<p><strong>ಧರ್ಮಶಾಲಾ/ಲಾಸ್ ಏಂಜಲೀಸ್:</strong> ಟಿಬೆಟಿಯನ್ ಧರ್ಮಗುರು ದಲೈ ಲಾಮ ಅವರು ಇದೇ ಮೊದಲ ಬಾರಿಗೆ 'ಗ್ರ್ಯಾಮಿ ಪ್ರಶಸ್ತಿ' ಗೌರವಕ್ಕೆ ಭಾಜನರಾಗಿದ್ದಾರೆ. 'ಅತ್ಯುತ್ತಮ ಆಡಿಯೊ ಬುಕ್ ಪ್ರಸ್ತುತಿ'ಗಾಗಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. </p><p>68ನೇ ಗ್ರ್ಯಾಮಿ ಪ್ರಶಸ್ತಿಯಲ್ಲಿ ದಲೈ ಲಾಮ ಅವರ 'ಮೆಡಿಟೇಷನ್ಸ್: ದಿ ರಿಫ್ಲೆಕ್ಷನ್ಸ್ ಆಫ್ ಹಿಸ್ ಹೋಲಿನೆಸ್ ದಿ ದಲೈ ಲಾಮ' ಎಂಬ ಆಡಿಯೊ ಬುಕ್ಗಾಗಿ ಪ್ರಶಸ್ತಿ ಸಂದಿದೆ. </p><p>ಪ್ರಶಸ್ತಿಗೆ ಅರ್ಹರಾಗಿರುವುದಕ್ಕೆ ಕೃತಜ್ಞತೆ ಸಲ್ಲಿಸಿರುವ ದಲೈ ಲಾಮ, 'ಇದು ವೈಯಕ್ತಿಕ ಸಾಧನೆಯಲ್ಲ, ಜಾಗತಿಕ ಹೊಣೆಗಾರಿಕೆ ಹಾಗೂ ಸಹಾನುಭೂತಿಗೆ ಸಂದ ಮನ್ನಣೆ' ಎಂದು ಪ್ರತಿಕ್ರಿಯಿಸಿದ್ದಾರೆ. </p><p>'ಈ ಪ್ರಶಸ್ತಿಯನ್ನು ವಿನಮ್ರವಾಗಿ ಸ್ವೀಕರಿಸುತ್ತೇನೆ. ಶಾಂತಿ, ಸಹಾನುಭೂತಿ, ಪರಿಸರ ಬಗ್ಗೆ ಕಾಳಜಿ, ಮಾನವೀಯತೆಯ ಏಕತೆ ಮತ್ತು ಎಂಟು ಶತಕೋಟಿ ಜನರ ಯೋಗಕ್ಷೇಮ ಅತ್ಯಗತ್ಯ ಎಂದು ನಾನು ನಂಬಿಕೊಂಡಿದ್ದೇನೆ. ಈ ಸಂದೇಶವನ್ನು ಇನ್ನಷ್ಟು ಪಸರಿಸಲು ಗ್ರ್ಯಾಮಿ ಪ್ರಶಸ್ತಿ ಪ್ರೇರಣೆಯಾಗಲಿದೆ' ಎಂದು ಹೇಳಿದ್ದಾರೆ. </p>.ಭಾರತದಲ್ಲಿ ಟಿಬೆಟ್ ಪರಂಪರೆ ಜೀವಂತ: ದಲೈ ಲಾಮಾ .ಬೌದ್ಧ ಧರ್ಮಗುರು ದಲೈ ಲಾಮಾಗೆ ಭಾರತ ರತ್ನ ನೀಡುವಂತೆ ಬಿಜೆಪಿ ಸಂಸದ ಆಗ್ರಹ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧರ್ಮಶಾಲಾ/ಲಾಸ್ ಏಂಜಲೀಸ್:</strong> ಟಿಬೆಟಿಯನ್ ಧರ್ಮಗುರು ದಲೈ ಲಾಮ ಅವರು ಇದೇ ಮೊದಲ ಬಾರಿಗೆ 'ಗ್ರ್ಯಾಮಿ ಪ್ರಶಸ್ತಿ' ಗೌರವಕ್ಕೆ ಭಾಜನರಾಗಿದ್ದಾರೆ. 'ಅತ್ಯುತ್ತಮ ಆಡಿಯೊ ಬುಕ್ ಪ್ರಸ್ತುತಿ'ಗಾಗಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. </p><p>68ನೇ ಗ್ರ್ಯಾಮಿ ಪ್ರಶಸ್ತಿಯಲ್ಲಿ ದಲೈ ಲಾಮ ಅವರ 'ಮೆಡಿಟೇಷನ್ಸ್: ದಿ ರಿಫ್ಲೆಕ್ಷನ್ಸ್ ಆಫ್ ಹಿಸ್ ಹೋಲಿನೆಸ್ ದಿ ದಲೈ ಲಾಮ' ಎಂಬ ಆಡಿಯೊ ಬುಕ್ಗಾಗಿ ಪ್ರಶಸ್ತಿ ಸಂದಿದೆ. </p><p>ಪ್ರಶಸ್ತಿಗೆ ಅರ್ಹರಾಗಿರುವುದಕ್ಕೆ ಕೃತಜ್ಞತೆ ಸಲ್ಲಿಸಿರುವ ದಲೈ ಲಾಮ, 'ಇದು ವೈಯಕ್ತಿಕ ಸಾಧನೆಯಲ್ಲ, ಜಾಗತಿಕ ಹೊಣೆಗಾರಿಕೆ ಹಾಗೂ ಸಹಾನುಭೂತಿಗೆ ಸಂದ ಮನ್ನಣೆ' ಎಂದು ಪ್ರತಿಕ್ರಿಯಿಸಿದ್ದಾರೆ. </p><p>'ಈ ಪ್ರಶಸ್ತಿಯನ್ನು ವಿನಮ್ರವಾಗಿ ಸ್ವೀಕರಿಸುತ್ತೇನೆ. ಶಾಂತಿ, ಸಹಾನುಭೂತಿ, ಪರಿಸರ ಬಗ್ಗೆ ಕಾಳಜಿ, ಮಾನವೀಯತೆಯ ಏಕತೆ ಮತ್ತು ಎಂಟು ಶತಕೋಟಿ ಜನರ ಯೋಗಕ್ಷೇಮ ಅತ್ಯಗತ್ಯ ಎಂದು ನಾನು ನಂಬಿಕೊಂಡಿದ್ದೇನೆ. ಈ ಸಂದೇಶವನ್ನು ಇನ್ನಷ್ಟು ಪಸರಿಸಲು ಗ್ರ್ಯಾಮಿ ಪ್ರಶಸ್ತಿ ಪ್ರೇರಣೆಯಾಗಲಿದೆ' ಎಂದು ಹೇಳಿದ್ದಾರೆ. </p>.ಭಾರತದಲ್ಲಿ ಟಿಬೆಟ್ ಪರಂಪರೆ ಜೀವಂತ: ದಲೈ ಲಾಮಾ .ಬೌದ್ಧ ಧರ್ಮಗುರು ದಲೈ ಲಾಮಾಗೆ ಭಾರತ ರತ್ನ ನೀಡುವಂತೆ ಬಿಜೆಪಿ ಸಂಸದ ಆಗ್ರಹ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>