<p><strong>ಕಠ್ಮಂಡು:</strong> ‘ತಂತ್ರಜ್ಞಾನದ ಕ್ಷಿಪ್ರ ವಿಕಾಸದ ನಡುವೆ ಮಕ್ಕಳನ್ನು ಒಳಗೊಂಡಂತೆ ಹೆಚ್ಚುತ್ತಿರುವ ಸೈಬರ್ ಅಪರಾಧಗಳನ್ನು ನಿಭಾಯಿಸಲು ಅಂತರರಾಷ್ಟ್ರೀಯ ಸಹಕಾರ ಅಗತ್ಯ. ವಿವಿಧ ದೇಶಗಳಲ್ಲಿನ ಅತ್ಯುತ್ತಮ ನ್ಯಾಯದಾನ ವಿಧಾನಗಳನ್ನು ಬಾಲನ್ಯಾಯ ವ್ಯವಸ್ಥೆಯಲ್ಲಿ ಅಳವಡಿಸಿಕೊಳ್ಳಬೇಕಿದೆ’ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಹೇಳಿದರು.</p>.<p>ನೇಪಾಳದ ಮುಖ್ಯ ನ್ಯಾಯಮೂರ್ತಿ ಬಿಶ್ವಂಬರಪ್ರಸಾದ್ ಶ್ರೇಷ್ಠ ಅವರ ಆಹ್ವಾನದ ಮೇರೆಗೆ ಮೂರು ದಿನಗಳ ಪ್ರವಾಸ ಕೈಗೊಂಡಿರುವ ಅವರು, ಶನಿವಾರ ಹಮ್ಮಿಕೊಂಡಿದ್ದ ಬಾಲನ್ಯಾಯ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ದೇಶಿಸಿ ಮಾತನಾಡಿದರು.</p>.<p>‘ಬಾಲನ್ಯಾಯದ ಕುರಿತಂತೆ ಚರ್ಚಿಸುವಾಗ, ಕಾನೂನು ಸಂಘರ್ಷದಲ್ಲಿ ಸಿಲುಕಿದ ಮಕ್ಕಳ ದೌರ್ಬಲ್ಯ ಮತ್ತು ವಿಶಿಷ್ಟ ಅಗತ್ಯತೆಗಳನ್ನು ನಾವು ಗುರುತಿಸಬೇಕು. ನಮ್ಮ ನ್ಯಾಯ ವ್ಯವಸ್ಥೆಯು ಸಹಾನುಭೂತಿ, ಪುನರ್ವಸತಿ ಮತ್ತು ಸಮಾಜದ ಮುಖ್ಯವಾಹಿನಿಗೆ ಸೇರುವುದನ್ನು ಖಾತರಿಪಡಿಸಿಕೊಳ್ಳಬೇಕು’ ಎಂದರು.</p>.<p>‘ತಂತ್ರಜ್ಞಾನವು ವೇಗವಾಗಿ ಬೆಳೆಯುತ್ತಿರುವುದರಿಂದ ಬಾಲಾಪರಾಧಿಗಳು ಹ್ಯಾಕಿಂಗ್, ಸೈಬರ್ ಬೆದರಿಕೆ, ಆನ್ಲೈನ್ ವಂಚನೆ ಮತ್ತು ಡಿಜಿಟಲ್ ಕಿರುಕುಳದಂತಹ ಸೈಬರ್ ಅಪರಾಧಗಳಿಗೆ ಒಳಗಾಗುತ್ತಿದ್ದಾರೆ’ ಎಂದು ಚಂದ್ರಚೂಡ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಠ್ಮಂಡು:</strong> ‘ತಂತ್ರಜ್ಞಾನದ ಕ್ಷಿಪ್ರ ವಿಕಾಸದ ನಡುವೆ ಮಕ್ಕಳನ್ನು ಒಳಗೊಂಡಂತೆ ಹೆಚ್ಚುತ್ತಿರುವ ಸೈಬರ್ ಅಪರಾಧಗಳನ್ನು ನಿಭಾಯಿಸಲು ಅಂತರರಾಷ್ಟ್ರೀಯ ಸಹಕಾರ ಅಗತ್ಯ. ವಿವಿಧ ದೇಶಗಳಲ್ಲಿನ ಅತ್ಯುತ್ತಮ ನ್ಯಾಯದಾನ ವಿಧಾನಗಳನ್ನು ಬಾಲನ್ಯಾಯ ವ್ಯವಸ್ಥೆಯಲ್ಲಿ ಅಳವಡಿಸಿಕೊಳ್ಳಬೇಕಿದೆ’ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಹೇಳಿದರು.</p>.<p>ನೇಪಾಳದ ಮುಖ್ಯ ನ್ಯಾಯಮೂರ್ತಿ ಬಿಶ್ವಂಬರಪ್ರಸಾದ್ ಶ್ರೇಷ್ಠ ಅವರ ಆಹ್ವಾನದ ಮೇರೆಗೆ ಮೂರು ದಿನಗಳ ಪ್ರವಾಸ ಕೈಗೊಂಡಿರುವ ಅವರು, ಶನಿವಾರ ಹಮ್ಮಿಕೊಂಡಿದ್ದ ಬಾಲನ್ಯಾಯ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ದೇಶಿಸಿ ಮಾತನಾಡಿದರು.</p>.<p>‘ಬಾಲನ್ಯಾಯದ ಕುರಿತಂತೆ ಚರ್ಚಿಸುವಾಗ, ಕಾನೂನು ಸಂಘರ್ಷದಲ್ಲಿ ಸಿಲುಕಿದ ಮಕ್ಕಳ ದೌರ್ಬಲ್ಯ ಮತ್ತು ವಿಶಿಷ್ಟ ಅಗತ್ಯತೆಗಳನ್ನು ನಾವು ಗುರುತಿಸಬೇಕು. ನಮ್ಮ ನ್ಯಾಯ ವ್ಯವಸ್ಥೆಯು ಸಹಾನುಭೂತಿ, ಪುನರ್ವಸತಿ ಮತ್ತು ಸಮಾಜದ ಮುಖ್ಯವಾಹಿನಿಗೆ ಸೇರುವುದನ್ನು ಖಾತರಿಪಡಿಸಿಕೊಳ್ಳಬೇಕು’ ಎಂದರು.</p>.<p>‘ತಂತ್ರಜ್ಞಾನವು ವೇಗವಾಗಿ ಬೆಳೆಯುತ್ತಿರುವುದರಿಂದ ಬಾಲಾಪರಾಧಿಗಳು ಹ್ಯಾಕಿಂಗ್, ಸೈಬರ್ ಬೆದರಿಕೆ, ಆನ್ಲೈನ್ ವಂಚನೆ ಮತ್ತು ಡಿಜಿಟಲ್ ಕಿರುಕುಳದಂತಹ ಸೈಬರ್ ಅಪರಾಧಗಳಿಗೆ ಒಳಗಾಗುತ್ತಿದ್ದಾರೆ’ ಎಂದು ಚಂದ್ರಚೂಡ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>