<p><strong>ಲಾಹೋರ್:</strong> ಭಾರತದಲ್ಲಿ ತಮಗಿರುವ ಸಂಪರ್ಕವನ್ನು ಬಳಸಿಕೊಂಡು ಈಗಿನ ಬಿಗುವಿನ ಸ್ಥಿತಿಯನ್ನು ಶಮನಗೊಳಿಸಲು ಮಾಜಿ ಪ್ರಧಾನಿ ನವಾಜ್ ಷರೀಫ್ ಯತ್ನಿಸಿದ್ದಾರೆ ಎಂದು ವರದಿಯಾಗಿದೆ.</p>.<p>ಭಾರತದ ದಾಳಿಗೆ ಪ್ರತಿಕ್ರಿಯಿಸಬೇಕು ಎಂದು ಪಕ್ಷಗಳು ಮತ್ತು ಜನರಿಂದ ಒತ್ತಡ ಹೆಚ್ಚಿರುವಂತೆಯೇ ನವಾಜ್ ಷರೀಫ್ ಹಿಂಬಾಗಿಲ ಮೂಲಕ ಪರಿಸ್ಥಿತಿ ಶಮನಕ್ಕೆ ಯತ್ನಿಸಿದ್ದಾರೆ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.</p>.<p>ನವಾಜ್ ಷರೀಫ್ ಅವರು ಪ್ರಧಾನಿ ಶೆಹಬಾಜ್ ಷರೀಫ್ ಅವರ ಅಣ್ಣ. ಗುರುವಾರ ನಡೆದ ಸಭೆಯಲ್ಲಿ ಅವರು ‘ರಾಜತಾಂತ್ರಿಕ ಮಾರ್ಗದಲ್ಲಿ ಪರಿಸ್ಥಿತಿ ಶಮನಕ್ಕೆ ಸಲಹೆ ಮಾಡಿದ್ದಾರೆ’ ಎಂದು ವರದಿಗಳು ಉಲ್ಲೇಖಿಸಿವೆ.</p>.<p class="bodytext">‘ಭಾರತದ ವಿರುದ್ಧ ದಾಳಿಯನ್ನು ತೀವ್ರಗೊಳಿಸುವುದರ ಪರವಾಗಿ ನಾನಿಲ್ಲ ಎಂದು ಷರೀಪ್ ಹೇಳಿದ್ದಾರೆ’ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.</p>.<p class="bodytext">ದೇಶದ ಸಾರ್ವಭೌಮತೆ ರಕ್ಷಣೆಗಾಗಿ ಸೇನಾ ಪಡೆಗಳು ದಾಳಿ ನಡೆಸಬೇಕು ಎಂದು ವಿವಿಧ ಪಕ್ಷಗಳ ಸದಸ್ಯರು ಒತ್ತಡ ಹೇರಿದ್ದಾರೆ ಎಂದು ನ್ಯೂಸ್ ಇಂಟರ್ನ್ಯಾಷನಲ್ ವರದಿ ಮಾಡಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಾಹೋರ್:</strong> ಭಾರತದಲ್ಲಿ ತಮಗಿರುವ ಸಂಪರ್ಕವನ್ನು ಬಳಸಿಕೊಂಡು ಈಗಿನ ಬಿಗುವಿನ ಸ್ಥಿತಿಯನ್ನು ಶಮನಗೊಳಿಸಲು ಮಾಜಿ ಪ್ರಧಾನಿ ನವಾಜ್ ಷರೀಫ್ ಯತ್ನಿಸಿದ್ದಾರೆ ಎಂದು ವರದಿಯಾಗಿದೆ.</p>.<p>ಭಾರತದ ದಾಳಿಗೆ ಪ್ರತಿಕ್ರಿಯಿಸಬೇಕು ಎಂದು ಪಕ್ಷಗಳು ಮತ್ತು ಜನರಿಂದ ಒತ್ತಡ ಹೆಚ್ಚಿರುವಂತೆಯೇ ನವಾಜ್ ಷರೀಫ್ ಹಿಂಬಾಗಿಲ ಮೂಲಕ ಪರಿಸ್ಥಿತಿ ಶಮನಕ್ಕೆ ಯತ್ನಿಸಿದ್ದಾರೆ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.</p>.<p>ನವಾಜ್ ಷರೀಫ್ ಅವರು ಪ್ರಧಾನಿ ಶೆಹಬಾಜ್ ಷರೀಫ್ ಅವರ ಅಣ್ಣ. ಗುರುವಾರ ನಡೆದ ಸಭೆಯಲ್ಲಿ ಅವರು ‘ರಾಜತಾಂತ್ರಿಕ ಮಾರ್ಗದಲ್ಲಿ ಪರಿಸ್ಥಿತಿ ಶಮನಕ್ಕೆ ಸಲಹೆ ಮಾಡಿದ್ದಾರೆ’ ಎಂದು ವರದಿಗಳು ಉಲ್ಲೇಖಿಸಿವೆ.</p>.<p class="bodytext">‘ಭಾರತದ ವಿರುದ್ಧ ದಾಳಿಯನ್ನು ತೀವ್ರಗೊಳಿಸುವುದರ ಪರವಾಗಿ ನಾನಿಲ್ಲ ಎಂದು ಷರೀಪ್ ಹೇಳಿದ್ದಾರೆ’ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.</p>.<p class="bodytext">ದೇಶದ ಸಾರ್ವಭೌಮತೆ ರಕ್ಷಣೆಗಾಗಿ ಸೇನಾ ಪಡೆಗಳು ದಾಳಿ ನಡೆಸಬೇಕು ಎಂದು ವಿವಿಧ ಪಕ್ಷಗಳ ಸದಸ್ಯರು ಒತ್ತಡ ಹೇರಿದ್ದಾರೆ ಎಂದು ನ್ಯೂಸ್ ಇಂಟರ್ನ್ಯಾಷನಲ್ ವರದಿ ಮಾಡಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>