<p><strong>ಸಿಂಗಪುರ</strong>: ಪ್ರತಿ ನಿತ್ಯ ಕೋವಿಡ್ ಸೋಂಕು ಮತ್ತು ಸಾವಿನ ಪ್ರಕರಣಗಳು ಹೆಚ್ಚುತ್ತಿರುವ ಕುರಿತು ಕಳವಳ ವ್ಯಕ್ತಪ ಡಿಸಿರುವ ಸಿಂಗಪುರ ಸರ್ಕಾರ, ಲಸಿಕೆ ಪಡೆಯಲು ವೈದ್ಯಕೀಯವಾಗಿ ಅರ್ಹರಾಗಿದ್ದರೂ, ಲಸಿಕೆ ಹಾಕಿಸಿಕೊಳ್ಳದ ಸರ್ಕಾರಿ ಅಧಿಕಾರಿಗಳಿಗೆ ವೇತನ ರಹಿತ ರಜೆ ಮೇಲೆ ಕಳುಹಿಸುವುದಾಗಿ ಎಚ್ಚರಿಕೆ ನೀಡಿದೆ.</p>.<p>ನಗರ ಮತ್ತು ದೇಶದಾದ್ಯಂತ ಬುಧವಾರ 3653 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ. ಇದರಲ್ಲಿ ವಲಸೆ ಕಾರ್ಮಿಕರ ಸಾಮೂಹಿಕ ವಸತಿ ಪ್ರದೇಶಗಳಲ್ಲಿ 409 ಪ್ರಕರಣಗಳು ಪತ್ತೆಯಾಗಿವೆ. ಸೋಂಕಿನಿಂದ 12 ಮಂದಿ ಸಾವನ್ನಪ್ಪಿದ್ದಾರೆ. </p>.<p>ಸಂಪೂರ್ಣ ಲಸಿಕೆ ಪಡೆದ ಉದ್ಯೋಗಿಗಳಿಗೆ ಅಥವಾ ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡು 270 ದಿನಗಳು ಕಳೆದಿರುವವರಿಗೆ ಮಾತ್ರ ಜನವರಿ 1, 2022 ರಿಂದ ಕೆಲಸದ ಸ್ಥಳಗಳಿಗೆ ತೆರಳಲು ಅನುಮತಿ ನೀಡುವುದಾಗಿ ಆರೋಗ್ಯ ಸಚಿವಾಲಯವು ಅಕ್ಟೋಬರ್ 23 ರಂದು ಘೋಷಿಸಿತ್ತು.</p>.<p>ಸಚಿವಾಲಯದ ಈ ಪ್ರಕಟಣೆಗೆ ಪ್ರತಿಕ್ರಿಯಿಸಿರುವ ಸಾರ್ವಜನಿಕ ಸೇವಾ ವಲಯ(ಪಿಎಸ್ಡಿ)ದ ವಕ್ತಾರ, ‘‘ಜನವರಿ 1 ರಿಂದ ಕೆಲಸಕ್ಕೆ ಮರಳಲು ಅನುಮತಿಸಿದರೆ, ಲಸಿಕೆ ಹಾಕಿಸಿಕೊಳ್ಳದ ಅಧಿಕಾರಿಗಳಿಗೆ ಮನೆಯಿಂದಲೇ ಕೆಲಸ ಮಾಡಲು ಅವಕಾಶ ನೀಡುತ್ತೇವೆ‘ ಎಂದು ಹೇಳಿದರು.</p>.<p>ಆದರೆ, ವೈದ್ಯಕೀಯವಾಗಿ ಅರ್ಹರಾಗಿದ್ದರೂ ಕೋವಿಡ್ ಲಸಿಕೆ ಪಡೆಯಲು ಮುಂದಾಗದಿದ್ದರೆ, ಅಂಥ ಅಧಿಕಾರಿಗಳಿಗೆ ವೇತನ ರಹಿತ ರಜೆಯ ಮೇಲೆ ಕಳಿಸಲಾಗುತ್ತದೆ ಎಂಬ ಪಿಎಸ್ಡಿಯ ಹೇಳಿಕೆ ಉಲ್ಲೇಖಿಸಿ ‘ನ್ಯೂಸ್ ಏಷ್ಯಾ‘ ವಾಹಿನಿ ಗುರುವಾರ ವರದಿ ಪ್ರಸಾರ ಮಾಡಿದೆ.</p>.<p>‘ಲಸಿಕೆ ಪಡೆಯಲು ವೈದ್ಯಕೀಯವಾಗಿ ಅರ್ಹರಾಗಿದ್ದು, ಲಸಿಕೆ ಪಡೆಯಲು ಒಪ್ಪದಿದ್ದರೆ, ಅಂಥವರಿಗೆ ವೇತನ ರಹಿತ ರಜೆ ಅಥವಾ ಗುತ್ತಿಗೆ ಆಧಾರದ ನೌಕರರಿಗೆ ಗುತ್ತಿಗೆ ನವೀಕರಣವಿಲ್ಲದೇ ಒಪ್ಪಂದ ರದ್ದುಗೊಳಿಸಬಹುದು ಎಂದು ಸುದ್ದಿ ವಾಹಿನಿ ವರದಿ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿಂಗಪುರ</strong>: ಪ್ರತಿ ನಿತ್ಯ ಕೋವಿಡ್ ಸೋಂಕು ಮತ್ತು ಸಾವಿನ ಪ್ರಕರಣಗಳು ಹೆಚ್ಚುತ್ತಿರುವ ಕುರಿತು ಕಳವಳ ವ್ಯಕ್ತಪ ಡಿಸಿರುವ ಸಿಂಗಪುರ ಸರ್ಕಾರ, ಲಸಿಕೆ ಪಡೆಯಲು ವೈದ್ಯಕೀಯವಾಗಿ ಅರ್ಹರಾಗಿದ್ದರೂ, ಲಸಿಕೆ ಹಾಕಿಸಿಕೊಳ್ಳದ ಸರ್ಕಾರಿ ಅಧಿಕಾರಿಗಳಿಗೆ ವೇತನ ರಹಿತ ರಜೆ ಮೇಲೆ ಕಳುಹಿಸುವುದಾಗಿ ಎಚ್ಚರಿಕೆ ನೀಡಿದೆ.</p>.<p>ನಗರ ಮತ್ತು ದೇಶದಾದ್ಯಂತ ಬುಧವಾರ 3653 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ. ಇದರಲ್ಲಿ ವಲಸೆ ಕಾರ್ಮಿಕರ ಸಾಮೂಹಿಕ ವಸತಿ ಪ್ರದೇಶಗಳಲ್ಲಿ 409 ಪ್ರಕರಣಗಳು ಪತ್ತೆಯಾಗಿವೆ. ಸೋಂಕಿನಿಂದ 12 ಮಂದಿ ಸಾವನ್ನಪ್ಪಿದ್ದಾರೆ. </p>.<p>ಸಂಪೂರ್ಣ ಲಸಿಕೆ ಪಡೆದ ಉದ್ಯೋಗಿಗಳಿಗೆ ಅಥವಾ ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡು 270 ದಿನಗಳು ಕಳೆದಿರುವವರಿಗೆ ಮಾತ್ರ ಜನವರಿ 1, 2022 ರಿಂದ ಕೆಲಸದ ಸ್ಥಳಗಳಿಗೆ ತೆರಳಲು ಅನುಮತಿ ನೀಡುವುದಾಗಿ ಆರೋಗ್ಯ ಸಚಿವಾಲಯವು ಅಕ್ಟೋಬರ್ 23 ರಂದು ಘೋಷಿಸಿತ್ತು.</p>.<p>ಸಚಿವಾಲಯದ ಈ ಪ್ರಕಟಣೆಗೆ ಪ್ರತಿಕ್ರಿಯಿಸಿರುವ ಸಾರ್ವಜನಿಕ ಸೇವಾ ವಲಯ(ಪಿಎಸ್ಡಿ)ದ ವಕ್ತಾರ, ‘‘ಜನವರಿ 1 ರಿಂದ ಕೆಲಸಕ್ಕೆ ಮರಳಲು ಅನುಮತಿಸಿದರೆ, ಲಸಿಕೆ ಹಾಕಿಸಿಕೊಳ್ಳದ ಅಧಿಕಾರಿಗಳಿಗೆ ಮನೆಯಿಂದಲೇ ಕೆಲಸ ಮಾಡಲು ಅವಕಾಶ ನೀಡುತ್ತೇವೆ‘ ಎಂದು ಹೇಳಿದರು.</p>.<p>ಆದರೆ, ವೈದ್ಯಕೀಯವಾಗಿ ಅರ್ಹರಾಗಿದ್ದರೂ ಕೋವಿಡ್ ಲಸಿಕೆ ಪಡೆಯಲು ಮುಂದಾಗದಿದ್ದರೆ, ಅಂಥ ಅಧಿಕಾರಿಗಳಿಗೆ ವೇತನ ರಹಿತ ರಜೆಯ ಮೇಲೆ ಕಳಿಸಲಾಗುತ್ತದೆ ಎಂಬ ಪಿಎಸ್ಡಿಯ ಹೇಳಿಕೆ ಉಲ್ಲೇಖಿಸಿ ‘ನ್ಯೂಸ್ ಏಷ್ಯಾ‘ ವಾಹಿನಿ ಗುರುವಾರ ವರದಿ ಪ್ರಸಾರ ಮಾಡಿದೆ.</p>.<p>‘ಲಸಿಕೆ ಪಡೆಯಲು ವೈದ್ಯಕೀಯವಾಗಿ ಅರ್ಹರಾಗಿದ್ದು, ಲಸಿಕೆ ಪಡೆಯಲು ಒಪ್ಪದಿದ್ದರೆ, ಅಂಥವರಿಗೆ ವೇತನ ರಹಿತ ರಜೆ ಅಥವಾ ಗುತ್ತಿಗೆ ಆಧಾರದ ನೌಕರರಿಗೆ ಗುತ್ತಿಗೆ ನವೀಕರಣವಿಲ್ಲದೇ ಒಪ್ಪಂದ ರದ್ದುಗೊಳಿಸಬಹುದು ಎಂದು ಸುದ್ದಿ ವಾಹಿನಿ ವರದಿ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>