ಇಸ್ಲಾಮಾಬಾದ್: ಪಾಕಿಸ್ತಾನದ ನೂತನ ಪ್ರಧಾನಿ ಇಮ್ರಾನ್ ಖಾನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು,ಉಭಯ ದೇಶಗಳ ‘ಬಾಂಧವ್ಯಕ್ಕೆ ಸವಾಲೊಡ್ಡಿರುವ’ ಭಯೋತ್ಪಾದನೆ, ಕಾಶ್ಮೀರ ಬಿಕ್ಕಟ್ಟು ಸೇರಿದಂತೆ ಪ್ರಮುಖ ವಿಷಯಗಳ ಕುರಿತು ಹೊಸದಾಗಿ ದ್ವಿಪಕ್ಷೀಯ ಮಾತುಕತೆ ಪುನರಾರಂಭದ ಪ್ರಸ್ತಾಪ ಇರಿಸಿದ್ದಾರೆ.