<p class="title"><strong>ಮಾಸ್ಕೊ</strong>: ರಷ್ಯಾದ ಸೈಬೆರಿಯಾದಲ್ಲಿರುವ ಕಲ್ಲಿದ್ದಲು ಗಣಿಯಲ್ಲಿ ಗುರುವಾರ ಸಂಭವಿಸಿದ ಅಗ್ನಿ ಅವಘಡದಲ್ಲಿ 11 ಮಂದಿ ಮೃತಪಟ್ಟಿದ್ದು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.ಗಣಿಯಲ್ಲಿ 12ಕ್ಕೂ ಹೆಚ್ಚು ಮಂದಿ ಸಿಲುಕಿದ್ದಾರೆ.</p>.<p class="title">ಸೈಬೆರಿಯಾದ ಕೆಮೆರೊವೊ ವಲಯದಲ್ಲಿನ ಗಣಿಯಲ್ಲಿ ಅವಘಡ ಸಂಭವಿಸಿದೆ. ಕಲ್ಲಿದ್ದಲು ದೂಳಿಗೆ ಬೆಂಕಿ ಹೊತ್ತಿಕೊಂಡಿದ್ದು, ದಟ್ಟ ಹೊಗೆ ವ್ಯಾಪಿಸಿದೆ ಎಂದು ಸರ್ಕಾರಿ ಮಾಧ್ಯಮ ಟಾಸ್ ನ್ಯೂಸ್ ಏಜೆನ್ಸಿ ವರದಿ ಮಾಡಿದೆ.</p>.<p class="title">ಅವಘಡ ಸಂಭವಿಸಿದಾಗ ಸುಮಾರು 285 ಮಂದಿ ಕಾರ್ಯ ನಿರ್ವಹಿಸುತ್ತಿದ್ದರು. ಇವರಲ್ಲಿ 239 ಜನರನ್ನು ರಕ್ಷಿಸಲಾಗಿದೆ. ಹಲವರು ಸಿಲುಕಿದ್ದಾರೆ. 43 ಜನರು ಗಾಯಗೊಂಡಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ವರದಿ ತಿಳಿಸಿದೆ.</p>.<p>ರಷ್ಯಾ ವಿಕೋಪ ತುರ್ತುಸ್ಥಿತಿಯ ಪ್ರಭಾರ ಸಚಿವ ಅಲೆಕ್ಸಾಂಡರ್ ಚುಪ್ರಿಯನ್, ‘ರಕ್ಷಣಾ ಕಾರ್ಯ ಪ್ರಗತಿಯಲ್ಲಿದೆ. ದಟ್ಟ ಹೊಗೆಯಿಂದಾಗಿ ವಿಳಂಬವಾಗಿದೆ. ಸುರಕ್ಷತಾ ಕ್ರಮ ಪಾಲಿಸಿರಲಿಲ್ಲ. ನಿಯಮ ಉಲ್ಲಂಘನೆ ಎಂಬ ಬಗ್ಗೆ ತನಿಖೆ ಆರಂಭವಾಗಿದೆ’ ಎಂದರು.</p>.<p>‘ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು, ಮೃತರಿಗೆ ಸಂತಾಪ ವ್ಯಕ್ತಪಡಿಸಿದ್ದು, ಗಾಯಾಳುಗಳ ಚಿಕಿತ್ಸೆಗೆ ಅಗತ್ಯ ನೆರವು ನೀಡುವ ಭರವಸೆ ನೀಡಿದ್ದಾರೆ’ ಎಂದು ಅವರ ವಕ್ತಾರ ಮಿಟ್ರಿ ಪೆಸ್ಕೊ ತಿಳಿಸಿದರು.</p>.<p>2016ರಲ್ಲಿ ನಡೆದಿದ್ದ ಅವಘಡದಲ್ಲಿ 36 ಜನ ಸತ್ತಿದ್ದರು. ಆಗ ದೇಶದ ಗಣಿಗಳಲ್ಲಿನ ಸುರಕ್ಷತೆ ಕ್ರಮಗಳ ಬಗ್ಗೆ ಸಮೀಕ್ಷೆ ನಡೆಸಿದ್ದ ಸರ್ಕಾರ, 20 ಗಣಿಗಳು ಅಸುರಕ್ಷಿತವಾಗಿವೆ ಎಂದು ಘೋಷಿಸಿತ್ತು. ಈಗ ಅವಘಡ ಸಂಭವಿಸಿರುವ ಗಣಿ ಆ ಪಟ್ಟಿಯಲ್ಲಿ ಸೇರಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಮಾಸ್ಕೊ</strong>: ರಷ್ಯಾದ ಸೈಬೆರಿಯಾದಲ್ಲಿರುವ ಕಲ್ಲಿದ್ದಲು ಗಣಿಯಲ್ಲಿ ಗುರುವಾರ ಸಂಭವಿಸಿದ ಅಗ್ನಿ ಅವಘಡದಲ್ಲಿ 11 ಮಂದಿ ಮೃತಪಟ್ಟಿದ್ದು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.ಗಣಿಯಲ್ಲಿ 12ಕ್ಕೂ ಹೆಚ್ಚು ಮಂದಿ ಸಿಲುಕಿದ್ದಾರೆ.</p>.<p class="title">ಸೈಬೆರಿಯಾದ ಕೆಮೆರೊವೊ ವಲಯದಲ್ಲಿನ ಗಣಿಯಲ್ಲಿ ಅವಘಡ ಸಂಭವಿಸಿದೆ. ಕಲ್ಲಿದ್ದಲು ದೂಳಿಗೆ ಬೆಂಕಿ ಹೊತ್ತಿಕೊಂಡಿದ್ದು, ದಟ್ಟ ಹೊಗೆ ವ್ಯಾಪಿಸಿದೆ ಎಂದು ಸರ್ಕಾರಿ ಮಾಧ್ಯಮ ಟಾಸ್ ನ್ಯೂಸ್ ಏಜೆನ್ಸಿ ವರದಿ ಮಾಡಿದೆ.</p>.<p class="title">ಅವಘಡ ಸಂಭವಿಸಿದಾಗ ಸುಮಾರು 285 ಮಂದಿ ಕಾರ್ಯ ನಿರ್ವಹಿಸುತ್ತಿದ್ದರು. ಇವರಲ್ಲಿ 239 ಜನರನ್ನು ರಕ್ಷಿಸಲಾಗಿದೆ. ಹಲವರು ಸಿಲುಕಿದ್ದಾರೆ. 43 ಜನರು ಗಾಯಗೊಂಡಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ವರದಿ ತಿಳಿಸಿದೆ.</p>.<p>ರಷ್ಯಾ ವಿಕೋಪ ತುರ್ತುಸ್ಥಿತಿಯ ಪ್ರಭಾರ ಸಚಿವ ಅಲೆಕ್ಸಾಂಡರ್ ಚುಪ್ರಿಯನ್, ‘ರಕ್ಷಣಾ ಕಾರ್ಯ ಪ್ರಗತಿಯಲ್ಲಿದೆ. ದಟ್ಟ ಹೊಗೆಯಿಂದಾಗಿ ವಿಳಂಬವಾಗಿದೆ. ಸುರಕ್ಷತಾ ಕ್ರಮ ಪಾಲಿಸಿರಲಿಲ್ಲ. ನಿಯಮ ಉಲ್ಲಂಘನೆ ಎಂಬ ಬಗ್ಗೆ ತನಿಖೆ ಆರಂಭವಾಗಿದೆ’ ಎಂದರು.</p>.<p>‘ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು, ಮೃತರಿಗೆ ಸಂತಾಪ ವ್ಯಕ್ತಪಡಿಸಿದ್ದು, ಗಾಯಾಳುಗಳ ಚಿಕಿತ್ಸೆಗೆ ಅಗತ್ಯ ನೆರವು ನೀಡುವ ಭರವಸೆ ನೀಡಿದ್ದಾರೆ’ ಎಂದು ಅವರ ವಕ್ತಾರ ಮಿಟ್ರಿ ಪೆಸ್ಕೊ ತಿಳಿಸಿದರು.</p>.<p>2016ರಲ್ಲಿ ನಡೆದಿದ್ದ ಅವಘಡದಲ್ಲಿ 36 ಜನ ಸತ್ತಿದ್ದರು. ಆಗ ದೇಶದ ಗಣಿಗಳಲ್ಲಿನ ಸುರಕ್ಷತೆ ಕ್ರಮಗಳ ಬಗ್ಗೆ ಸಮೀಕ್ಷೆ ನಡೆಸಿದ್ದ ಸರ್ಕಾರ, 20 ಗಣಿಗಳು ಅಸುರಕ್ಷಿತವಾಗಿವೆ ಎಂದು ಘೋಷಿಸಿತ್ತು. ಈಗ ಅವಘಡ ಸಂಭವಿಸಿರುವ ಗಣಿ ಆ ಪಟ್ಟಿಯಲ್ಲಿ ಸೇರಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>