<p><strong>ನೈರೋಬಿ</strong>: ಕೆನ್ಯಾದಲ್ಲಿ ಪೊಲೀಸರ ದೌರ್ಜನ್ಯ ಹಾಗೂ ಕಳಪೆ ಆಡಳಿತದ ವಿರುದ್ಧ ನಡೆಯುತ್ತಿರುವ ರಾಷ್ಟ್ರವ್ಯಾಪಿ ಪ್ರತಿಭಟನೆಯಲ್ಲಿ ಸಾವಿಗೀಡಾದವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ ಎಂದು ಅಲ್ಲಿನ ಸರ್ಕಾರಿ ಸ್ಥಾಪಿತ ಮಾನವ ಹಕ್ಕುಗಳ ಆಯೋಗ ತಿಳಿಸಿದೆ. </p>.<p>ಹಿಂಸಾತ್ಮಕ ಪ್ರತಿಭಟನೆಯಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾಗೂ ಮಳಿಗೆಗಳಿಗೆ ಹಾನಿ ಮಾಡಲಾಗಿದೆ. ಎರಡು ಪೊಲೀಸ್ ಠಾಣೆಗಳನ್ನು ಪ್ರತಿಭಟನಕಾರರು ಧ್ವಂಸಗೊಳಿಸಿದ್ದಾರೆ.</p>.<p>ಪೊಲೀಸ್ ಕಸ್ಟಡಿಯಲ್ಲಿ ಬ್ಲಾಗರ್ ಒಬ್ಬರು ಸಾವಿಗೀಡಾಗಿದ್ದರು. ಇದನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಒಬ್ಬ ಪ್ರತಿಭಟನಕಾರರನ್ನು ಗುಂಡಿಕ್ಕಿ ಹತ್ಯೆ ಮಾಡಲಾಯಿತು. ಇದನ್ನು ಖಂಡಿಸಿ ದೇಶದ ಒಟ್ಟು 47 ಕೌಂಟಿಗಳ ಪೈಕಿ 23ರಲ್ಲಿ ಬುಧವಾರದಿಂದ ತೀವ್ರ ಪ್ರತಿಭಟನೆ ನಡೆಯುತ್ತಿದೆ. </p>.<p>ರಾಜಧಾನಿ ನೈರೋಬಿಯಲ್ಲಿ ಅನೇಕ ಮಳಿಗೆಗಳನ್ನು ಧ್ವಂಸಗೊಳಿಸಲಾಗಿದ್ದು, ಅಲ್ಲಿದ್ದ ವಸ್ತುಗಳನ್ನು ದೋಚಲಾಗಿದೆ. ಆರೋಪಿಗಳ ಬಂಧನಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಒಳಾಡಳಿತ ಸಚಿವ ಕಿಪ್ಚುಂಬಾ ಮುರ್ಕೊಮೆನ್ ಗುರುವಾರ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನೈರೋಬಿ</strong>: ಕೆನ್ಯಾದಲ್ಲಿ ಪೊಲೀಸರ ದೌರ್ಜನ್ಯ ಹಾಗೂ ಕಳಪೆ ಆಡಳಿತದ ವಿರುದ್ಧ ನಡೆಯುತ್ತಿರುವ ರಾಷ್ಟ್ರವ್ಯಾಪಿ ಪ್ರತಿಭಟನೆಯಲ್ಲಿ ಸಾವಿಗೀಡಾದವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ ಎಂದು ಅಲ್ಲಿನ ಸರ್ಕಾರಿ ಸ್ಥಾಪಿತ ಮಾನವ ಹಕ್ಕುಗಳ ಆಯೋಗ ತಿಳಿಸಿದೆ. </p>.<p>ಹಿಂಸಾತ್ಮಕ ಪ್ರತಿಭಟನೆಯಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾಗೂ ಮಳಿಗೆಗಳಿಗೆ ಹಾನಿ ಮಾಡಲಾಗಿದೆ. ಎರಡು ಪೊಲೀಸ್ ಠಾಣೆಗಳನ್ನು ಪ್ರತಿಭಟನಕಾರರು ಧ್ವಂಸಗೊಳಿಸಿದ್ದಾರೆ.</p>.<p>ಪೊಲೀಸ್ ಕಸ್ಟಡಿಯಲ್ಲಿ ಬ್ಲಾಗರ್ ಒಬ್ಬರು ಸಾವಿಗೀಡಾಗಿದ್ದರು. ಇದನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಒಬ್ಬ ಪ್ರತಿಭಟನಕಾರರನ್ನು ಗುಂಡಿಕ್ಕಿ ಹತ್ಯೆ ಮಾಡಲಾಯಿತು. ಇದನ್ನು ಖಂಡಿಸಿ ದೇಶದ ಒಟ್ಟು 47 ಕೌಂಟಿಗಳ ಪೈಕಿ 23ರಲ್ಲಿ ಬುಧವಾರದಿಂದ ತೀವ್ರ ಪ್ರತಿಭಟನೆ ನಡೆಯುತ್ತಿದೆ. </p>.<p>ರಾಜಧಾನಿ ನೈರೋಬಿಯಲ್ಲಿ ಅನೇಕ ಮಳಿಗೆಗಳನ್ನು ಧ್ವಂಸಗೊಳಿಸಲಾಗಿದ್ದು, ಅಲ್ಲಿದ್ದ ವಸ್ತುಗಳನ್ನು ದೋಚಲಾಗಿದೆ. ಆರೋಪಿಗಳ ಬಂಧನಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಒಳಾಡಳಿತ ಸಚಿವ ಕಿಪ್ಚುಂಬಾ ಮುರ್ಕೊಮೆನ್ ಗುರುವಾರ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>