<p><strong>ಲಂಡನ್</strong>: ‘ನಾನು ಯಾವುದೇ ತಪ್ಪು ಮಾಡಿಲ್ಲ’ ಎಂದು ಬ್ರಿಟನ್ನ ಲೇಬರ್ ಪಕ್ಷದ ಸಂಸದೆ ತುಲಿಪ್ ರಿಜ್ವಾನಾ ಸಿದ್ದಿಕ್ ತಿಳಿಸಿದ್ದಾರೆ.</p>.<p>ರಾಜಕೀಯ ಅಧಿಕಾರ ದುರುಪಯೋಗಪಡಿಸಿಕೊಂಡು, ಅಕ್ರಮವಾಗಿ ಆಸ್ತಿ ಸಂಪಾದಿಸಿದ ಆರೋಪದ ಮೇಲೆ ಭ್ರಷ್ಟಾಚಾರ ನಿಗ್ರಹ ಆಯೋಗವು(ಎಸಿಸಿ) ಸಲ್ಲಿಸಿದ ದೋಷಾರೋಪ ಪಟ್ಟಿ ಆಧರಿಸಿ, ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ, ಆಕೆಯ ಸಹೋದರಿ ಶೇಖ್ ರೆಹಾನಾ, ಸಂಬಂಧಿ, ಬ್ರಿಟನ್ನ ಸಂಸದೆ ತುಲಿಪ್ ರಿಜ್ವಾನಾ ಸಿದ್ದಿಕ್ ಹಾಗೂ 50 ಮಂದಿಯ ವಿರುದ್ಧ ಬಾಂಗ್ಲಾದೇಶ ನ್ಯಾಯಾಲಯವು ಭಾನುವಾರ ಬಂಧನದ ವಾರಂಟ್ ಹೊರಡಿಸಿತ್ತು. ಇದರ ಬೆನ್ನಲ್ಲೇ, ಈ ಸ್ಪಷ್ಟನೆ ನೀಡಿದ್ದಾರೆ.</p>.<p class="title">ಕುಟುಂಬದೊಂದಿಗಿನ ಸಂಬಂಧದಿಂದ, ಪ್ರಧಾನಿ ಕಿಯರ್ ಸ್ಟಾರ್ಮರ್ ಸರ್ಕಾರದಲ್ಲಿ ಕೆಲಸ ಮಾಡಲು ಕಷ್ಟವಾಗುತ್ತಿದೆ ಎಂದು ತಿಳಿಸಿ ಬ್ರಿಟನ್ನ ಹಣಕಾಸು ಇಲಾಖಾ ಸಚಿವ ಸ್ಥಾನಕ್ಕೆ ತುಲಿಪ್ ಸಿದ್ದಿಕ್ ಅವರು ಕಳೆದ ಜನವರಿ ತಿಂಗಳಿನಲ್ಲೇ ರಾಜೀನಾಮೆ ನೀಡಿದ್ದರು.</p>.<p class="title">‘ಈಗ ಅವರ ವಿರುದ್ಧ ಕೇಳಿಬಂದಿರುವ ಭ್ರಷ್ಟಾಚಾರದ ಆರೋಪ ಸಂಪೂರ್ಣ ಆಧಾರರಹಿತವಾಗಿದೆ’ ಎಂದು ಅವರ ವಕ್ತಾರರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಂಡನ್</strong>: ‘ನಾನು ಯಾವುದೇ ತಪ್ಪು ಮಾಡಿಲ್ಲ’ ಎಂದು ಬ್ರಿಟನ್ನ ಲೇಬರ್ ಪಕ್ಷದ ಸಂಸದೆ ತುಲಿಪ್ ರಿಜ್ವಾನಾ ಸಿದ್ದಿಕ್ ತಿಳಿಸಿದ್ದಾರೆ.</p>.<p>ರಾಜಕೀಯ ಅಧಿಕಾರ ದುರುಪಯೋಗಪಡಿಸಿಕೊಂಡು, ಅಕ್ರಮವಾಗಿ ಆಸ್ತಿ ಸಂಪಾದಿಸಿದ ಆರೋಪದ ಮೇಲೆ ಭ್ರಷ್ಟಾಚಾರ ನಿಗ್ರಹ ಆಯೋಗವು(ಎಸಿಸಿ) ಸಲ್ಲಿಸಿದ ದೋಷಾರೋಪ ಪಟ್ಟಿ ಆಧರಿಸಿ, ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ, ಆಕೆಯ ಸಹೋದರಿ ಶೇಖ್ ರೆಹಾನಾ, ಸಂಬಂಧಿ, ಬ್ರಿಟನ್ನ ಸಂಸದೆ ತುಲಿಪ್ ರಿಜ್ವಾನಾ ಸಿದ್ದಿಕ್ ಹಾಗೂ 50 ಮಂದಿಯ ವಿರುದ್ಧ ಬಾಂಗ್ಲಾದೇಶ ನ್ಯಾಯಾಲಯವು ಭಾನುವಾರ ಬಂಧನದ ವಾರಂಟ್ ಹೊರಡಿಸಿತ್ತು. ಇದರ ಬೆನ್ನಲ್ಲೇ, ಈ ಸ್ಪಷ್ಟನೆ ನೀಡಿದ್ದಾರೆ.</p>.<p class="title">ಕುಟುಂಬದೊಂದಿಗಿನ ಸಂಬಂಧದಿಂದ, ಪ್ರಧಾನಿ ಕಿಯರ್ ಸ್ಟಾರ್ಮರ್ ಸರ್ಕಾರದಲ್ಲಿ ಕೆಲಸ ಮಾಡಲು ಕಷ್ಟವಾಗುತ್ತಿದೆ ಎಂದು ತಿಳಿಸಿ ಬ್ರಿಟನ್ನ ಹಣಕಾಸು ಇಲಾಖಾ ಸಚಿವ ಸ್ಥಾನಕ್ಕೆ ತುಲಿಪ್ ಸಿದ್ದಿಕ್ ಅವರು ಕಳೆದ ಜನವರಿ ತಿಂಗಳಿನಲ್ಲೇ ರಾಜೀನಾಮೆ ನೀಡಿದ್ದರು.</p>.<p class="title">‘ಈಗ ಅವರ ವಿರುದ್ಧ ಕೇಳಿಬಂದಿರುವ ಭ್ರಷ್ಟಾಚಾರದ ಆರೋಪ ಸಂಪೂರ್ಣ ಆಧಾರರಹಿತವಾಗಿದೆ’ ಎಂದು ಅವರ ವಕ್ತಾರರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>