<p><strong>ನ್ಯೂಯಾರ್ಕ್: </strong>ಕೊರೊನಾ ಸೋಂಕಿಗೆ ಒಳಗಾದವರಲ್ಲಿ ಪಾರ್ಶ್ವವಾಯು ಸಮಸ್ಯೆ ಕಾಣಿಸಿಕೊಳ್ಳುವ ಅಪಾಯ ಹೆಚ್ಚು ಎಂದು ಅಮೆರಿಕದಮೌಂಟ್ ಸಿನಾಯ್ನಲ್ಲಿರುವ ಇಕಾನ್ ಸ್ಕೂಲ್ ಆಫ್ ಮೆಡಿಸಿನ್ನ ತಜ್ಞರು ಎಚ್ಚರಿಸಿದ್ದಾರೆ.</p>.<p>‘ಮೆದುಳಿನ ರಕ್ತನಾಳದಲ್ಲಿ ಕೊರೊನಾ ಸೋಂಕು ರಕ್ತ ಹೆಪ್ಪುಗಟ್ಟುವಂತೆ ಮಾಡುವ ಅಪಾಯ ಹೆಚ್ಚು. ಹೀಗಾಗಿ ಸೋಂಕಿತರು ನಿಯಮಿತವಾಗಿ ನರ ಸಂಬಂಧಿ ತಪಾಸಣೆಗೆ ಒಳಗಾಗುವುದು ಮುಖ್ಯ’ ಎಂದು ಸಂಸ್ಥೆಯ ತಜ್ಞರು ತಿಳಿಸಿದ್ದಾರೆ.</p>.<p>ಈ ಸಂಬಂಧ ಅಮೆರಿಕನ್ ಜರ್ನಲ್ ಆಫ್ ನ್ಯೂರೋಕಾರ್ಡಿಯಾಲಜಿಯಲ್ಲಿ ಅಧ್ಯಯನ ವರದಿ ಪ್ರಕಟವಾಗಿದ್ದು, ನ್ಯೂಯಾರ್ಕ್ನ ಆರು ಪ್ರಮುಖ ಆಸ್ಪತ್ರೆಗಳಲ್ಲಿ ಮಾರ್ಚ್–ಏಪ್ರಿಲ್ ಅವಧಿಯಲ್ಲಿ ದಾಖಲಾಗಿರುವ ರೋಗಿಗಳನ್ನು ಪರಿಶೀಲಿಸಿದ ತಜ್ಞರು ಈ ಎಚ್ಚರಿಕೆ ನೀಡಿದ್ದಾರೆ.</p>.<p>‘ಸೋಂಕು ದೃಢಪಟ್ಟ ನಂತರ ನರಸಂಬಂಧಿ ಪರೀಕ್ಷೆಗೆ ಒಳಗಾಗಬೇಕು. ಇದರಿಂದ ಪಾರ್ಶ್ವವಾಯು ಸೇರಿದಂತೆ ಇತರ ತೊಂದರೆಗಳನ್ನು ತಡೆಗಟ್ಟಲು ಚಿಕಿತ್ಸೆ ಪ್ರಾರಂಭಿಸಲು ಅನುಕೂಲವಾಗುತ್ತದೆ. ಸಾವಿನ ಪ್ರಮಾಣವನ್ನೂ ಕಡಿಮೆ ಮಾಡಲು ಸಾಧ್ಯವಾಗಲಿದೆ'ಎಂದು ಸಂಸ್ಥೆ ಕೈಗೊಂಡ ಅಧ್ಯಯನ ತಂಡದಲ್ಲಿದ್ದ ಪುನೀತ್ ಬೇಲಾನಿ ಹೇಳುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನ್ಯೂಯಾರ್ಕ್: </strong>ಕೊರೊನಾ ಸೋಂಕಿಗೆ ಒಳಗಾದವರಲ್ಲಿ ಪಾರ್ಶ್ವವಾಯು ಸಮಸ್ಯೆ ಕಾಣಿಸಿಕೊಳ್ಳುವ ಅಪಾಯ ಹೆಚ್ಚು ಎಂದು ಅಮೆರಿಕದಮೌಂಟ್ ಸಿನಾಯ್ನಲ್ಲಿರುವ ಇಕಾನ್ ಸ್ಕೂಲ್ ಆಫ್ ಮೆಡಿಸಿನ್ನ ತಜ್ಞರು ಎಚ್ಚರಿಸಿದ್ದಾರೆ.</p>.<p>‘ಮೆದುಳಿನ ರಕ್ತನಾಳದಲ್ಲಿ ಕೊರೊನಾ ಸೋಂಕು ರಕ್ತ ಹೆಪ್ಪುಗಟ್ಟುವಂತೆ ಮಾಡುವ ಅಪಾಯ ಹೆಚ್ಚು. ಹೀಗಾಗಿ ಸೋಂಕಿತರು ನಿಯಮಿತವಾಗಿ ನರ ಸಂಬಂಧಿ ತಪಾಸಣೆಗೆ ಒಳಗಾಗುವುದು ಮುಖ್ಯ’ ಎಂದು ಸಂಸ್ಥೆಯ ತಜ್ಞರು ತಿಳಿಸಿದ್ದಾರೆ.</p>.<p>ಈ ಸಂಬಂಧ ಅಮೆರಿಕನ್ ಜರ್ನಲ್ ಆಫ್ ನ್ಯೂರೋಕಾರ್ಡಿಯಾಲಜಿಯಲ್ಲಿ ಅಧ್ಯಯನ ವರದಿ ಪ್ರಕಟವಾಗಿದ್ದು, ನ್ಯೂಯಾರ್ಕ್ನ ಆರು ಪ್ರಮುಖ ಆಸ್ಪತ್ರೆಗಳಲ್ಲಿ ಮಾರ್ಚ್–ಏಪ್ರಿಲ್ ಅವಧಿಯಲ್ಲಿ ದಾಖಲಾಗಿರುವ ರೋಗಿಗಳನ್ನು ಪರಿಶೀಲಿಸಿದ ತಜ್ಞರು ಈ ಎಚ್ಚರಿಕೆ ನೀಡಿದ್ದಾರೆ.</p>.<p>‘ಸೋಂಕು ದೃಢಪಟ್ಟ ನಂತರ ನರಸಂಬಂಧಿ ಪರೀಕ್ಷೆಗೆ ಒಳಗಾಗಬೇಕು. ಇದರಿಂದ ಪಾರ್ಶ್ವವಾಯು ಸೇರಿದಂತೆ ಇತರ ತೊಂದರೆಗಳನ್ನು ತಡೆಗಟ್ಟಲು ಚಿಕಿತ್ಸೆ ಪ್ರಾರಂಭಿಸಲು ಅನುಕೂಲವಾಗುತ್ತದೆ. ಸಾವಿನ ಪ್ರಮಾಣವನ್ನೂ ಕಡಿಮೆ ಮಾಡಲು ಸಾಧ್ಯವಾಗಲಿದೆ'ಎಂದು ಸಂಸ್ಥೆ ಕೈಗೊಂಡ ಅಧ್ಯಯನ ತಂಡದಲ್ಲಿದ್ದ ಪುನೀತ್ ಬೇಲಾನಿ ಹೇಳುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>