<p><strong>ರೂಪಗಂಜ್</strong>: ‘ಬಾಂಗ್ಲಾದೇಶದ ಫುಡ್ ಫ್ಯಾಕ್ಟರಿಯೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಸಾವಿಗೀಡಾದವರ ಸಂಖ್ಯೆ 52ಕ್ಕೆ ಏರಿಕೆಯಾಗಿದೆ’ ಎಂದು ಪೊಲೀಸರು ಶುಕ್ರವಾರ ಹೇಳಿದರು.</p>.<p>‘ಢಾಕಾದ ರೂಪಗಂಜ್ನಲ್ಲಿರುವ ಹಾಶೆಮ್ ಫುಡ್ ಆ್ಯಂಡ್ ಬೆವರೇಜ್ ಫ್ಯಾಕ್ಟರಿಯಲ್ಲಿ ಗುರುವಾರ ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡಿದೆ. ಸುಮಾರು 24 ಗಂಟೆ ಕಳೆದರೂ ಬೆಂಕಿ ಉರಿಯುತ್ತಿದೆ’ ಎಂದು ಅವರು ತಿಳಿಸಿದರು.</p>.<p>‘ಬೆಂಕಿ ಆರನೇ ಅಂತಸ್ತಿಗೆ ತಲುಪಿದ್ದರಿಂದ ಭಯಭೀತಗೊಂಡು ಕಟ್ಟಡದಿಂದ ಹಾರಿದ್ದ 30ಕ್ಕೂ ಹೆಚ್ಚು ಕಾರ್ಮಿಕರಿಗೆ ಗಾಯಗಳಾಗಿವೆ. ಅಗ್ನಿಶಾಮಕ ಸಿಬ್ಬಂದಿ ಈವರೆಗೆ 25 ಮಂದಿಯನ್ನು ರಕ್ಷಿಸಿದ್ದಾರೆ’ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.</p>.<p>‘ಬೆಂಕಿ ನಿಯಂತ್ರಣಕ್ಕೆ ಬಂದ ಕೂಡಲೇ ನಾವು ಕಟ್ಟಡದೊಳಗೆ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಆರಂಭಿಸುತ್ತೇವೆ. ಈ ಬಳಿಕವೇ ನಿಖರ ಮಾಹಿತಿಯನ್ನು ನೀಡಲು ಸಾಧ್ಯ’ ಎಂದು ಅಗ್ನಿ ಶಾಮಕ ದಳದ ವಕ್ತಾರ ದೇಬಾಶಿಶ್ ಬರ್ಧನ್ ತಿಳಿಸಿದರು.</p>.<p>ಅಗ್ನಿ ಅವಘಡದಲ್ಲಿ ಮೂವರು ಮೃತಪಟ್ಟಿದ್ದರು ಎಂದು ಪೊಲೀಸರು ಆರಂಭದಲ್ಲಿ ಹೇಳಿದ್ದರು. ಆದರೆ ಮೇಲಿನ ಅಂತಸ್ತಿಗೆ ತಲುಪಿದ ಅಗ್ನಿಶಾಮಕ ಸಿಬ್ಬಂದಿಗೆ 12ಕ್ಕೂ ಹೆಚ್ಚು ಮೃತದೇಹಗಳು ಸಿಕ್ಕಿವೆ. ಸುಟ್ಟು ಕರಕಲಾದ ಮೃತದೇಹಗಳನ್ನು ಆಂಬುಲೆನ್ಸ್ ಮೂಲಕ ಶವಗಾರಕ್ಕೆ ಸಾಗಿಸಲಾಯಿತು.</p>.<p>ಈ ಸಂಬಂಧ ನೂರಾರು ಮಂದಿ ರಸ್ತೆ ತಡೆದು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಪೊಲೀಸರು ಮತ್ತು ಪ್ರತಿಭಟನಕಾರರ ನಡುವೆ ಘರ್ಷಣೆ ಏರ್ಪಟ್ಟಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರೂಪಗಂಜ್</strong>: ‘ಬಾಂಗ್ಲಾದೇಶದ ಫುಡ್ ಫ್ಯಾಕ್ಟರಿಯೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಸಾವಿಗೀಡಾದವರ ಸಂಖ್ಯೆ 52ಕ್ಕೆ ಏರಿಕೆಯಾಗಿದೆ’ ಎಂದು ಪೊಲೀಸರು ಶುಕ್ರವಾರ ಹೇಳಿದರು.</p>.<p>‘ಢಾಕಾದ ರೂಪಗಂಜ್ನಲ್ಲಿರುವ ಹಾಶೆಮ್ ಫುಡ್ ಆ್ಯಂಡ್ ಬೆವರೇಜ್ ಫ್ಯಾಕ್ಟರಿಯಲ್ಲಿ ಗುರುವಾರ ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡಿದೆ. ಸುಮಾರು 24 ಗಂಟೆ ಕಳೆದರೂ ಬೆಂಕಿ ಉರಿಯುತ್ತಿದೆ’ ಎಂದು ಅವರು ತಿಳಿಸಿದರು.</p>.<p>‘ಬೆಂಕಿ ಆರನೇ ಅಂತಸ್ತಿಗೆ ತಲುಪಿದ್ದರಿಂದ ಭಯಭೀತಗೊಂಡು ಕಟ್ಟಡದಿಂದ ಹಾರಿದ್ದ 30ಕ್ಕೂ ಹೆಚ್ಚು ಕಾರ್ಮಿಕರಿಗೆ ಗಾಯಗಳಾಗಿವೆ. ಅಗ್ನಿಶಾಮಕ ಸಿಬ್ಬಂದಿ ಈವರೆಗೆ 25 ಮಂದಿಯನ್ನು ರಕ್ಷಿಸಿದ್ದಾರೆ’ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.</p>.<p>‘ಬೆಂಕಿ ನಿಯಂತ್ರಣಕ್ಕೆ ಬಂದ ಕೂಡಲೇ ನಾವು ಕಟ್ಟಡದೊಳಗೆ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಆರಂಭಿಸುತ್ತೇವೆ. ಈ ಬಳಿಕವೇ ನಿಖರ ಮಾಹಿತಿಯನ್ನು ನೀಡಲು ಸಾಧ್ಯ’ ಎಂದು ಅಗ್ನಿ ಶಾಮಕ ದಳದ ವಕ್ತಾರ ದೇಬಾಶಿಶ್ ಬರ್ಧನ್ ತಿಳಿಸಿದರು.</p>.<p>ಅಗ್ನಿ ಅವಘಡದಲ್ಲಿ ಮೂವರು ಮೃತಪಟ್ಟಿದ್ದರು ಎಂದು ಪೊಲೀಸರು ಆರಂಭದಲ್ಲಿ ಹೇಳಿದ್ದರು. ಆದರೆ ಮೇಲಿನ ಅಂತಸ್ತಿಗೆ ತಲುಪಿದ ಅಗ್ನಿಶಾಮಕ ಸಿಬ್ಬಂದಿಗೆ 12ಕ್ಕೂ ಹೆಚ್ಚು ಮೃತದೇಹಗಳು ಸಿಕ್ಕಿವೆ. ಸುಟ್ಟು ಕರಕಲಾದ ಮೃತದೇಹಗಳನ್ನು ಆಂಬುಲೆನ್ಸ್ ಮೂಲಕ ಶವಗಾರಕ್ಕೆ ಸಾಗಿಸಲಾಯಿತು.</p>.<p>ಈ ಸಂಬಂಧ ನೂರಾರು ಮಂದಿ ರಸ್ತೆ ತಡೆದು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಪೊಲೀಸರು ಮತ್ತು ಪ್ರತಿಭಟನಕಾರರ ನಡುವೆ ಘರ್ಷಣೆ ಏರ್ಪಟ್ಟಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>