<p><strong>ಬೆಂಗಳೂರು</strong>: ಪಂಜಾಬ್ ಮೂಲದ ಕೆನಡಾ ಗಾಯಕ ಶುಭ್ನೀತ್ ಸಿಂಗ್ ಖಾಲಿಸ್ತಾನಿ ಹೋರಾಟಗಾರರ ಪರ ಸಹಾನುಭೂತಿ ಹೊಂದಿದ್ದಾರೆ ಎಂದು ಆರೋಪಿಸಿ ಅವರ ಭಾರತ ಭೇಟಿಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವಿರೋಧ ವ್ಯಕ್ತವಾದ ಬೆನ್ನಲ್ಲೇ ಪ್ರವಾಸ ರದ್ದಾಗಿರುವುದಕ್ಕೆ ಅವರು ಬೇಸರ ವ್ಯಕ್ತಪಡಿಸಿದ್ದಾರೆ.</p><p>ಈ ಬಗ್ಗೆ ಅವರು ಸಾಮಾಜಿಕ ಜಲತಾಣಗಳಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. </p><p>ಶುಭ್ ಅವರು ಭಾರತದ ಭೂಪಟ ಹಂಚಿಕೊಂಡು, ಪಂಜಾಬ್ಗಾಗಿ ಪಾರ್ಥಿಸಿ ಎಂದು ಬರೆದುಕೊಂಡಿರುವುದು ವಿವಾದಕ್ಕೆ ಕಾರಣವಾಗಿತ್ತು. ನಂತರ ಈ ಪೋಸ್ಟ್ ಅನ್ನು ಅಳಿಸಿ ಹಾಕಿ, ಕೇವಲ ಪಂಜಾಬ್ಗಾಗಿ ಪ್ರಾರ್ಥಿಸಿ ಎಂದು ಬರೆದುಕೊಂಡಿದ್ದರು.</p><p>ಪಂಜಾಬ್ನಲ್ಲಿ ವಿದ್ಯುತ್, ಇಂಟರ್ನೆರ್ಟ್ ಸೇವೆ ಸ್ಥಗಿತಗೊಂಡಿರುವುದಾಗಿ ವರದಿಗಳು ಬಂದಿದ್ದವು. ಹೀಗಾಗಿ ಪಂಜಾಬ್ಗಾಗಿ ಪ್ರಾರ್ಥಿಸಿ ಎಂದು ಬರೆದಿರುವುದಾಗಿ ಹೇಳಿದ್ದಾರೆ. ನಾನು, ಖಂಡಿತವಾಗಿಯೂ ಯಾರ ಭಾವನೆಗಳನ್ನು ನೋಯಿಸುವ ಉದ್ದೇಶ ಹೊಂದಿರಲಿಲ್ಲ ಎಂದು ಶುಭ್ ಹೇಳಿದ್ದಾರೆ.</p><p>ಖಾಲಿಸ್ತಾನದ ಪ್ರತ್ಯೇಕತಾವಾದಿ ನಾಯಕ ಹರ್ದೀಪ್ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತದ ಕೈವಾಡವಿದೆಯೆಂದು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಆರೋಪಿಸಿದ್ದರು. ಬಳಿಕ ಕೆನಡಾದ ಹಿರಿಯ ರಾಜತಾಂತ್ರಿಕ ಅಧಿಕಾರಿಯನ್ನು ಭಾರತ ಉಚ್ಚಾಟಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಪಂಜಾಬ್ ಮೂಲದ ಕೆನಡಾ ಗಾಯಕ ಶುಭ್ನೀತ್ ಸಿಂಗ್ ಖಾಲಿಸ್ತಾನಿ ಹೋರಾಟಗಾರರ ಪರ ಸಹಾನುಭೂತಿ ಹೊಂದಿದ್ದಾರೆ ಎಂದು ಆರೋಪಿಸಿ ಅವರ ಭಾರತ ಭೇಟಿಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವಿರೋಧ ವ್ಯಕ್ತವಾದ ಬೆನ್ನಲ್ಲೇ ಪ್ರವಾಸ ರದ್ದಾಗಿರುವುದಕ್ಕೆ ಅವರು ಬೇಸರ ವ್ಯಕ್ತಪಡಿಸಿದ್ದಾರೆ.</p><p>ಈ ಬಗ್ಗೆ ಅವರು ಸಾಮಾಜಿಕ ಜಲತಾಣಗಳಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. </p><p>ಶುಭ್ ಅವರು ಭಾರತದ ಭೂಪಟ ಹಂಚಿಕೊಂಡು, ಪಂಜಾಬ್ಗಾಗಿ ಪಾರ್ಥಿಸಿ ಎಂದು ಬರೆದುಕೊಂಡಿರುವುದು ವಿವಾದಕ್ಕೆ ಕಾರಣವಾಗಿತ್ತು. ನಂತರ ಈ ಪೋಸ್ಟ್ ಅನ್ನು ಅಳಿಸಿ ಹಾಕಿ, ಕೇವಲ ಪಂಜಾಬ್ಗಾಗಿ ಪ್ರಾರ್ಥಿಸಿ ಎಂದು ಬರೆದುಕೊಂಡಿದ್ದರು.</p><p>ಪಂಜಾಬ್ನಲ್ಲಿ ವಿದ್ಯುತ್, ಇಂಟರ್ನೆರ್ಟ್ ಸೇವೆ ಸ್ಥಗಿತಗೊಂಡಿರುವುದಾಗಿ ವರದಿಗಳು ಬಂದಿದ್ದವು. ಹೀಗಾಗಿ ಪಂಜಾಬ್ಗಾಗಿ ಪ್ರಾರ್ಥಿಸಿ ಎಂದು ಬರೆದಿರುವುದಾಗಿ ಹೇಳಿದ್ದಾರೆ. ನಾನು, ಖಂಡಿತವಾಗಿಯೂ ಯಾರ ಭಾವನೆಗಳನ್ನು ನೋಯಿಸುವ ಉದ್ದೇಶ ಹೊಂದಿರಲಿಲ್ಲ ಎಂದು ಶುಭ್ ಹೇಳಿದ್ದಾರೆ.</p><p>ಖಾಲಿಸ್ತಾನದ ಪ್ರತ್ಯೇಕತಾವಾದಿ ನಾಯಕ ಹರ್ದೀಪ್ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತದ ಕೈವಾಡವಿದೆಯೆಂದು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಆರೋಪಿಸಿದ್ದರು. ಬಳಿಕ ಕೆನಡಾದ ಹಿರಿಯ ರಾಜತಾಂತ್ರಿಕ ಅಧಿಕಾರಿಯನ್ನು ಭಾರತ ಉಚ್ಚಾಟಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>