<p><strong>ಬೀಜಿಂಗ್:</strong> ಭಾರತ–ಪಾಕಿಸ್ತಾನ ನಡುವಣ ‘ಶಾಶ್ವತ ಕದನ ವಿರಾಮ’ ಸ್ಥಾಪನೆಯಲ್ಲಿ ದೇಶವು ರಚನಾತ್ಮಕ ಪಾತ್ರ ವಹಿಸಲಿದೆ ಎಂದು ಚೀನಾ ಸೋಮವಾರ ಹೇಳಿದೆ.</p>.<p>ಪಾಕಿಸ್ತಾನದ ಉಪ ಪ್ರಧಾನಿ ಮತ್ತು ವಿದೇಶಾಂಗ ಸಚಿವ ಮಹಮ್ಮದ್ ಇಶಾಕ್ ಡಾರ್ ಅವರು ಚೀನಾದ ಉನ್ನತ ರಾಜತಾಂತ್ರಿಕ ಅಧಿಕಾರಿ ವಾಂಗ್ ಯಿ ಅವರೊಂದಿಗೆ ಮಾತುಕತೆಗಾಗಿ ಬೀಜಿಂಗ್ಗೆ ಸೋಮವಾರ ಭೇಟಿ ನೀಡಿದ್ದು, ಈ ಸಂದರ್ಭದಲ್ಲಿ ಚೀನಾ ಈ ಹೇಳಿಕೆ ನೀಡಿದೆ.</p>.<p>ಭಾರತವು ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ಮೂಲಕ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿದ ನಂತರ, ಪಾಕಿಸ್ತಾನದ ಉನ್ನತ ಅಧಿಕಾರಿಯೊಬ್ಬರು ಇದೇ ಮೊದಲ ಬಾರಿಗೆ ಚೀನಾಗೆ ಬೇಟಿ ನೀಡಿದ್ದಾರೆ.</p>.<p>ಸಿಂಧೂ ಜಲ ಒಪ್ಪಂದವನ್ನು ಅಮಾನತಿನಲ್ಲಿರಿಸುವ ಭಾರತದ ನಿರ್ಧಾರ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಮಿತ್ರ ರಾಷ್ಟ್ರದೊಂದಿಗೆ ಡಾರ್ ಅವರು ಮಾತುಕತೆ ನಡೆಸುವ ನಿರೀಕ್ಷೆ ಇದೆ. </p>.<p>‘ಚೀನಾ, ಪಾಕಿಸ್ತಾನ ಎರಡೂ ಸರ್ವಋತು ಸಹಕಾರ ಕಾರ್ಯತಂತ್ರದ ಪಾಲುದಾರ ರಾಷ್ಟ್ರಗಳು. ಡಾರ್ ಅವರ ಈ ಭೇಟಿಯು ಉಭಯ ದೇಶಗಳ ಸಂಬಂಧ ವೃದ್ಧಿಗೆ ಪಾಕಿಸ್ತಾನ ಸರ್ಕಾರ ನೀಡಿರುವ ಮಹತ್ವವನ್ನು ಬಿಂಬಿಸುತ್ತದೆ’ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಮಾವೊ ನಿಂಗ್ ಸುದ್ದಿಗಾರರಿಗೆ ತಿಳಿಸಿದರು.</p>.<p>ಪ್ರಾದೇಶಿಕ ಶಾಂತಿ ಮತ್ತು ಸ್ಥಿರತೆಗಾಗಿ ಉಭಯ ದೇಶಗಳ ಜತೆ ಮಾತುಕತೆಗೆ ಚೀನಾ ಸಿದ್ಧವಿದೆ ಮತ್ತು ‘ಶಾಶ್ವತ ಕದನ ವಿರಾಮ’ ಒಪ್ಪಂದ ಮೂಡುವಂತೆ ಮಾಡುವಲ್ಲಿ ಚೀನಾ ರಚನಾತ್ಮಕ ಪಾತ್ರ ವಹಿಸಲಿದೆ ಎಂದು ಅವರು ಹೇಳಿದರು.</p>.<p>ಭಾರತ ಮತ್ತು ಪಾಕಿಸ್ತಾನ ಚೀನಾದ ಪ್ರಮುಖ ನೆರೆಯ ದೇಶಗಳು. ಈ ಎರಡೂ ದೇಶಗಳೊಂದಿಗೆ ಸಂಬಂಧ ವೃದ್ಧಿಗೆ ಚೀನಾ ಆದ್ಯತೆ ನೀಡುತ್ತದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀಜಿಂಗ್:</strong> ಭಾರತ–ಪಾಕಿಸ್ತಾನ ನಡುವಣ ‘ಶಾಶ್ವತ ಕದನ ವಿರಾಮ’ ಸ್ಥಾಪನೆಯಲ್ಲಿ ದೇಶವು ರಚನಾತ್ಮಕ ಪಾತ್ರ ವಹಿಸಲಿದೆ ಎಂದು ಚೀನಾ ಸೋಮವಾರ ಹೇಳಿದೆ.</p>.<p>ಪಾಕಿಸ್ತಾನದ ಉಪ ಪ್ರಧಾನಿ ಮತ್ತು ವಿದೇಶಾಂಗ ಸಚಿವ ಮಹಮ್ಮದ್ ಇಶಾಕ್ ಡಾರ್ ಅವರು ಚೀನಾದ ಉನ್ನತ ರಾಜತಾಂತ್ರಿಕ ಅಧಿಕಾರಿ ವಾಂಗ್ ಯಿ ಅವರೊಂದಿಗೆ ಮಾತುಕತೆಗಾಗಿ ಬೀಜಿಂಗ್ಗೆ ಸೋಮವಾರ ಭೇಟಿ ನೀಡಿದ್ದು, ಈ ಸಂದರ್ಭದಲ್ಲಿ ಚೀನಾ ಈ ಹೇಳಿಕೆ ನೀಡಿದೆ.</p>.<p>ಭಾರತವು ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ಮೂಲಕ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿದ ನಂತರ, ಪಾಕಿಸ್ತಾನದ ಉನ್ನತ ಅಧಿಕಾರಿಯೊಬ್ಬರು ಇದೇ ಮೊದಲ ಬಾರಿಗೆ ಚೀನಾಗೆ ಬೇಟಿ ನೀಡಿದ್ದಾರೆ.</p>.<p>ಸಿಂಧೂ ಜಲ ಒಪ್ಪಂದವನ್ನು ಅಮಾನತಿನಲ್ಲಿರಿಸುವ ಭಾರತದ ನಿರ್ಧಾರ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಮಿತ್ರ ರಾಷ್ಟ್ರದೊಂದಿಗೆ ಡಾರ್ ಅವರು ಮಾತುಕತೆ ನಡೆಸುವ ನಿರೀಕ್ಷೆ ಇದೆ. </p>.<p>‘ಚೀನಾ, ಪಾಕಿಸ್ತಾನ ಎರಡೂ ಸರ್ವಋತು ಸಹಕಾರ ಕಾರ್ಯತಂತ್ರದ ಪಾಲುದಾರ ರಾಷ್ಟ್ರಗಳು. ಡಾರ್ ಅವರ ಈ ಭೇಟಿಯು ಉಭಯ ದೇಶಗಳ ಸಂಬಂಧ ವೃದ್ಧಿಗೆ ಪಾಕಿಸ್ತಾನ ಸರ್ಕಾರ ನೀಡಿರುವ ಮಹತ್ವವನ್ನು ಬಿಂಬಿಸುತ್ತದೆ’ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಮಾವೊ ನಿಂಗ್ ಸುದ್ದಿಗಾರರಿಗೆ ತಿಳಿಸಿದರು.</p>.<p>ಪ್ರಾದೇಶಿಕ ಶಾಂತಿ ಮತ್ತು ಸ್ಥಿರತೆಗಾಗಿ ಉಭಯ ದೇಶಗಳ ಜತೆ ಮಾತುಕತೆಗೆ ಚೀನಾ ಸಿದ್ಧವಿದೆ ಮತ್ತು ‘ಶಾಶ್ವತ ಕದನ ವಿರಾಮ’ ಒಪ್ಪಂದ ಮೂಡುವಂತೆ ಮಾಡುವಲ್ಲಿ ಚೀನಾ ರಚನಾತ್ಮಕ ಪಾತ್ರ ವಹಿಸಲಿದೆ ಎಂದು ಅವರು ಹೇಳಿದರು.</p>.<p>ಭಾರತ ಮತ್ತು ಪಾಕಿಸ್ತಾನ ಚೀನಾದ ಪ್ರಮುಖ ನೆರೆಯ ದೇಶಗಳು. ಈ ಎರಡೂ ದೇಶಗಳೊಂದಿಗೆ ಸಂಬಂಧ ವೃದ್ಧಿಗೆ ಚೀನಾ ಆದ್ಯತೆ ನೀಡುತ್ತದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>