<p><strong>ಜಿನೀವಾ</strong>: ಚೀನಾದೊಟ್ಟಿಗೆ ಇರುವ ಶೇ 75ರಷ್ಟು ಸಮಸ್ಯೆಗಳು ಇತ್ಯರ್ಥವಾಗಿವೆ. ಆದರೆ ಗಡಿಯಲ್ಲಿ ಹೆಚ್ಚು ಸೈನಿಕರನ್ನು ನಿಯೋಜಿಸುತ್ತಿರುವುದೇ ದೊಡ್ಡ ಸಮಸ್ಯೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಹೇಳಿದರು.</p>.<p>ಸ್ವಿಸ್ ನಗರದಲ್ಲಿ ಚಿಂತಕರ ಚಾವಡಿ ಆಯೋಜಿಸಿದ್ದ ಸಂವಾದದಲ್ಲಿ ಮಾತನಾಡಿದ ಅವರು, ‘ಜೂನ್ 2020ರಲ್ಲಿ ನಡೆದ ಗಲ್ವಾನ್ ಕಣಿವೆ ಸಂಘರ್ಷವು ಭಾರತ–ಚೀನಾ ಸಂಬಂಧದ ಮೇಲೆ ದುಷ್ಪರಿಣಾಮ ಬೀರಿದೆ. ಬಿಕ್ಕಟ್ಟು ಶಮನಕ್ಕೆ ಉಭಯ ದೇಶಗಳ ಮಾತುಕತೆ ಚಾಲ್ತಿಯಲ್ಲಿದೆ’ ಎಂದು ಹೇಳಿದರು.</p>.<p>‘ವಾಸ್ತವ ನಿಯಂತ್ರಣ ರೇಖೆಯಲ್ಲಿ ಚೀನಾ ಭಾರಿ ಸಂಖ್ಯೆಯಲ್ಲಿ ಸೈನಿಕರನ್ನು ನಿಯೋಜಿಸಿದೆ. ಇದಕ್ಕೆ ಪ್ರತಿಯಾಗಿ ನಾವೂ ನಿಯೋಜಿಸುತ್ತಿದ್ದೇವೆ. ಅತ್ಯಂತ ಎತ್ತರ ಮತ್ತು ತೀವ್ರ ಚಳಿ ಇರುವ ಪ್ರದೇಶದಲ್ಲಿ ಹೆಚ್ಚು ಸೈನಿಕರ ನಿಯೋಜನೆ ಅತ್ಯಂತ ಅಪಾಯಕಾರಿ ಬೆಳವಣಿಗೆ. 2020ರಲ್ಲಿ ಅಗಿದ್ದೂ ಇದೇ’ ಎಂದು ತಿಳಿಸಿದರು.</p>.<p>ಗಡಿಯಲ್ಲಿ ಶಾಂತಿ ಸ್ಥಾಪನೆಯಾಗದ ಹೊರತು ಉಭಯ ದೇಶಗಳ ಸಂಬಂಧ ಸುಧಾರಣೆ ಅಸಾಧ್ಯ. ಈ ನಿಟ್ಟಿನಲ್ಲಿ ಒಂದಷ್ಟು ಪ್ರಗತಿಯಾಗುತ್ತಿದೆ ಎಂದೂ ಅವರು ಹೇಳಿದರು.</p>.<p><strong>ಗಾಂಧಿ ಪ್ರತಿಮೆಗೆ ಜೈಶಂಕರ್ ನಮನ </strong></p><p>ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಅವರು ಎರಡು ದಿನಗಳ ಕಾಲ ಸ್ವಿಟ್ಜರ್ಲೆಂಡ್ಗೆ ಭೇಟಿ ನೀಡಿದ್ದು ಮಹಾತ್ಮ ಗಾಂಧಿ ಪ್ರತಿಮೆಗೆ ಗುರುವಾರ ನಮನ ಸಲ್ಲಿಸಿದರು. </p><p>ಜೈಶಂಕರ್ ಅವರು ಮೂರು ದೇಶಗಳಿಗೆ ಪ್ರವಾಸ ಕೈಗೊಂಡಿದ್ದು ಜರ್ಮನಿಯಿಂದ ಸ್ವಿಟ್ಜರ್ಲೆಂಡ್ಗೆ ಆಗಮಿಸಿದರು. </p><p>ಈ ಸಂದರ್ಭದಲ್ಲಿ ಅವರು ಅಂತರರಾಷ್ಟ್ರೀಯ ಸಂಘಟನೆಗಳ ಮುಖ್ಯಸ್ಥರು ಮತ್ತು ಪ್ರತಿನಿಧಿಗಳನ್ನು ಭೇಟಿಯಾಗಲಿದ್ದಾರೆ. ಸ್ವಿಟ್ಜರ್ಲೆಂಡ್ನ ವಿದೇಶಾಂಗ ವ್ಯವಹಾರಗಳ ಸಚಿವರನ್ನೂ ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ.</p><p> ‘ಮಹಾತ್ಮ ಗಾಂಧಿ ಅವರಿಗೆ ನಮಿಸುವ ಮೂಲಕ ಜಿನೀವಾ ಪ್ರವಾಸವನ್ನು ಆರಂಭಿಸಿದ್ದೇನೆ. ಜಗತ್ತಿನಾದ್ಯಂತ ಸಂಘರ್ಷ ಮತ್ತು ಧ್ರುವೀಕರಣ ನಡೆಯುತ್ತಿರುವ ಈ ಹೊತ್ತಿನಲ್ಲಿ ಬಾಪೂ ಅವರ ಸಾಮರಸ್ಯ ಮತ್ತು ಸಹಜೀವನ ಸಂದೇಶವು ಎಂದೆಂದಿಗಿಂತಲೂ ಈಗ ಹೆಚ್ಚು ಸಕಾಲಿಕವಾಗಿದೆ’ ಎಂದು ಜೈಶಂಕರ್ ಅವರು ‘ಎಕ್ಸ್’ನಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಿನೀವಾ</strong>: ಚೀನಾದೊಟ್ಟಿಗೆ ಇರುವ ಶೇ 75ರಷ್ಟು ಸಮಸ್ಯೆಗಳು ಇತ್ಯರ್ಥವಾಗಿವೆ. ಆದರೆ ಗಡಿಯಲ್ಲಿ ಹೆಚ್ಚು ಸೈನಿಕರನ್ನು ನಿಯೋಜಿಸುತ್ತಿರುವುದೇ ದೊಡ್ಡ ಸಮಸ್ಯೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಹೇಳಿದರು.</p>.<p>ಸ್ವಿಸ್ ನಗರದಲ್ಲಿ ಚಿಂತಕರ ಚಾವಡಿ ಆಯೋಜಿಸಿದ್ದ ಸಂವಾದದಲ್ಲಿ ಮಾತನಾಡಿದ ಅವರು, ‘ಜೂನ್ 2020ರಲ್ಲಿ ನಡೆದ ಗಲ್ವಾನ್ ಕಣಿವೆ ಸಂಘರ್ಷವು ಭಾರತ–ಚೀನಾ ಸಂಬಂಧದ ಮೇಲೆ ದುಷ್ಪರಿಣಾಮ ಬೀರಿದೆ. ಬಿಕ್ಕಟ್ಟು ಶಮನಕ್ಕೆ ಉಭಯ ದೇಶಗಳ ಮಾತುಕತೆ ಚಾಲ್ತಿಯಲ್ಲಿದೆ’ ಎಂದು ಹೇಳಿದರು.</p>.<p>‘ವಾಸ್ತವ ನಿಯಂತ್ರಣ ರೇಖೆಯಲ್ಲಿ ಚೀನಾ ಭಾರಿ ಸಂಖ್ಯೆಯಲ್ಲಿ ಸೈನಿಕರನ್ನು ನಿಯೋಜಿಸಿದೆ. ಇದಕ್ಕೆ ಪ್ರತಿಯಾಗಿ ನಾವೂ ನಿಯೋಜಿಸುತ್ತಿದ್ದೇವೆ. ಅತ್ಯಂತ ಎತ್ತರ ಮತ್ತು ತೀವ್ರ ಚಳಿ ಇರುವ ಪ್ರದೇಶದಲ್ಲಿ ಹೆಚ್ಚು ಸೈನಿಕರ ನಿಯೋಜನೆ ಅತ್ಯಂತ ಅಪಾಯಕಾರಿ ಬೆಳವಣಿಗೆ. 2020ರಲ್ಲಿ ಅಗಿದ್ದೂ ಇದೇ’ ಎಂದು ತಿಳಿಸಿದರು.</p>.<p>ಗಡಿಯಲ್ಲಿ ಶಾಂತಿ ಸ್ಥಾಪನೆಯಾಗದ ಹೊರತು ಉಭಯ ದೇಶಗಳ ಸಂಬಂಧ ಸುಧಾರಣೆ ಅಸಾಧ್ಯ. ಈ ನಿಟ್ಟಿನಲ್ಲಿ ಒಂದಷ್ಟು ಪ್ರಗತಿಯಾಗುತ್ತಿದೆ ಎಂದೂ ಅವರು ಹೇಳಿದರು.</p>.<p><strong>ಗಾಂಧಿ ಪ್ರತಿಮೆಗೆ ಜೈಶಂಕರ್ ನಮನ </strong></p><p>ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಅವರು ಎರಡು ದಿನಗಳ ಕಾಲ ಸ್ವಿಟ್ಜರ್ಲೆಂಡ್ಗೆ ಭೇಟಿ ನೀಡಿದ್ದು ಮಹಾತ್ಮ ಗಾಂಧಿ ಪ್ರತಿಮೆಗೆ ಗುರುವಾರ ನಮನ ಸಲ್ಲಿಸಿದರು. </p><p>ಜೈಶಂಕರ್ ಅವರು ಮೂರು ದೇಶಗಳಿಗೆ ಪ್ರವಾಸ ಕೈಗೊಂಡಿದ್ದು ಜರ್ಮನಿಯಿಂದ ಸ್ವಿಟ್ಜರ್ಲೆಂಡ್ಗೆ ಆಗಮಿಸಿದರು. </p><p>ಈ ಸಂದರ್ಭದಲ್ಲಿ ಅವರು ಅಂತರರಾಷ್ಟ್ರೀಯ ಸಂಘಟನೆಗಳ ಮುಖ್ಯಸ್ಥರು ಮತ್ತು ಪ್ರತಿನಿಧಿಗಳನ್ನು ಭೇಟಿಯಾಗಲಿದ್ದಾರೆ. ಸ್ವಿಟ್ಜರ್ಲೆಂಡ್ನ ವಿದೇಶಾಂಗ ವ್ಯವಹಾರಗಳ ಸಚಿವರನ್ನೂ ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ.</p><p> ‘ಮಹಾತ್ಮ ಗಾಂಧಿ ಅವರಿಗೆ ನಮಿಸುವ ಮೂಲಕ ಜಿನೀವಾ ಪ್ರವಾಸವನ್ನು ಆರಂಭಿಸಿದ್ದೇನೆ. ಜಗತ್ತಿನಾದ್ಯಂತ ಸಂಘರ್ಷ ಮತ್ತು ಧ್ರುವೀಕರಣ ನಡೆಯುತ್ತಿರುವ ಈ ಹೊತ್ತಿನಲ್ಲಿ ಬಾಪೂ ಅವರ ಸಾಮರಸ್ಯ ಮತ್ತು ಸಹಜೀವನ ಸಂದೇಶವು ಎಂದೆಂದಿಗಿಂತಲೂ ಈಗ ಹೆಚ್ಚು ಸಕಾಲಿಕವಾಗಿದೆ’ ಎಂದು ಜೈಶಂಕರ್ ಅವರು ‘ಎಕ್ಸ್’ನಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>