<p><strong>ಅಬುಧಾಬಿ</strong>: ಅರಬ್ ಸಂಯುಕ್ತ ಸಂಸ್ಥಾನದಲ್ಲಿ(ಯುಎಇ) ಭಾರಿ ಮಳೆ ಸುರಿಯುತ್ತಿದ್ದು, ಹಲವೆಡೆ ಪ್ರವಾಹದ ರೀತಿಯ ವಾತಾವರಣ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ಯುಎಇಗೆ ಪ್ರಯಾಣಿಸುವ ಮತ್ತು ಆ ಮೂಲಕ ಹಾದುಹೋಗುವ ವಿಮಾನಗಳಲ್ಲಿ ಪ್ರಯಾಣಿಸುವ ಭಾರತೀಯ ಪ್ರಯಾಣಿಕರು ವಿಮಾನಗಳ ಹಾರಾಟ ಸಾಮಾನ್ಯ ಸ್ಥಿತಿಗೆ ಮರಳುವವರೆಗೆ ಅನಿವಾರ್ಯವಲ್ಲದ ಪ್ರಯಾಣವನ್ನು ಮುಂದೂಡುವಂತೆ ಅಬುಧಾಬಿಯ ಭಾರತೀಯ ರಾಯಭಾರ ಕಚೇರಿ ಸಲಹೆ ನೀಡಿದೆ.</p>. <p>ದುಬೈನ ಭಾರತೀಯ ಕಾನ್ಸುಲೇಟ್, ಪ್ರಯಾಣಿಕರ ಅನುಕೂಲದ ದೃಷ್ಟಿಯಿಂದ ಈಗಾಗಲೇ ಸಹಾಯವಾಣಿಯನ್ನೂ ಆರಂಭಿಸಿದ್ದಾರೆ.</p><p>ಅನಿಶ್ಚಿತತೆಯ ವಾತಾವರಣದ ಹಿನ್ನೆಲೆಯಲ್ಲಿ ವಿಮಾನಗಳ ಹಾರಾಟಕ್ಕೆ ತೊಡಕಾಗಿದ್ದು, ದುಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ವಿಮಾನಗಳ ಸಂಖ್ಯೆಯನ್ನು ಮಿತಿಗೊಳಿಸಲಾಗಿದೆ ಎಂದೂ ರಾಯಭಾರ ಕಚೇರಿ ತಿಳಿಸಿದೆ.</p><p>ಸದ್ಯದ ಪರಿಸ್ಥಿತಿ ಅನಿಶ್ಚಿತತೆಯಿಂದ ಕೂಡಿದ್ದು, ವಿಮಾನ ನಿಲ್ದಾಣದ ಕಾರ್ಯಾಚರಣೆಯನ್ನು ಸಾಮಾನ್ಯ ಸ್ಥಿತಿಗೆ ತರಲು ಅಧಿಕಾರಿಗಳು 24 ಗಂಟೆ ಶ್ರಮಿಸುತ್ತಿದ್ದಾರೆ.</p><p>‘ಆಯಾ ವಿಮಾನಗಳ ನಿರ್ಗಮನ ದಿನಾಂಕ ಮತ್ತು ಸಮಯದ ಬಗ್ಗೆ ವಿಮಾನಯಾನ ಸಂಸ್ಥೆಗಳಿಂದ ಅಂತಿಮ ದೃಢೀಕರಣದ ನಂತರವೇ ಪ್ರಯಾಣಿಕರು ವಿಮಾನ ನಿಲ್ದಾಣಕ್ಕೆ ಆಗಮಿಸಬಹುದು ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ಸಲಹೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ, ದುಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುವ ಅಥವಾ ಆ ಮಾರ್ಗದಲ್ಲಿ ಹಾದು ಹೋಗುವ ವಿಮಾನಗಳಲ್ಲಿ ಪ್ರಯಾಣಿಸುವ ಭಾರತೀಯ ಪ್ರಯಾಣಿಕರು ವಿಮಾನಗಳ ಕಾರ್ಯಾಚರಣೆಗಳು ಸಾಮಾನ್ಯ ಸ್ಥಿತಿಗೆ ಬರುವವರೆಗೂ ಅನಿವಾರ್ಯವಲ್ಲದ ಪ್ರಯಾಣವನ್ನು ಮರುಹೊಂದಿಸಲು ಸೂಚಿಸಲಾಗಿದೆ’ ರಾಯಭಾರ ಕಚೇರಿ ತಿಳಿಸಿದೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಬುಧಾಬಿ</strong>: ಅರಬ್ ಸಂಯುಕ್ತ ಸಂಸ್ಥಾನದಲ್ಲಿ(ಯುಎಇ) ಭಾರಿ ಮಳೆ ಸುರಿಯುತ್ತಿದ್ದು, ಹಲವೆಡೆ ಪ್ರವಾಹದ ರೀತಿಯ ವಾತಾವರಣ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ಯುಎಇಗೆ ಪ್ರಯಾಣಿಸುವ ಮತ್ತು ಆ ಮೂಲಕ ಹಾದುಹೋಗುವ ವಿಮಾನಗಳಲ್ಲಿ ಪ್ರಯಾಣಿಸುವ ಭಾರತೀಯ ಪ್ರಯಾಣಿಕರು ವಿಮಾನಗಳ ಹಾರಾಟ ಸಾಮಾನ್ಯ ಸ್ಥಿತಿಗೆ ಮರಳುವವರೆಗೆ ಅನಿವಾರ್ಯವಲ್ಲದ ಪ್ರಯಾಣವನ್ನು ಮುಂದೂಡುವಂತೆ ಅಬುಧಾಬಿಯ ಭಾರತೀಯ ರಾಯಭಾರ ಕಚೇರಿ ಸಲಹೆ ನೀಡಿದೆ.</p>. <p>ದುಬೈನ ಭಾರತೀಯ ಕಾನ್ಸುಲೇಟ್, ಪ್ರಯಾಣಿಕರ ಅನುಕೂಲದ ದೃಷ್ಟಿಯಿಂದ ಈಗಾಗಲೇ ಸಹಾಯವಾಣಿಯನ್ನೂ ಆರಂಭಿಸಿದ್ದಾರೆ.</p><p>ಅನಿಶ್ಚಿತತೆಯ ವಾತಾವರಣದ ಹಿನ್ನೆಲೆಯಲ್ಲಿ ವಿಮಾನಗಳ ಹಾರಾಟಕ್ಕೆ ತೊಡಕಾಗಿದ್ದು, ದುಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ವಿಮಾನಗಳ ಸಂಖ್ಯೆಯನ್ನು ಮಿತಿಗೊಳಿಸಲಾಗಿದೆ ಎಂದೂ ರಾಯಭಾರ ಕಚೇರಿ ತಿಳಿಸಿದೆ.</p><p>ಸದ್ಯದ ಪರಿಸ್ಥಿತಿ ಅನಿಶ್ಚಿತತೆಯಿಂದ ಕೂಡಿದ್ದು, ವಿಮಾನ ನಿಲ್ದಾಣದ ಕಾರ್ಯಾಚರಣೆಯನ್ನು ಸಾಮಾನ್ಯ ಸ್ಥಿತಿಗೆ ತರಲು ಅಧಿಕಾರಿಗಳು 24 ಗಂಟೆ ಶ್ರಮಿಸುತ್ತಿದ್ದಾರೆ.</p><p>‘ಆಯಾ ವಿಮಾನಗಳ ನಿರ್ಗಮನ ದಿನಾಂಕ ಮತ್ತು ಸಮಯದ ಬಗ್ಗೆ ವಿಮಾನಯಾನ ಸಂಸ್ಥೆಗಳಿಂದ ಅಂತಿಮ ದೃಢೀಕರಣದ ನಂತರವೇ ಪ್ರಯಾಣಿಕರು ವಿಮಾನ ನಿಲ್ದಾಣಕ್ಕೆ ಆಗಮಿಸಬಹುದು ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ಸಲಹೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ, ದುಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುವ ಅಥವಾ ಆ ಮಾರ್ಗದಲ್ಲಿ ಹಾದು ಹೋಗುವ ವಿಮಾನಗಳಲ್ಲಿ ಪ್ರಯಾಣಿಸುವ ಭಾರತೀಯ ಪ್ರಯಾಣಿಕರು ವಿಮಾನಗಳ ಕಾರ್ಯಾಚರಣೆಗಳು ಸಾಮಾನ್ಯ ಸ್ಥಿತಿಗೆ ಬರುವವರೆಗೂ ಅನಿವಾರ್ಯವಲ್ಲದ ಪ್ರಯಾಣವನ್ನು ಮರುಹೊಂದಿಸಲು ಸೂಚಿಸಲಾಗಿದೆ’ ರಾಯಭಾರ ಕಚೇರಿ ತಿಳಿಸಿದೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>