<p><strong>ಮಾಲೆ : </strong>ಮಾಲ್ಡೀವ್ಸ್ನಲ್ಲಿ ಕ್ರೀಡಾ ಮೂಲಸೌರ್ಕಯಗಳ ಅಭಿವೃದ್ಧಿಗಾಗಿ ಭಾರತವು ಸುಮಾರು ₹3,200 ಕೋಟಿಗೆ ರಿಯಾಯಿತಿ ಸಾಲದ ನೆರವು ವಿಸ್ತರಿಸಿದೆ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಗುರುವಾರ ತಿಳಿಸಿದರು.</p>.<p>ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮುಖವಾದ ‘ಫಿಟ್ ಇಂಡಿಯಾ’ ಮತ್ತು ‘ಖೇಲೊ ಇಂಡಿಯಾ’ ಯೋಜನೆಗಳನ್ನು ನೆರೆಯ ದೇಶಗಳಿಗೂ ನೀಡುವ ಮೊದಲ ವಿದೇಶಿ ನೀತಿಯ ಭಾಗವಾಗಿ ಮಾಲ್ಡೀವ್ಸ್ನಲ್ಲಿ ಕ್ರೀಡಾಸೌಕರ್ಯ ಅಭಿವೃದ್ಧಿಗೆ ನೆರವಾಗುತ್ತಿದ್ದೇವೆ ಎಂದು ಅವರು ಹೇಳಿದರು. </p>.<p>ನೆರೆ ರಾಷ್ಟ್ರಗಳಾದ ಮಾಲ್ಡೀವ್ಸ್ ಮತ್ತು ಶ್ರೀಲಂಕಾ ಜತೆ ದ್ವಿಪಕ್ಷೀಯ ಬಾಂಧವ್ಯ ಬಲವರ್ಧನೆಯ ಮಾತುಕತೆಗಾಗಿ ಜೈಶಂಕರ್ ಮೂರು ದಿನಗಳ ಭೇಟಿ ಕೈಗೊಂಡಿದ್ದಾರೆ.</p>.<p>ಇದೇ ವೇಳೆ ಜೈಶಂಕರ್ ಮತ್ತು ಮಾಲ್ಡೀವ್ಸ್ ವಿದೇಶಾಂಗ ಸಚಿವ ಅಬ್ದುಲ್ಲಾ ಶಾಹಿದ್ ಅವರು ಶಾವಿಯಾನಿ ಫೋಕೈಡೋದಲ್ಲಿ ಭಾರತದ ಸಹಭಾಗಿತ್ವದಲ್ಲಿ ನಿರ್ಮಿಸಿರುವ ಸಮುದಾಯ ಕೇಂದ್ರವನ್ನು ಉದ್ಘಾಟಿಸಿದರು.</p>.<p>‘ಭಾರತ ಮತ್ತು ಮಾಲ್ಡೀವ್ಸ್ ನಡುವೆ ತುಂಬಾ ವಿಶೇಷವಾದ ಸಂಬಂಧವಿದೆ. ಭಾರತ ನಮಗೆ ಉತ್ತಮ, ವಿಶೇಷ ಹಾಗೂ ವಿಶ್ವಾಸಾರ್ಹ ನೆರೆ ರಾಷ್ಟ್ರ’ ಎಂದು ಅಬ್ದುಲ್ಲಾ ಶಾಹಿದ್ ಬಣ್ಣಿಸಿದರು.</p>.<p><strong>ಹನಿಮಾಧೂ ಪುನರಾಭಿವೃದ್ಧಿಗೆ ಶಂಕುಸ್ಥಾಪನೆ: </strong></p>.<p>ಭಾರತದ ಸಹಭಾಗಿತ್ವದಲ್ಲಿ ಮಾಲ್ಡೀವ್ಸ್ನ ಹನಿಮಾಧೂ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪುನರಾಭಿವೃದ್ಧಿಗೆ ಬುಧವಾರ ಸಚಿವ ಎಸ್. ಜೈಶಂಕರ್ ಮತ್ತು ಮಾಲ್ಡೀವ್ಸ್ ಅಧ್ಯಕ್ಷ ಇಬ್ರಾಹಿಂ ಮೊಹಮ್ಮದ್ ಸಾಲಿಹ್ ಶಂಕುಸ್ಥಾಪನೆ ನೆರವೇರಿಸಿದರು.</p>.<p>‘ಉಭಯ ರಾಷ್ಟ್ರಗಳ ಅಭಿವೃದ್ಧಿ ಸಹಭಾಗಿತ್ವದಲ್ಲಿ ವಿಮಾನ ನಿಲ್ದಾಣ ಪುನರಾಭಿವೃದ್ಧಿಯು ಐತಿಹಾಸಿಕ ಮೈಲಿಗಲ್ಲು. ಉಭಯತ್ರರ ಸಹಭಾಗಿತ್ವವು ಪರಸ್ಪರರ ಕಲ್ಯಾಣ ಮತ್ತು ಹಿತಾಸಕ್ತಿಗಳಿಗಾಗಿ ಒಟ್ಟಾಗಿ ಕೆಲಸ ಮಾಡುವ ಬಯಕೆ ಹೊಂದಿದೆ’ ಎಂದು ಜೈಶಂಕರ್ ಹೇಳಿದರು.</p>.<p><strong>ಠಾಕೂರುರುಫಾನು ಸ್ಮಾರಕಕ್ಕೆ ಗೌರವ:</strong></p>.<p>16ನೇ ಶತಮಾನದಲ್ಲಿ ಪೋರ್ಚುಗೀಸರ ವಿರುದ್ಧ ಹೋರಾಡಿದ ಮಾಲ್ಡೀವ್ಸ್ ರಾಷ್ಟ್ರೀಯ ನಾಯಕ, ಸುಲ್ತಾನ್ ಮೊಹಮ್ಮದ್ ಠಾಕೂರುರುಫಾನು ಅವರ ಸ್ಮಾರಕಕ್ಕೆ ಜೈಶಂಕರ್ ಗುರುವಾರ ಗೌರವ ಸಲ್ಲಿಸಿದರು.</p>.<p>1573ರಿಂದ 1585ರವರೆಗೆ ದೇಶ ಆಳಿದ ಠಾಕೂರುರುಫಾನು ಅವರ ವಿಜಯವನ್ನು ಮಾಲ್ಡೀವ್ಸ್ನಲ್ಲಿ ರಾಷ್ಟ್ರೀಯ ದಿನವಾಗಿ ಆಚರಿಸಲಾಗುತ್ತದೆ. </p>.<p>ಮಾಲ್ಡೀವ್ಸ್ ಪ್ರವಾಸ ಪೂರ್ಣಗೊಳಿಸಿದ ಜೈಶಂಕರ್, ಗುರುವಾರ ಸಂಜೆ ನೆರೆಯ ಮತ್ತೊಂದು ದ್ವೀಪ ರಾಷ್ಟ್ರ ಶ್ರೀಲಂಕಾಕ್ಕೆ ತೆರಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಲೆ : </strong>ಮಾಲ್ಡೀವ್ಸ್ನಲ್ಲಿ ಕ್ರೀಡಾ ಮೂಲಸೌರ್ಕಯಗಳ ಅಭಿವೃದ್ಧಿಗಾಗಿ ಭಾರತವು ಸುಮಾರು ₹3,200 ಕೋಟಿಗೆ ರಿಯಾಯಿತಿ ಸಾಲದ ನೆರವು ವಿಸ್ತರಿಸಿದೆ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಗುರುವಾರ ತಿಳಿಸಿದರು.</p>.<p>ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮುಖವಾದ ‘ಫಿಟ್ ಇಂಡಿಯಾ’ ಮತ್ತು ‘ಖೇಲೊ ಇಂಡಿಯಾ’ ಯೋಜನೆಗಳನ್ನು ನೆರೆಯ ದೇಶಗಳಿಗೂ ನೀಡುವ ಮೊದಲ ವಿದೇಶಿ ನೀತಿಯ ಭಾಗವಾಗಿ ಮಾಲ್ಡೀವ್ಸ್ನಲ್ಲಿ ಕ್ರೀಡಾಸೌಕರ್ಯ ಅಭಿವೃದ್ಧಿಗೆ ನೆರವಾಗುತ್ತಿದ್ದೇವೆ ಎಂದು ಅವರು ಹೇಳಿದರು. </p>.<p>ನೆರೆ ರಾಷ್ಟ್ರಗಳಾದ ಮಾಲ್ಡೀವ್ಸ್ ಮತ್ತು ಶ್ರೀಲಂಕಾ ಜತೆ ದ್ವಿಪಕ್ಷೀಯ ಬಾಂಧವ್ಯ ಬಲವರ್ಧನೆಯ ಮಾತುಕತೆಗಾಗಿ ಜೈಶಂಕರ್ ಮೂರು ದಿನಗಳ ಭೇಟಿ ಕೈಗೊಂಡಿದ್ದಾರೆ.</p>.<p>ಇದೇ ವೇಳೆ ಜೈಶಂಕರ್ ಮತ್ತು ಮಾಲ್ಡೀವ್ಸ್ ವಿದೇಶಾಂಗ ಸಚಿವ ಅಬ್ದುಲ್ಲಾ ಶಾಹಿದ್ ಅವರು ಶಾವಿಯಾನಿ ಫೋಕೈಡೋದಲ್ಲಿ ಭಾರತದ ಸಹಭಾಗಿತ್ವದಲ್ಲಿ ನಿರ್ಮಿಸಿರುವ ಸಮುದಾಯ ಕೇಂದ್ರವನ್ನು ಉದ್ಘಾಟಿಸಿದರು.</p>.<p>‘ಭಾರತ ಮತ್ತು ಮಾಲ್ಡೀವ್ಸ್ ನಡುವೆ ತುಂಬಾ ವಿಶೇಷವಾದ ಸಂಬಂಧವಿದೆ. ಭಾರತ ನಮಗೆ ಉತ್ತಮ, ವಿಶೇಷ ಹಾಗೂ ವಿಶ್ವಾಸಾರ್ಹ ನೆರೆ ರಾಷ್ಟ್ರ’ ಎಂದು ಅಬ್ದುಲ್ಲಾ ಶಾಹಿದ್ ಬಣ್ಣಿಸಿದರು.</p>.<p><strong>ಹನಿಮಾಧೂ ಪುನರಾಭಿವೃದ್ಧಿಗೆ ಶಂಕುಸ್ಥಾಪನೆ: </strong></p>.<p>ಭಾರತದ ಸಹಭಾಗಿತ್ವದಲ್ಲಿ ಮಾಲ್ಡೀವ್ಸ್ನ ಹನಿಮಾಧೂ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪುನರಾಭಿವೃದ್ಧಿಗೆ ಬುಧವಾರ ಸಚಿವ ಎಸ್. ಜೈಶಂಕರ್ ಮತ್ತು ಮಾಲ್ಡೀವ್ಸ್ ಅಧ್ಯಕ್ಷ ಇಬ್ರಾಹಿಂ ಮೊಹಮ್ಮದ್ ಸಾಲಿಹ್ ಶಂಕುಸ್ಥಾಪನೆ ನೆರವೇರಿಸಿದರು.</p>.<p>‘ಉಭಯ ರಾಷ್ಟ್ರಗಳ ಅಭಿವೃದ್ಧಿ ಸಹಭಾಗಿತ್ವದಲ್ಲಿ ವಿಮಾನ ನಿಲ್ದಾಣ ಪುನರಾಭಿವೃದ್ಧಿಯು ಐತಿಹಾಸಿಕ ಮೈಲಿಗಲ್ಲು. ಉಭಯತ್ರರ ಸಹಭಾಗಿತ್ವವು ಪರಸ್ಪರರ ಕಲ್ಯಾಣ ಮತ್ತು ಹಿತಾಸಕ್ತಿಗಳಿಗಾಗಿ ಒಟ್ಟಾಗಿ ಕೆಲಸ ಮಾಡುವ ಬಯಕೆ ಹೊಂದಿದೆ’ ಎಂದು ಜೈಶಂಕರ್ ಹೇಳಿದರು.</p>.<p><strong>ಠಾಕೂರುರುಫಾನು ಸ್ಮಾರಕಕ್ಕೆ ಗೌರವ:</strong></p>.<p>16ನೇ ಶತಮಾನದಲ್ಲಿ ಪೋರ್ಚುಗೀಸರ ವಿರುದ್ಧ ಹೋರಾಡಿದ ಮಾಲ್ಡೀವ್ಸ್ ರಾಷ್ಟ್ರೀಯ ನಾಯಕ, ಸುಲ್ತಾನ್ ಮೊಹಮ್ಮದ್ ಠಾಕೂರುರುಫಾನು ಅವರ ಸ್ಮಾರಕಕ್ಕೆ ಜೈಶಂಕರ್ ಗುರುವಾರ ಗೌರವ ಸಲ್ಲಿಸಿದರು.</p>.<p>1573ರಿಂದ 1585ರವರೆಗೆ ದೇಶ ಆಳಿದ ಠಾಕೂರುರುಫಾನು ಅವರ ವಿಜಯವನ್ನು ಮಾಲ್ಡೀವ್ಸ್ನಲ್ಲಿ ರಾಷ್ಟ್ರೀಯ ದಿನವಾಗಿ ಆಚರಿಸಲಾಗುತ್ತದೆ. </p>.<p>ಮಾಲ್ಡೀವ್ಸ್ ಪ್ರವಾಸ ಪೂರ್ಣಗೊಳಿಸಿದ ಜೈಶಂಕರ್, ಗುರುವಾರ ಸಂಜೆ ನೆರೆಯ ಮತ್ತೊಂದು ದ್ವೀಪ ರಾಷ್ಟ್ರ ಶ್ರೀಲಂಕಾಕ್ಕೆ ತೆರಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>