<p><strong>ವಿಶ್ವಸಂಸ್ಥೆ (ಜಿನೀವಾ)(ಪಿಟಿಐ):</strong> ಭಾರತದಲ್ಲಿ ಅಲ್ಪಸಂಖ್ಯಾತ ಸಮುದಾಯಗಳ ಹಕ್ಕುಗಳನ್ನು ಎತ್ತಿಹಿಡಿಯುವ ಪ್ರಯತ್ನಗಳನ್ನು ದ್ವಿಗುಣಗೊಳಿಸುವ ಅಗತ್ಯ ಇದೆ ಎಂದು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಹೈಕಮಿಷನರ್ ವೋಲ್ಕರ್ ಟರ್ಕ್ ಸೋಮವಾರ ಅಭಿಪ್ರಾಯಪಟ್ಟಿದ್ದಾರೆ. </p>.<p>ಜಿನೀವಾದಲ್ಲಿ ನಡೆದ ಮಾನವ ಹಕ್ಕುಗಳ ಮಂಡಳಿಯ 54ನೇ ಅಧಿವೇಶನದಲ್ಲಿ ಮಾತನಾಡಿದ ಟರ್ಕ್, ‘ಅಲ್ಪಸಂಖ್ಯಾತ ಸಮುದಾಯಗಳು ಹಿಂಸಾಚಾರ, ತಾರತಮ್ಯಕ್ಕೆ ಗುರಿಯಾಗುತ್ತಿರುವ ಬಗ್ಗೆ ಭಾರತದಲ್ಲಿರುವ ನಮ್ಮ ಕಚೇರಿಗೆ ಆಗಾಗ್ಗೆ ಮಾಹಿತಿ ಬರುತ್ತಲೇ ಇರುತ್ತದೆ’ ಎಂದು ಹೇಳಿದ್ದಾರೆ. </p>.<p>‘ಉತ್ತರ ಭಾರತದಲ್ಲಿ ಮುಸ್ಲಿಮರು ಆಗಾಗ್ಗೆ ದಾಳಿಗಳಿಗೆ ಗುರಿಯಾಗುತ್ತಿರುತ್ತಾರೆ. ಇತ್ತೀಚೆಗೆ ಹರಿಯಾಣ ಮತ್ತು ಗುರುಗ್ರಾಮ್ದಲ್ಲಿ ಅಂತಹದ್ದೇ ದಾಳಿ ನಡೆದಿದೆ. ಮಣಿಪುರದಲ್ಲಿ ಇತರ ಸಮುದಾಯಗಳು ಮೇ ತಿಂಗಳಿನಿಂದ ಹಿಂಸೆಗೆ ಗುರಿಯಾಗಿವೆ. ಅಭದ್ರತೆ ಎದುರಿಸುತ್ತಿವೆ’ ಎಂದರು. </p>.<p>‘ಅಸಹಿಷ್ಣುತೆ, ದ್ವೇಷ ಭಾಷಣ, ಧಾರ್ಮಿಕ ಮೂಲಭೂತವಾದ ಮತ್ತು ತಾರತಮ್ಯವನ್ನು ಹತ್ತಿಕ್ಕಬೇಕು. ಈ ಮೂಲಕ ಅಲ್ಪಸಂಖ್ಯಾತರ ಹಕ್ಕುಗಳನ್ನು ರಕ್ಷಿಸುವ ಪ್ರಯತ್ನಗಳನ್ನು ದ್ವಿಗುಣಗೊಳಿಸುವ ಅಗತ್ಯತೆ ಭಾರತದಲ್ಲಿ ಕಾಣಿಸುತ್ತಿದೆ’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಶ್ವಸಂಸ್ಥೆ (ಜಿನೀವಾ)(ಪಿಟಿಐ):</strong> ಭಾರತದಲ್ಲಿ ಅಲ್ಪಸಂಖ್ಯಾತ ಸಮುದಾಯಗಳ ಹಕ್ಕುಗಳನ್ನು ಎತ್ತಿಹಿಡಿಯುವ ಪ್ರಯತ್ನಗಳನ್ನು ದ್ವಿಗುಣಗೊಳಿಸುವ ಅಗತ್ಯ ಇದೆ ಎಂದು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಹೈಕಮಿಷನರ್ ವೋಲ್ಕರ್ ಟರ್ಕ್ ಸೋಮವಾರ ಅಭಿಪ್ರಾಯಪಟ್ಟಿದ್ದಾರೆ. </p>.<p>ಜಿನೀವಾದಲ್ಲಿ ನಡೆದ ಮಾನವ ಹಕ್ಕುಗಳ ಮಂಡಳಿಯ 54ನೇ ಅಧಿವೇಶನದಲ್ಲಿ ಮಾತನಾಡಿದ ಟರ್ಕ್, ‘ಅಲ್ಪಸಂಖ್ಯಾತ ಸಮುದಾಯಗಳು ಹಿಂಸಾಚಾರ, ತಾರತಮ್ಯಕ್ಕೆ ಗುರಿಯಾಗುತ್ತಿರುವ ಬಗ್ಗೆ ಭಾರತದಲ್ಲಿರುವ ನಮ್ಮ ಕಚೇರಿಗೆ ಆಗಾಗ್ಗೆ ಮಾಹಿತಿ ಬರುತ್ತಲೇ ಇರುತ್ತದೆ’ ಎಂದು ಹೇಳಿದ್ದಾರೆ. </p>.<p>‘ಉತ್ತರ ಭಾರತದಲ್ಲಿ ಮುಸ್ಲಿಮರು ಆಗಾಗ್ಗೆ ದಾಳಿಗಳಿಗೆ ಗುರಿಯಾಗುತ್ತಿರುತ್ತಾರೆ. ಇತ್ತೀಚೆಗೆ ಹರಿಯಾಣ ಮತ್ತು ಗುರುಗ್ರಾಮ್ದಲ್ಲಿ ಅಂತಹದ್ದೇ ದಾಳಿ ನಡೆದಿದೆ. ಮಣಿಪುರದಲ್ಲಿ ಇತರ ಸಮುದಾಯಗಳು ಮೇ ತಿಂಗಳಿನಿಂದ ಹಿಂಸೆಗೆ ಗುರಿಯಾಗಿವೆ. ಅಭದ್ರತೆ ಎದುರಿಸುತ್ತಿವೆ’ ಎಂದರು. </p>.<p>‘ಅಸಹಿಷ್ಣುತೆ, ದ್ವೇಷ ಭಾಷಣ, ಧಾರ್ಮಿಕ ಮೂಲಭೂತವಾದ ಮತ್ತು ತಾರತಮ್ಯವನ್ನು ಹತ್ತಿಕ್ಕಬೇಕು. ಈ ಮೂಲಕ ಅಲ್ಪಸಂಖ್ಯಾತರ ಹಕ್ಕುಗಳನ್ನು ರಕ್ಷಿಸುವ ಪ್ರಯತ್ನಗಳನ್ನು ದ್ವಿಗುಣಗೊಳಿಸುವ ಅಗತ್ಯತೆ ಭಾರತದಲ್ಲಿ ಕಾಣಿಸುತ್ತಿದೆ’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>