<p class="title"><strong>ಕರಾಚಿ, ಪಾಕಿಸ್ತಾನ: </strong>ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದ ಪರ್ವತ ಪ್ರದೇಶದಲ್ಲಿ ಗುರುವಾರ ಮುಂಜಾನೆ ಸಂಭವಿಸಿದ 5.9 ತೀವ್ರತೆಯ ಪ್ರಬಲ ಭೂಕಂಪದಲ್ಲಿ ಹಲವು ಮನೆಗಳು ಕುಸಿದಿದ್ದು ಕನಿಷ್ಠ 22 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p class="title">ಮೃತರಲ್ಲಿ ಆರು ಮಂದಿ ಮಕ್ಕಳು. ದುರಂತದಲ್ಲಿ 300ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮರಣ ಪ್ರಮಾಣ ಹೆಚ್ಚಾಗಬಹುದು ಎಂದು ವಿಪತ್ತು ನಿರ್ವಹಣಾ ಅಧಿಕಾರಿಗಳು ತಿಳಿಸಿದ್ದಾರೆ ಎಂದು ಜಿಯೊ ನ್ಯೂಸ್ ವರದಿ ಮಾಡಿದೆ.</p>.<p class="title">ಭೂಕಂಪದ ಕೇಂದ್ರ ಬಿಂದು ಹರ್ನೈ ಬಳಿ ಸುಮಾರು 15 ಕಿ.ಮೀ. ಆಳದಲ್ಲಿತ್ತು ಎಂದು ಇಸ್ಲಾಮಾಬಾದ್ನ ರಾಷ್ಟ್ರೀಯ ಭೂಕಂಪನ ಮೇಲ್ವಿಚಾರಣಾ ಕೇಂದ್ರವು ವರದಿ ಮಾಡಿದೆ.</p>.<p class="title">ಘಟನೆಯಲ್ಲಿ ನಿಖರವಾದ ಹಾನಿ ಬಗ್ಗೆ ಇನ್ನೂ ಮಾಹಿತಿ ದೊರೆತಿಲ್ಲ ಎಂದೂ ಅದು ಹೇಳಿದೆ.</p>.<p class="title">ಕ್ವೆಟ್ಟಾ, ಸಿಬಿ, ಹರ್ನೈ, ಪಿಶಿನ್, ಕಿಲಾ ಸೈಫುಲ್ಲಾ, ಚಮನ್, ಜಿಯಾರತ್ ಮತ್ತು ಬಲೂಚಿಸ್ತಾನ ಪ್ರದೇಶಗಳಲ್ಲಿ ಭೂಕಂಪದ ಪ್ರಭಾವ ಇತ್ತು. ಹೆಚ್ಚಿನ ಸಾವು–ನೋವುಗಳು ದೂರದ ಈಶಾನ್ಯ ಜಿಲ್ಲೆ ಹರ್ನೈಯಲ್ಲಿ ಸಂಭವಿಸಿದೆ ಎಂದು ವರದಿಯಾಗಿದೆ. </p>.<p class="bodytext">ಕಡಿಮೆ ಆಳದ ಪ್ರದೇಶದಲ್ಲಿ 5.9 ತೀವ್ರತೆಯ ಭೂಕಂಪ ಅಪ್ಪಳಿಸಿದೆ. ಇಂತಹ ಭೂಕಂಪಗಳು ಹೆಚ್ಚು ಹಾನಿ ಉಂಟುಮಾಡಬಹುದು ಎಂದು ಅಮೆರಿಕ ಭೂವೈಜ್ಞಾನಿಕ ಸಮೀಕ್ಷೆ ಹೇಳಿದೆ.</p>.<p class="bodytext">ಮೃತರಲ್ಲಿ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳಿದ್ದಾರೆ ಎಂದು ಪ್ರಾಂತೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಪಿಡಿಎಂಎ) ಹೇಳಿದೆ.</p>.<p class="bodytext">ಭೂಮಿಯ ಕಂಪನದ ನಂತರ ಕ್ವೆಟ್ಟಾ ನಗರ ನಿವಾಸಿಗಳು ಬೀದಿಗೆ ಓಡಿ ಬರುತ್ತಿರುವುದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ ಚಿತ್ರಗಳು ತೋರಿಸಿವೆ ಎಂದು ಡಾನ್ ಪತ್ರಿಕೆ ವರದಿ ಮಾಡಿದೆ.</p>.<p class="bodytext">ನಸುಕಿನ ಜಾವ 3.20 ರ ಹೊತ್ತಿಗೆ ಭೂಮಿ ನಡುಗಿದೆ. ಇದರಿಂದ ಭಯಭೀತರಾದ ನಾಗರಿಕರು ಪವಿತ್ರ ಕುರಾನ್ ಪದ್ಯಗಳನ್ನು ಪಠಿಸುತ್ತಾ ಮನೆಗಳಿಂದ ಹೊರಬಂದರು. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಎಲ್ಲಾ ಆಸ್ಪತ್ರೆಗಳಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ.</p>.<p class="bodytext">‘ಸ್ಥಳದಲ್ಲಿ ತುರ್ತು ಸೇವೆಗಾಗಿ ಆಂಬುಲೆನ್ಸ್, ಹೆಲಿಕಾಪ್ಟರ್ ಮೊದಲಾದವುಗಳನ್ನು ಇರಿಸಲಾಗಿದೆ. ಈ ಸಂಬಂಧ ಎಲ್ಲಾ ಇಲಾಖೆಗಳು ಕಾರ್ಯನಿರ್ವಹಿಸುತ್ತಿವೆ’ ಎಂದು ಬಲೂಚಿಸ್ತಾನ ಮುಖ್ಯಮಂತ್ರಿ ಜಮ್ ಕಮಲ್ ಖಾನ್ ಅಲ್ಯಾನಿ ಟ್ವೀಟ್ ಮಾಡಿದ್ದಾರೆ.</p>.<p class="bodytext">ರಕ್ಷಣಾ ಮತ್ತು ಪರಿಹಾರ ಕಾರ್ಯಗಳಿಗೆ ಸೈನಿಕರು ಹರ್ನೈನ ಭೂಕಂಪ ಪೀಡಿತ ಪ್ರದೇಶಗಳಿಗೆ ತಲುಪಿದ್ದಾರೆ ಎಂದು ಸೇನೆಯು ಹೇಳಿಕೆಯಲ್ಲಿ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಕರಾಚಿ, ಪಾಕಿಸ್ತಾನ: </strong>ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದ ಪರ್ವತ ಪ್ರದೇಶದಲ್ಲಿ ಗುರುವಾರ ಮುಂಜಾನೆ ಸಂಭವಿಸಿದ 5.9 ತೀವ್ರತೆಯ ಪ್ರಬಲ ಭೂಕಂಪದಲ್ಲಿ ಹಲವು ಮನೆಗಳು ಕುಸಿದಿದ್ದು ಕನಿಷ್ಠ 22 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p class="title">ಮೃತರಲ್ಲಿ ಆರು ಮಂದಿ ಮಕ್ಕಳು. ದುರಂತದಲ್ಲಿ 300ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮರಣ ಪ್ರಮಾಣ ಹೆಚ್ಚಾಗಬಹುದು ಎಂದು ವಿಪತ್ತು ನಿರ್ವಹಣಾ ಅಧಿಕಾರಿಗಳು ತಿಳಿಸಿದ್ದಾರೆ ಎಂದು ಜಿಯೊ ನ್ಯೂಸ್ ವರದಿ ಮಾಡಿದೆ.</p>.<p class="title">ಭೂಕಂಪದ ಕೇಂದ್ರ ಬಿಂದು ಹರ್ನೈ ಬಳಿ ಸುಮಾರು 15 ಕಿ.ಮೀ. ಆಳದಲ್ಲಿತ್ತು ಎಂದು ಇಸ್ಲಾಮಾಬಾದ್ನ ರಾಷ್ಟ್ರೀಯ ಭೂಕಂಪನ ಮೇಲ್ವಿಚಾರಣಾ ಕೇಂದ್ರವು ವರದಿ ಮಾಡಿದೆ.</p>.<p class="title">ಘಟನೆಯಲ್ಲಿ ನಿಖರವಾದ ಹಾನಿ ಬಗ್ಗೆ ಇನ್ನೂ ಮಾಹಿತಿ ದೊರೆತಿಲ್ಲ ಎಂದೂ ಅದು ಹೇಳಿದೆ.</p>.<p class="title">ಕ್ವೆಟ್ಟಾ, ಸಿಬಿ, ಹರ್ನೈ, ಪಿಶಿನ್, ಕಿಲಾ ಸೈಫುಲ್ಲಾ, ಚಮನ್, ಜಿಯಾರತ್ ಮತ್ತು ಬಲೂಚಿಸ್ತಾನ ಪ್ರದೇಶಗಳಲ್ಲಿ ಭೂಕಂಪದ ಪ್ರಭಾವ ಇತ್ತು. ಹೆಚ್ಚಿನ ಸಾವು–ನೋವುಗಳು ದೂರದ ಈಶಾನ್ಯ ಜಿಲ್ಲೆ ಹರ್ನೈಯಲ್ಲಿ ಸಂಭವಿಸಿದೆ ಎಂದು ವರದಿಯಾಗಿದೆ. </p>.<p class="bodytext">ಕಡಿಮೆ ಆಳದ ಪ್ರದೇಶದಲ್ಲಿ 5.9 ತೀವ್ರತೆಯ ಭೂಕಂಪ ಅಪ್ಪಳಿಸಿದೆ. ಇಂತಹ ಭೂಕಂಪಗಳು ಹೆಚ್ಚು ಹಾನಿ ಉಂಟುಮಾಡಬಹುದು ಎಂದು ಅಮೆರಿಕ ಭೂವೈಜ್ಞಾನಿಕ ಸಮೀಕ್ಷೆ ಹೇಳಿದೆ.</p>.<p class="bodytext">ಮೃತರಲ್ಲಿ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳಿದ್ದಾರೆ ಎಂದು ಪ್ರಾಂತೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಪಿಡಿಎಂಎ) ಹೇಳಿದೆ.</p>.<p class="bodytext">ಭೂಮಿಯ ಕಂಪನದ ನಂತರ ಕ್ವೆಟ್ಟಾ ನಗರ ನಿವಾಸಿಗಳು ಬೀದಿಗೆ ಓಡಿ ಬರುತ್ತಿರುವುದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ ಚಿತ್ರಗಳು ತೋರಿಸಿವೆ ಎಂದು ಡಾನ್ ಪತ್ರಿಕೆ ವರದಿ ಮಾಡಿದೆ.</p>.<p class="bodytext">ನಸುಕಿನ ಜಾವ 3.20 ರ ಹೊತ್ತಿಗೆ ಭೂಮಿ ನಡುಗಿದೆ. ಇದರಿಂದ ಭಯಭೀತರಾದ ನಾಗರಿಕರು ಪವಿತ್ರ ಕುರಾನ್ ಪದ್ಯಗಳನ್ನು ಪಠಿಸುತ್ತಾ ಮನೆಗಳಿಂದ ಹೊರಬಂದರು. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಎಲ್ಲಾ ಆಸ್ಪತ್ರೆಗಳಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ.</p>.<p class="bodytext">‘ಸ್ಥಳದಲ್ಲಿ ತುರ್ತು ಸೇವೆಗಾಗಿ ಆಂಬುಲೆನ್ಸ್, ಹೆಲಿಕಾಪ್ಟರ್ ಮೊದಲಾದವುಗಳನ್ನು ಇರಿಸಲಾಗಿದೆ. ಈ ಸಂಬಂಧ ಎಲ್ಲಾ ಇಲಾಖೆಗಳು ಕಾರ್ಯನಿರ್ವಹಿಸುತ್ತಿವೆ’ ಎಂದು ಬಲೂಚಿಸ್ತಾನ ಮುಖ್ಯಮಂತ್ರಿ ಜಮ್ ಕಮಲ್ ಖಾನ್ ಅಲ್ಯಾನಿ ಟ್ವೀಟ್ ಮಾಡಿದ್ದಾರೆ.</p>.<p class="bodytext">ರಕ್ಷಣಾ ಮತ್ತು ಪರಿಹಾರ ಕಾರ್ಯಗಳಿಗೆ ಸೈನಿಕರು ಹರ್ನೈನ ಭೂಕಂಪ ಪೀಡಿತ ಪ್ರದೇಶಗಳಿಗೆ ತಲುಪಿದ್ದಾರೆ ಎಂದು ಸೇನೆಯು ಹೇಳಿಕೆಯಲ್ಲಿ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>