕರ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ವಾಂಗ್ ವೆನ್ಬಿನ್, ‘ದ್ವಿಪಕ್ಷೀಯ ಒಪ್ಪಂದದಲ್ಲಿ ಗಡಿ ಸಮಸ್ಯೆಯನ್ನು ಸೂಕ್ತವಾಗಿ ನಿರ್ವಹಿಸಬೇಕು’ ಎಂದು ಹೇಳಿದ್ದಾರೆ.</p>.<p>ಗಡಿಯಲ್ಲಿನ ವಿವಾದಕ್ಕೆ ಸಂಬಂಧಿಸಿದಂತೆ ತ್ವರಿತ ಒಪ್ಪಂದವು ಎರಡೂ ದೇಶಗಳ ಹಿತಾಸಕ್ತಿಗೆ ಪೂರಕ ಎಂದು ಚೀನಾ–ಭಾರತ ನಂಬಿರುವುದಾಗಿ ವಾಂಗ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀಜಿಂಗ್:</strong> ಚೀನಾ–ಭಾರತ ದ್ವಿಪಕ್ಷೀಯ ಒಪ್ಪಂದವು ಕೇವಲ ಎರಡು ದೇಶಗಳ ನಡುವಿನ ಗಡಿ ವಿವಾದಕ್ಕೆ ಮಾತ್ರ ಸಂಬಂಧಿಸಿದ್ದಲ್ಲ ಎಂದು ಚೀನಾ ಬುಧವಾರ ಪ್ರತಿಪಾದಿಸಿದೆ.</p>.<p>ಎರಡು ದೇಶಗಳ ನಡುವೆ ತಪ್ಪು ತಿಳಿವಳಿಕೆ ಮತ್ತು ತಪ್ಪು ನಿರ್ಣಯಗಳನ್ನು ಹೋಗಲಾಡಿಸಲು ಪರಸ್ಪರ ವಿಶ್ವಾಸವನ್ನು ಹೆಚ್ಚಿಸಬೇಕು ಎಂದು ಚೀನಾ ಕರೆ ನೀಡಿದೆ.</p>.<p>2020ರ ಜೂನ್ನಲ್ಲಿ ಗಾಲ್ವನ್ ಕಣಿವೆಯಲ್ಲಿ ಎರಡೂ ದೇಶಗಳ ನಡುವೆ ನಾಲ್ಕು ದಶಕಗಳಲ್ಲಿಯೇ ಗಂಭೀರವಾದ ಸೇನಾ ಸಂಘರ್ಷ ನಡೆದಿತ್ತು. ಅದರ ನಂತರ ಗಡಿಯಲ್ಲಿ ಶಾಂತಿ ನೆಲಸದ ಹೊರತು ಚೀನಾದೊಂದಿಗಿನ ಒಪ್ಪಂದಕ್ಕೆ ಅರ್ಥವಿಲ್ಲ ಎಂದು ಭಾರತ ಪ್ರತಿಪಾದಿಸಿತ್ತು. </p>.<p>ಸೋಮವಾರ, ಚೀನಾದ ರಾಜತಾಂತ್ರಿಕರ ಪ್ರಶ್ನೆಗೆ ಉತ್ತರಿಸುವ ವೇಳೆ ಭಾರತದ ವಿದೇಶಾಂಗ ಸಚಿವ ಜೈಶಂಕರ್ ‘ವಾಸ್ತವ ನಿಯಂತ್ರಣ ರೇಖೆಯಲ್ಲಿ (ಎಲ್ಎಸಿ) ಹೆಚ್ಚು ಪಡೆಗಳನ್ನು ನಿಯೋಜಿಸದೇ ಇರುವುದು ಎರಡೂ ದೇಶಗಳ ಹಿತದೃಷ್ಟಿಯಿಂದ ಒಳ್ಳೆಯದು’ ಎಂದು ಹೇಳಿದ್ದರು.</p>.<p>‘ಸಮಾನ ಹಿತಾಸಕ್ತಿಗಾಗಿ ನಮ್ಮ ನಡುವೆ ಆಗಿರುವ ಒಪ್ಪಂದವನ್ನು ನಾವು ಗಮನಿಸಬೇಕಿದೆ. ಅದು ಕೇವಲ ನಮ್ಮ ಹಿತಾಸಕ್ತಿಗಾಗಿ ಮಾತ್ರವೇ ಆದದ್ದಲ್ಲ. ಚೀನಾದ ಹಿತಾಸಕ್ತಿಯೂ ಅದರಲ್ಲಿದೆ. ಕಳೆದ ನಾಲ್ಕು ವರ್ಷಗಳಿಂದ ಎರಡೂ ದೇಶಗಳು ಉದ್ವಿಗ್ನತೆ ಅನುಭವಿಸುತ್ತಿವೆ’ ಎಂದು ಜೈಶಂಕರ್ ಹೇಳಿದ್ದರು.</p>.<p>ಜೈಶಂಕರ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ವಾಂಗ್ ವೆನ್ಬಿನ್, ‘ದ್ವಿಪಕ್ಷೀಯ ಒಪ್ಪಂದದಲ್ಲಿ ಗಡಿ ಸಮಸ್ಯೆಯನ್ನು ಸೂಕ್ತವಾಗಿ ನಿರ್ವಹಿಸಬೇಕು’ ಎಂದು ಹೇಳಿದ್ದಾರೆ.</p>.<p>ಗಡಿಯಲ್ಲಿನ ವಿವಾದಕ್ಕೆ ಸಂಬಂಧಿಸಿದಂತೆ ತ್ವರಿತ ಒಪ್ಪಂದವು ಎರಡೂ ದೇಶಗಳ ಹಿತಾಸಕ್ತಿಗೆ ಪೂರಕ ಎಂದು ಚೀನಾ–ಭಾರತ ನಂಬಿರುವುದಾಗಿ ವಾಂಗ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>