<p><strong>ವಾಷಿಂಗ್ಟನ್: </strong>ಕ್ಯಾಲಿಫೋರ್ನಿಯಾದಲ್ಲಿ ಮಹಾತ್ಮ ಗಾಂಧೀಜಿ ಅವರ ಪ್ರತಿಮೆಯನ್ನು ಹಾನಿಗೊಳಿಸಿರುವ ಪ್ರಕರಣವನ್ನು ಎಫ್ಬಿಐ ತನಿಖೆಗೆ ಹಸ್ತಾಂತರಿಸಬೇಕು ಎಂದು ಭಾರತೀಯ ಮೂಲದ ಅಮೆರಿಕನ್ ಸಂಸದರು ಮಂಗಳವಾರ ಒತ್ತಾಯಿಸಿದ್ದಾರೆ.</p>.<p>ಕಳೆದ ವಾರ ಅಪರಿಚಿತ ವ್ಯಕ್ತಿಗಳು ಡೇವಿಸ್ನ ಸೆಂಟ್ರಲ್ ಪಾರ್ಕ್ನಲ್ಲಿದ್ದ ಮಹಾತ್ಮ ಗಾಂಧೀಜಿ ಅವರ ಕಂಚಿನ ಪ್ರತಿಮೆಗೆ ಹಾನಿ ಉಂಟು ಮಾಡಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿರುವ ನಗರ ಪೊಲೀಸರು, ತನಿಖೆಯನ್ನು ಆರಂಭಿಸಿದ್ದಾರೆ.</p>.<p>‘ನಾನು ಈ ದುರುದ್ದೇಶಪೂರಿತ ಕೃತ್ಯವನ್ನು ಖಂಡಿಸುತ್ತೇನೆ. ಭಾರತೀಯ ಅಮೆರಿಕನ್ನರನ್ನು ಬೆದರಿಸುವ ಉದ್ದೇಶದಿಂದ ಈ ಕೃತ್ಯವೆಸಗಲಾಗಿದೆ. ಈ ಪ್ರಕರಣವನ್ನು ಎಫ್ಬಿಐ ತನಿಖೆಗೆ ನೀಡಬೇಕು’ ಎಂದು ಸಂಸದರಾಜಾ ಕೃಷ್ಣಮೂರ್ತಿ ಅವರು ಆಗ್ರಹಿಸಿದ್ದಾರೆ.</p>.<p>'ವಿಶ್ವಕ್ಕೆ ಶಾಂತಿ ಮತ್ತು ಅಹಿಂಸೆಯ ಮಾರ್ಗದಲ್ಲಿ ನಡೆಯುವಂತೆ ಪ್ರೇರಣೆ ನೀಡಿದ ಗಾಂಧೀಜಿ ಅವರ ಪ್ರತಿಮೆಗೆ ಹಾನಿಯನ್ನುಂಟು ಮಾಡಲಾಗಿದೆ’ ಎಂದು ಅವರು ಹೇಳಿದರು.</p>.<p>ಈ ಕೃತ್ಯವನ್ನು ಖಂಡಿಸಿರುವ ಸಂಸದ ಅಮಿ ಬೆರಾ ಅವರು,‘ಡಾ.ಮಾರ್ಟಿನ್ ಲೂಥರ್ ಕಿಂಗ್ ಜೂನಿಯರ್ ಮತ್ತು ಮಹಾತ್ಮ ಗಾಂಧೀಜಿಯವರಂತಹ ನಾಯಕರು, ಶಾಂತಿ ಮತ್ತು ಅಹಿಂಸಾ ಮಾರ್ಗದ ಮೂಲಕ ಪ್ರತಿಭಟನೆ ನಡೆಸಬಹುದು ಎಂಬುದನ್ನು ತೋರಿಸಿಕೊಟ್ಟಿದ್ದರು’ ಎಂದರು.</p>.<p>‘ವೈವಿಧ್ಯತೆಯೇ ನಮ್ಮ ದೇಶದ ಶಕ್ತಿ. ಏನೇ ಮನಸ್ತಾಪಗಳಿದ್ದರೂ ಅದನ್ನು ಶಾಂತಿಯುತವಾಗಿ, ಅಹಿಂಸಾ ಮಾರ್ಗದಲ್ಲಿ ಬಗೆಹರಿಸಬೇಕು. ಈ ರೀತಿ ಆಸ್ತಿಗಳಿಗೆ ಹಾನಿಯನ್ನುಂಟು ಮಾಡುವುದು ಸರಿಯಲ್ಲ’ ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಾಷಿಂಗ್ಟನ್: </strong>ಕ್ಯಾಲಿಫೋರ್ನಿಯಾದಲ್ಲಿ ಮಹಾತ್ಮ ಗಾಂಧೀಜಿ ಅವರ ಪ್ರತಿಮೆಯನ್ನು ಹಾನಿಗೊಳಿಸಿರುವ ಪ್ರಕರಣವನ್ನು ಎಫ್ಬಿಐ ತನಿಖೆಗೆ ಹಸ್ತಾಂತರಿಸಬೇಕು ಎಂದು ಭಾರತೀಯ ಮೂಲದ ಅಮೆರಿಕನ್ ಸಂಸದರು ಮಂಗಳವಾರ ಒತ್ತಾಯಿಸಿದ್ದಾರೆ.</p>.<p>ಕಳೆದ ವಾರ ಅಪರಿಚಿತ ವ್ಯಕ್ತಿಗಳು ಡೇವಿಸ್ನ ಸೆಂಟ್ರಲ್ ಪಾರ್ಕ್ನಲ್ಲಿದ್ದ ಮಹಾತ್ಮ ಗಾಂಧೀಜಿ ಅವರ ಕಂಚಿನ ಪ್ರತಿಮೆಗೆ ಹಾನಿ ಉಂಟು ಮಾಡಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿರುವ ನಗರ ಪೊಲೀಸರು, ತನಿಖೆಯನ್ನು ಆರಂಭಿಸಿದ್ದಾರೆ.</p>.<p>‘ನಾನು ಈ ದುರುದ್ದೇಶಪೂರಿತ ಕೃತ್ಯವನ್ನು ಖಂಡಿಸುತ್ತೇನೆ. ಭಾರತೀಯ ಅಮೆರಿಕನ್ನರನ್ನು ಬೆದರಿಸುವ ಉದ್ದೇಶದಿಂದ ಈ ಕೃತ್ಯವೆಸಗಲಾಗಿದೆ. ಈ ಪ್ರಕರಣವನ್ನು ಎಫ್ಬಿಐ ತನಿಖೆಗೆ ನೀಡಬೇಕು’ ಎಂದು ಸಂಸದರಾಜಾ ಕೃಷ್ಣಮೂರ್ತಿ ಅವರು ಆಗ್ರಹಿಸಿದ್ದಾರೆ.</p>.<p>'ವಿಶ್ವಕ್ಕೆ ಶಾಂತಿ ಮತ್ತು ಅಹಿಂಸೆಯ ಮಾರ್ಗದಲ್ಲಿ ನಡೆಯುವಂತೆ ಪ್ರೇರಣೆ ನೀಡಿದ ಗಾಂಧೀಜಿ ಅವರ ಪ್ರತಿಮೆಗೆ ಹಾನಿಯನ್ನುಂಟು ಮಾಡಲಾಗಿದೆ’ ಎಂದು ಅವರು ಹೇಳಿದರು.</p>.<p>ಈ ಕೃತ್ಯವನ್ನು ಖಂಡಿಸಿರುವ ಸಂಸದ ಅಮಿ ಬೆರಾ ಅವರು,‘ಡಾ.ಮಾರ್ಟಿನ್ ಲೂಥರ್ ಕಿಂಗ್ ಜೂನಿಯರ್ ಮತ್ತು ಮಹಾತ್ಮ ಗಾಂಧೀಜಿಯವರಂತಹ ನಾಯಕರು, ಶಾಂತಿ ಮತ್ತು ಅಹಿಂಸಾ ಮಾರ್ಗದ ಮೂಲಕ ಪ್ರತಿಭಟನೆ ನಡೆಸಬಹುದು ಎಂಬುದನ್ನು ತೋರಿಸಿಕೊಟ್ಟಿದ್ದರು’ ಎಂದರು.</p>.<p>‘ವೈವಿಧ್ಯತೆಯೇ ನಮ್ಮ ದೇಶದ ಶಕ್ತಿ. ಏನೇ ಮನಸ್ತಾಪಗಳಿದ್ದರೂ ಅದನ್ನು ಶಾಂತಿಯುತವಾಗಿ, ಅಹಿಂಸಾ ಮಾರ್ಗದಲ್ಲಿ ಬಗೆಹರಿಸಬೇಕು. ಈ ರೀತಿ ಆಸ್ತಿಗಳಿಗೆ ಹಾನಿಯನ್ನುಂಟು ಮಾಡುವುದು ಸರಿಯಲ್ಲ’ ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>