ನಾಲ್ಕು ದಿನಗಳ ವಿಯೆಟ್ನಾಂ ಪ್ರವಾಸಕ್ಕೆ ಭಾನುವಾರ ಇಲ್ಲಿಗೆ ಬಂದಿರುವ ಅವರು, ಹಿಂದೂ ಮಹಾಸಾಗರ–ಪೆಸಿಫಿಕ್ ವಿಚಾರದ ಕುರಿತು ವಿಯೆಟ್ನಾಂನ ರಾಜತಾಂತ್ರಿಕ ಅಕಾಡೆಮಿಯಲ್ಲಿ ಭಾಷಣ ಮಾಡಿದರು. ಇದಕ್ಕೂ ಮುನ್ನ ಜೈಶಂಕರ್ ಅವರು ವಿಯೆಟ್ನಾಂ ವಿದೇಶಾಂಗ ಸಚಿವ ಬುಯಿ ಥನ್ಹಾ ಸನ್ ಅವರನ್ನು ಭೇಟಿ ಮಾಡಿ, ವಾಣಿಜ್ಯ, ಇಂಧನ, ರಕ್ಷಣೆ ಮತ್ತು ಕಡಲ ತೀರದ ಭದ್ರತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಚರ್ಚೆ ನಡೆಸಿದರು.