<p><strong>ವಿಶ್ವಸಂಸ್ಥೆ: </strong>ಕೊರೊನಾ ಸೋಂಕಿನ ದೀರ್ಘಕಾಲೀನ ಪ್ರಭಾವದಿಂದ 2030ರ ವೇಳೆಗೆ ಹೆಚ್ಚುವರಿಯಾಗಿ 20.7 ಕೋಟಿ ಜನರನ್ನು ತೀವ್ರ ಬಡತನಕ್ಕೆ ತಳ್ಳಬಹುದು. ಈ ಮೂಲಕ ವಿಶ್ವದ ಅತ್ಯಂತ ಬಡವರ ಸಂಖ್ಯೆ ಒಂದು ಶತಕೋಟಿಗೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ವಿಶ್ವಸಂಸ್ಥೆ ಅಭಿವೃದ್ಧಿ ಕಾರ್ಯಕ್ರಮದ(ಯುನ್ಡಿಪಿ) ಹೊಸ ಅಧ್ಯಯನವೊಂದರಲ್ಲಿ ತಿಳಿದುಬಂದಿದೆ.</p>.<p>ಮುಂದಿನ ದಶಕದಲ್ಲಿ ಸಾಂಕ್ರಾಮಿಕ ರೋಗದ ಬಹು ಆಯಾಮದ ಪರಿಣಾಮಗಳನ್ನು ಅಧ್ಯಯನ ಮಾಡಲಾಗಿದೆ. ಈ ಅಧ್ಯಯನವನ್ನು ಯುಎನ್ಡಿಪಿ ಮತ್ತು ಡೆನ್ವರ್ ವಿಶ್ವವಿದ್ಯಾಲಯದ ’ಪಾರ್ಡಿ ಸೆಂಟರ್ ಫಾರ್ ಇಂಟರ್ನ್ಯಾಷನಲ್ ಫ್ಯೂಚರ್ಸ್’ ಸಹಭಾಗಿತ್ವದಲ್ಲಿ ಕೈಗೊಳ್ಳಲಾಗಿದೆ.</p>.<p>ಕೋವಿಡ್ನಿಂದಾಗಿ ಉಂಟಾಗಿರುವ ಶೇಕಡ 80 ರಷ್ಟು ಆರ್ಥಿಕ ಬಿಕ್ಕಟ್ಟು 10 ವರ್ಷಗಳ ಕಾಲ ಮುಂದುವರಿಯಲಿದೆ ಎಂದು ಅಧ್ಯಯನವು ಹೇಳಿದೆ.</p>.<p>ಸಾಮಾಜಿಕ ಕಲ್ಯಾಣ ಕಾರ್ಯಕ್ರಮಗಳು, ಆಡಳಿತ, ಡಿಜಿಟಲೀಕರಣ, ಹಸಿರು ಆರ್ಥಿಕತೆಯಲ್ಲಿ ಸುಸ್ಥಿತ ಅಭಿವೃದ್ಧಿ ಗುರಿ (ಎಸ್ಡಿಜಿ) ಸಾಧಿಸುವ ಮೂಲಕ ತೀವ್ರ ಬಡತನ ಹೆಚ್ಚಾಗುವುದನ್ನು ತಡೆಯಬಹುದು. ಅಲ್ಲದೆ ಅಭಿವೃದ್ಧಿ ಪಥವನ್ನು ಮೊದಲಿನಂತೆ ದಾರಿಗೆ ತರಬಹುದು ಎಂದು ಅಧ್ಯಯನ ವರದಿಯಲ್ಲಿ ಸಲಹೆ ನೀಡಲಾಗಿದೆ.</p>.<p>ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ಸದೃಢಗೊಳಿಸುವ ಮೂಲಕ 14.6 ಕೋಟಿ ಜನರನ್ನು ತೀವ್ರ ಬಡತನದಿಂದ ರಕ್ಷಿಸಬಹುದು ಎಂದು ಅಧ್ಯಯನ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಶ್ವಸಂಸ್ಥೆ: </strong>ಕೊರೊನಾ ಸೋಂಕಿನ ದೀರ್ಘಕಾಲೀನ ಪ್ರಭಾವದಿಂದ 2030ರ ವೇಳೆಗೆ ಹೆಚ್ಚುವರಿಯಾಗಿ 20.7 ಕೋಟಿ ಜನರನ್ನು ತೀವ್ರ ಬಡತನಕ್ಕೆ ತಳ್ಳಬಹುದು. ಈ ಮೂಲಕ ವಿಶ್ವದ ಅತ್ಯಂತ ಬಡವರ ಸಂಖ್ಯೆ ಒಂದು ಶತಕೋಟಿಗೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ವಿಶ್ವಸಂಸ್ಥೆ ಅಭಿವೃದ್ಧಿ ಕಾರ್ಯಕ್ರಮದ(ಯುನ್ಡಿಪಿ) ಹೊಸ ಅಧ್ಯಯನವೊಂದರಲ್ಲಿ ತಿಳಿದುಬಂದಿದೆ.</p>.<p>ಮುಂದಿನ ದಶಕದಲ್ಲಿ ಸಾಂಕ್ರಾಮಿಕ ರೋಗದ ಬಹು ಆಯಾಮದ ಪರಿಣಾಮಗಳನ್ನು ಅಧ್ಯಯನ ಮಾಡಲಾಗಿದೆ. ಈ ಅಧ್ಯಯನವನ್ನು ಯುಎನ್ಡಿಪಿ ಮತ್ತು ಡೆನ್ವರ್ ವಿಶ್ವವಿದ್ಯಾಲಯದ ’ಪಾರ್ಡಿ ಸೆಂಟರ್ ಫಾರ್ ಇಂಟರ್ನ್ಯಾಷನಲ್ ಫ್ಯೂಚರ್ಸ್’ ಸಹಭಾಗಿತ್ವದಲ್ಲಿ ಕೈಗೊಳ್ಳಲಾಗಿದೆ.</p>.<p>ಕೋವಿಡ್ನಿಂದಾಗಿ ಉಂಟಾಗಿರುವ ಶೇಕಡ 80 ರಷ್ಟು ಆರ್ಥಿಕ ಬಿಕ್ಕಟ್ಟು 10 ವರ್ಷಗಳ ಕಾಲ ಮುಂದುವರಿಯಲಿದೆ ಎಂದು ಅಧ್ಯಯನವು ಹೇಳಿದೆ.</p>.<p>ಸಾಮಾಜಿಕ ಕಲ್ಯಾಣ ಕಾರ್ಯಕ್ರಮಗಳು, ಆಡಳಿತ, ಡಿಜಿಟಲೀಕರಣ, ಹಸಿರು ಆರ್ಥಿಕತೆಯಲ್ಲಿ ಸುಸ್ಥಿತ ಅಭಿವೃದ್ಧಿ ಗುರಿ (ಎಸ್ಡಿಜಿ) ಸಾಧಿಸುವ ಮೂಲಕ ತೀವ್ರ ಬಡತನ ಹೆಚ್ಚಾಗುವುದನ್ನು ತಡೆಯಬಹುದು. ಅಲ್ಲದೆ ಅಭಿವೃದ್ಧಿ ಪಥವನ್ನು ಮೊದಲಿನಂತೆ ದಾರಿಗೆ ತರಬಹುದು ಎಂದು ಅಧ್ಯಯನ ವರದಿಯಲ್ಲಿ ಸಲಹೆ ನೀಡಲಾಗಿದೆ.</p>.<p>ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ಸದೃಢಗೊಳಿಸುವ ಮೂಲಕ 14.6 ಕೋಟಿ ಜನರನ್ನು ತೀವ್ರ ಬಡತನದಿಂದ ರಕ್ಷಿಸಬಹುದು ಎಂದು ಅಧ್ಯಯನ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>