ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಯೆಟ್ನಾಂನಲ್ಲಿ ರವೀಂದ್ರನಾಥ ಟ್ಯಾಗೋರ್‌ ಪ್ರತಿಮೆ ಅನಾವರಣ

Published 15 ಅಕ್ಟೋಬರ್ 2023, 13:23 IST
Last Updated 15 ಅಕ್ಟೋಬರ್ 2023, 13:23 IST
ಅಕ್ಷರ ಗಾತ್ರ

ಹನೋಯ್‌: ವಿಯೆಟ್ನಾಂನ ಬಾಕ್ ನಿನ್ಹ್ ನಗರದಲ್ಲಿ ನಿರ್ಮಿಸಲಾಗಿರುವ, ನೊಬೆಲ್‌ ಪುರಸ್ಕೃತ ಲೇಖಕ ರವೀಂದ್ರನಾಥ  ಟ್ಯಾಗೋರ್‌ ಅವರ ಪ್ರತಿಮೆಯನ್ನು ಭಾರತದ ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಅವರು ಭಾನುವಾರ ಅನಾವರಣಗೊಳಿಸಿದರು.

ನಂತರ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ‘ಭಾರತ ಮತ್ತು ವಿಯೆಟ್ನಾಂ ಸಂಬಂಧವು ಸುಮಾರು 2,000 ವರ್ಷಗಳಷ್ಟು ಹಳೆಯದು. ಇಲ್ಲಿ ಬೌದ್ಧ ಧರ್ಮವನ್ನು ಪರಿಚಯಿಸುವಲ್ಲಿ ಗೌತಮ ಬುದ್ಧನ ಪಾತ್ರ ಪ್ರಮುಖವಾಗಿದೆ ಎಂದು ಐತಿಹಾಸಿಕ ದಾಖಲೆಗಳು ಹೇಳುತ್ತವೆ’ ಎಂದರು.

ಟ್ಯಾಗೋರ್ ಅವರ ಕಾರ್ಯವನ್ನು ಜಗತ್ತಿನಾದ್ಯಂತ ಗುರುತಿಸುತ್ತಿರುವುದು ಕಂಡು ಸಂತಸವಾಗುತ್ತಿದೆ ಎಂದು ತಿಳಿಸಿದರು.

ಜೈಶಂಕರ್ ಅವರು ಭಾನುವಾರ ವಿಯೆಟ್ನಾಂಗೆ ಭೇಟಿ ನೀಡಿದ್ದು, ನಂತರ ಅ.19 ಮತ್ತು 20ರಂದು ಸಿಂಗಪುರಕ್ಕೆ ಭೇಟಿ ನೀಡಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT