<p><strong>ವಿಶ್ವಸಂಸ್ಥೆ:</strong> ಯೆಮೆನ್ನ ಅನೇಕ ಭಾಗಗಳಲ್ಲಿ ದಂಗೆಗಳು ಹೆಚ್ಚುತ್ತಿರುವ ಬಗ್ಗೆ ಭಾರತ ಕಳವಳ ವ್ಯಕ್ತಪಡಿಸಿದೆ.</p>.<p>‘ಈ ಪರಿಸ್ಥಿತಿಯು ಅಲ್ಕೈದಾ ಮತ್ತು ಇಸ್ಲಾಮಿಕ್ ಸ್ಟೇಟ್ನಂತಹ ಉಗ್ರ ಸಂಘಟನೆಗಳಿಗೆ ತಮ್ಮ ಚಟುವಟಿಕೆಗಳನ್ನು ಹರಡಲು ಅವಕಾಶ ನೀಡುತ್ತದೆ ಎಂಬುದು ಆತಂಕಕಾರಿ ವಿಷಯಎಂದು ಭಾರತ ಹೇಳಿದೆ.</p>.<p>ವಿಶ್ವಸಂಸ್ಥೆಯ ಭದ್ರತಾ ಸಮಿತಿಯ ಮಾಸಿಕ ಸಭೆಯು ಈಚೆಗೆ ನಡೆಯಿತು. ಈ ಸಭೆಯಲ್ಲಿ ಮಾತನಾಡಿದ ವಿಶ್ವಸಂಸ್ಥೆಯಲ್ಲಿನ ಭಾರತದ ಕಾಯಂ ಪ್ರತಿನಿಧಿ (ಉಪ) ಕೆ.ನಾಗರಾಜ ನಾಯ್ಡು ಅವರು,‘ತೈಜ್, ಅಲ್ ಜಾವ್ಫ್ ಮತ್ತು ಸನಾದಲ್ಲಿ ನಡೆಯುತ್ತಿರುವ ಸೇನಾ ಸಂಘರ್ಷಗಳು ಆತಂಕವನ್ನುಂಟು ಮಾಡಿದೆ. ಈ ಸಂಘರ್ಷದಿಂದಾಗಿ ಸಾವು–ನೋವು ಉಂಟಾಗಿದೆ. ಆಸ್ತಿಗಳಿಗೆ ಹಾನಿಯಾಗಿದೆ. ಅಲ್ಲದೆ ಹಲವಾರು ನಾಗರಿಕರನ್ನು ಸ್ಥಳಾಂತರಿಸುವ ಪರಿಸ್ಥಿತಿ ಎದುರಾಗಿದೆ’ ಎಂದರು.</p>.<p>‘ಪ್ರಸ್ತುತ ಪರಿಸ್ಥಿತಿಯು ಅಲ್ಕೈದಾ, ಇಸ್ಲಾಮಿಕ್ ಸ್ಟೇಟ್ನಂತಹ ಉಗ್ರ ಸಂಘಟನೆಗೆ ಯೆಮೆನ್ನಲ್ಲಿ ತನ್ನ ಅಸ್ತಿತ್ವವನ್ನು ಬಲಪಡಿಸಲು ಅವಕಾಶ ಮಾಡಿಕೊಟ್ಟಿದೆ. ಇದು ನಿಜಕ್ಕೂ ಆತಂಕಕಾರಿ ವಿಷಯ’ ಎಂದು ಅವರು ತಿಳಿಸಿದರು.</p>.<p>ಈ ವೇಳೆ ನಾಯ್ಡು ಅವರು, ಸೌದಿ ಅರೇಬಿಯಾದ ಮೇಲೆ ಅನ್ಸರಲ್ಲಾ ಬೆಂಬಲಿಗರು ನಡೆಸುತ್ತಿರುವ ಕ್ಷಿಪಣಿ ಮತ್ತು ಡ್ರೋನ್ ದಾಳಿಯನ್ನು ಖಂಡಿಸಿದರು. </p>.<p>‘ನಾಗರಿಕ ಮತ್ತು ಇಂಧನ ಮೂಲ ಸೌಕರ್ಯಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದ್ದಾರೆ. ಈ ವಿಷಯದ ಕುರಿತಂತೆ ರಾಜಕೀಯ ಇತ್ಯರ್ಥಕ್ಕಾಗಿ ಎಲ್ಲಾ ಪಕ್ಷಗಳು ಮಾತುಕತೆ ನಡೆಸಿ, ಕಠಿಣ ಕ್ರಮಕೈಗೊಳ್ಳಬೇಕು’ ಎಂದು ಅವರು ಹೇಳಿದರು.</p>.<p>‘ಸೌದಿ ಅರೇಬಿಯಾದ ನಾಗರಿಕರು ಮತ್ತು ವಾಣಿಜ್ಯ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗುತ್ತಿದೆ. 10 ಲಕ್ಷಕ್ಕೂ ಹೆಚ್ಚು ಜನರನ್ನು ಆಂತರಿಕವಾಗಿ ಸ್ಥಳಾಂತರಿಸಲಾಗಿದೆ’ ಎಂದು ಯೆಮೆನ್ನ ವಿಶೇಷ ರಾಯಭಾರಿ ಮಾರ್ಟಿನ್ ಗ್ರಿಫಿತ್ಸ್ ಅವರು ಮಾಹಿತಿ ನೀಡಿದರು.</p>.<p>‘ರಾಜಕೀಯ ಪ್ರಕ್ರಿಯೆಯನ್ನು ಪುನರಾರಂಭಿಸಲು ಯಾವುದೇ ಪೂರ್ವಭಾವಿ ಷರತ್ತುಗಳು ಇರಬಾರದು. ಈ ಪರಿಸ್ಥಿತಿಯನ್ನು ಎದುರಿಸಲು ವಿಶ್ವಸಂಸ್ಥೆಯೊಂದಿಗೆ ಎಲ್ಲಾ ಹಂತಗಳಲ್ಲಿ ನಿರಂತರವಾಗಿ ಮತ್ತು ಗಂಭೀರವಾಗಿ ತೊಡಗಿಸಿಕೊಳ್ಳುವ ಅಗತ್ಯವಿದೆ’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಶ್ವಸಂಸ್ಥೆ:</strong> ಯೆಮೆನ್ನ ಅನೇಕ ಭಾಗಗಳಲ್ಲಿ ದಂಗೆಗಳು ಹೆಚ್ಚುತ್ತಿರುವ ಬಗ್ಗೆ ಭಾರತ ಕಳವಳ ವ್ಯಕ್ತಪಡಿಸಿದೆ.</p>.<p>‘ಈ ಪರಿಸ್ಥಿತಿಯು ಅಲ್ಕೈದಾ ಮತ್ತು ಇಸ್ಲಾಮಿಕ್ ಸ್ಟೇಟ್ನಂತಹ ಉಗ್ರ ಸಂಘಟನೆಗಳಿಗೆ ತಮ್ಮ ಚಟುವಟಿಕೆಗಳನ್ನು ಹರಡಲು ಅವಕಾಶ ನೀಡುತ್ತದೆ ಎಂಬುದು ಆತಂಕಕಾರಿ ವಿಷಯಎಂದು ಭಾರತ ಹೇಳಿದೆ.</p>.<p>ವಿಶ್ವಸಂಸ್ಥೆಯ ಭದ್ರತಾ ಸಮಿತಿಯ ಮಾಸಿಕ ಸಭೆಯು ಈಚೆಗೆ ನಡೆಯಿತು. ಈ ಸಭೆಯಲ್ಲಿ ಮಾತನಾಡಿದ ವಿಶ್ವಸಂಸ್ಥೆಯಲ್ಲಿನ ಭಾರತದ ಕಾಯಂ ಪ್ರತಿನಿಧಿ (ಉಪ) ಕೆ.ನಾಗರಾಜ ನಾಯ್ಡು ಅವರು,‘ತೈಜ್, ಅಲ್ ಜಾವ್ಫ್ ಮತ್ತು ಸನಾದಲ್ಲಿ ನಡೆಯುತ್ತಿರುವ ಸೇನಾ ಸಂಘರ್ಷಗಳು ಆತಂಕವನ್ನುಂಟು ಮಾಡಿದೆ. ಈ ಸಂಘರ್ಷದಿಂದಾಗಿ ಸಾವು–ನೋವು ಉಂಟಾಗಿದೆ. ಆಸ್ತಿಗಳಿಗೆ ಹಾನಿಯಾಗಿದೆ. ಅಲ್ಲದೆ ಹಲವಾರು ನಾಗರಿಕರನ್ನು ಸ್ಥಳಾಂತರಿಸುವ ಪರಿಸ್ಥಿತಿ ಎದುರಾಗಿದೆ’ ಎಂದರು.</p>.<p>‘ಪ್ರಸ್ತುತ ಪರಿಸ್ಥಿತಿಯು ಅಲ್ಕೈದಾ, ಇಸ್ಲಾಮಿಕ್ ಸ್ಟೇಟ್ನಂತಹ ಉಗ್ರ ಸಂಘಟನೆಗೆ ಯೆಮೆನ್ನಲ್ಲಿ ತನ್ನ ಅಸ್ತಿತ್ವವನ್ನು ಬಲಪಡಿಸಲು ಅವಕಾಶ ಮಾಡಿಕೊಟ್ಟಿದೆ. ಇದು ನಿಜಕ್ಕೂ ಆತಂಕಕಾರಿ ವಿಷಯ’ ಎಂದು ಅವರು ತಿಳಿಸಿದರು.</p>.<p>ಈ ವೇಳೆ ನಾಯ್ಡು ಅವರು, ಸೌದಿ ಅರೇಬಿಯಾದ ಮೇಲೆ ಅನ್ಸರಲ್ಲಾ ಬೆಂಬಲಿಗರು ನಡೆಸುತ್ತಿರುವ ಕ್ಷಿಪಣಿ ಮತ್ತು ಡ್ರೋನ್ ದಾಳಿಯನ್ನು ಖಂಡಿಸಿದರು. </p>.<p>‘ನಾಗರಿಕ ಮತ್ತು ಇಂಧನ ಮೂಲ ಸೌಕರ್ಯಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದ್ದಾರೆ. ಈ ವಿಷಯದ ಕುರಿತಂತೆ ರಾಜಕೀಯ ಇತ್ಯರ್ಥಕ್ಕಾಗಿ ಎಲ್ಲಾ ಪಕ್ಷಗಳು ಮಾತುಕತೆ ನಡೆಸಿ, ಕಠಿಣ ಕ್ರಮಕೈಗೊಳ್ಳಬೇಕು’ ಎಂದು ಅವರು ಹೇಳಿದರು.</p>.<p>‘ಸೌದಿ ಅರೇಬಿಯಾದ ನಾಗರಿಕರು ಮತ್ತು ವಾಣಿಜ್ಯ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗುತ್ತಿದೆ. 10 ಲಕ್ಷಕ್ಕೂ ಹೆಚ್ಚು ಜನರನ್ನು ಆಂತರಿಕವಾಗಿ ಸ್ಥಳಾಂತರಿಸಲಾಗಿದೆ’ ಎಂದು ಯೆಮೆನ್ನ ವಿಶೇಷ ರಾಯಭಾರಿ ಮಾರ್ಟಿನ್ ಗ್ರಿಫಿತ್ಸ್ ಅವರು ಮಾಹಿತಿ ನೀಡಿದರು.</p>.<p>‘ರಾಜಕೀಯ ಪ್ರಕ್ರಿಯೆಯನ್ನು ಪುನರಾರಂಭಿಸಲು ಯಾವುದೇ ಪೂರ್ವಭಾವಿ ಷರತ್ತುಗಳು ಇರಬಾರದು. ಈ ಪರಿಸ್ಥಿತಿಯನ್ನು ಎದುರಿಸಲು ವಿಶ್ವಸಂಸ್ಥೆಯೊಂದಿಗೆ ಎಲ್ಲಾ ಹಂತಗಳಲ್ಲಿ ನಿರಂತರವಾಗಿ ಮತ್ತು ಗಂಭೀರವಾಗಿ ತೊಡಗಿಸಿಕೊಳ್ಳುವ ಅಗತ್ಯವಿದೆ’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>