<p><strong>ಕಠ್ಮಂಡು: </strong>ನಿವೃತ್ತಿ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕರ್ಕಿ ಅವರು ನೇಪಾಳ ಮಧ್ಯಂತರ ಸರ್ಕಾರ ಉಸ್ತುವಾರಿಯಾಗಿ ನೇಮಕವಾಗುವ ಸಾಧ್ಯತೆ ದಟ್ಟವಾಗಿದೆ. ಈ ಸರ್ಕಾರವು, ಪ್ರತಿಭಟನಾಕಾರರ ಬೇಡಿಕೆಗಳನ್ನು ಈಡೇರಿಸಲಿದ್ದು, ಹೊಸದಾಗಿ ಚುನಾವಣೆಗಳನ್ನು ನಡೆಸಲಿದೆ ಎಂದು ಮೂಲಗಳು ತಿಳಿಸಿವೆ.</p><p>ಸರ್ಕಾರದ ವಿರುದ್ಧ 'ಜೆನ್ ಝೀ' ಗುಂಪುಗಳು ನಡೆಸುತ್ತಿದ್ದ ಪ್ರತಿಭಟನೆಯು ನೇಪಾಳ ಅಧ್ಯಕ್ಷ ಹಾಗೂ ಸೇನಾ ಪಡೆ ಮುಖ್ಯಸ್ಥ ರಾಮಚಂದ್ರ ಪೌಡೆಲ್ ಸೇರಿದಂತೆ ವಿವಿಧ ಪಾಲುದಾರರು ನಡೆಸಿದ ಮಾತುಕತೆಯ ಫಲವಾಗಿ ಗುರುವಾರ ಮಧ್ಯರಾತ್ರಿ ಅನಿರ್ದಿಷ್ಟಾವಧಿಗೆ ಕೊನೆಯಾಗಿದೆ.</p><p>ಆದಾಗ್ಯೂ, 'ಜೆನ್–ಝೀ' ಗುಂಪುಗಳು ನೂತನ ಪ್ರಧಾನಿ ಹುದ್ದೆಗೆ ಕರ್ಕಿ ಅವರ ಹೆಸರನ್ನು ಪ್ರಸ್ತಾಪಿಸಿವೆ. ಹಾಗಾಗಿ, ಅಧ್ಯಕ್ಷ ಪೌಡೆಲ್ ಅವರು ಕರ್ಕಿ ಅವರನ್ನು ನೇಪಾಳದ ಮೊದಲ ಮಹಿಳಾ ಪ್ರಧಾನಿಯನ್ನಾಗಿ ಶುಕ್ರವಾರ ನೇಮಕ ಮಾಡಲಿದ್ದಾರೆ ಎಂಬುದಾಗಿ ವರದಿಯಾಗಿದೆ.</p><p>ಪ್ರಸ್ತುತ ತಲೆದೋರಿರುವ ರಾಜಕೀಯ ಬಿಕ್ಕಟ್ಟನ್ನು ಶಮನಗೊಳಿಸುವ ನಿಟ್ಟಿನಲ್ಲಿ ಪೌಡೆಲ್ ಅವರು ವಿವಿಧ ಪಕ್ಷಗಳ ರಾಜಕೀಯ ನಾಯಕರು ಮತ್ತು ಸಾಂವಿಧಾನಿಕ ತಜ್ಞರೊಂದಿಗೆ ಸಮಾಲೋಚನೆ ನಡೆಸುತ್ತಿದ್ದಾರೆ ಎಂಬ ಸುದ್ದಿ ಅಧ್ಯಕ್ಷರ ಆಪ್ತ ವಲಯದಿಂದ ಬಂದಿದೆ.</p>.ಸಂಸತ್ ವಿಸರ್ಜಿಸಿ, ಸಂವಿಧಾನಕ್ಕೆ ತಿದ್ದುಪಡಿ ತನ್ನಿ: ಬೇಡಿಕೆ ಎತ್ತಿದ ಜೆನ್-ಝಿ .ನೇಪಾಳ: ಮಧ್ಯಂತರ ಸರ್ಕಾರ ರಚನೆ ಕಗ್ಗಂಟು.<p>ಪ್ರತಿಭಟನಾನಿರತರು ಸಾಂವಿಧಾನಿಕ ಚೌಕಟ್ಟಿಲ್ಲಿಯೇ ಪರಿಹಾರ ಕಂಡುಕೊಳ್ಳಲು ಒಪ್ಪಿಗೆ ಸೂಚಿಸಿದ್ದಾರೆ. ಹಾಗಾಗಿ, ಸದ್ಯದ ಸಂಸತ್ ಅನ್ನು ವಿಸರ್ಜಿಸುವುದು ಅಥವಾ ಅದನ್ನೇ ಮುಂದುವರಿಸುವ ಆಯ್ಕೆಗಳನ್ನು ಪರಿಗಣಿಸಲಾಗಿದೆ ಎನ್ನಲಾಗಿದೆ.</p><p>ಏತನ್ಮಧ್ಯೆ, ರಾತ್ರಿಯಿಡೀ ಹೇರಲಾಗಿದ್ದ ಕರ್ಫ್ಯೂ ಅನ್ನು ಸಡಿಲಿಸಲಾಗಿದೆ. ದೈನಂದಿನ ವ್ಯವಹಾರಗಳಿಗೆ ಅನುಕೂಲವಾಗುವಂತೆ ಬೆಳಿಗ್ಗೆ 7ರಿಂದ 11ರವರೆಗೆ ಸಮಯಾವಕಾಶ ನೀಡಲಾಗಿದೆ. ನಂತರ, ಸಂಜೆ 5ರ ವರೆಗೆ ರಾಷ್ಟ್ರದಾದ್ಯಂತ ನಿರ್ಬಂಧ ಕ್ರಮಗಳು ಜಾರಿಯಲ್ಲಿರಲಿದೆ.</p><p>ಭ್ರಷ್ಟಾಚಾರ ಹಾಗೂ ಸಾಮಾಜಿಕ ಮಾಧ್ಯಮಗಳ ಮೇಲಿನ ನಿರ್ಬಂಧವನ್ನು ಖಂಡಿಸಿ ಸರ್ಕಾರದ ವಿರುದ್ಧ ಪ್ರತಿಭಟನೆಗಳು ತೀವ್ರಗೊಳ್ಳುತ್ತಿದ್ದಂತೆ ಕೆ.ಪಿ. ಶರ್ಮಾ ಓಲಿ ಅವರು ಪ್ರಧಾನಿ ಹುದ್ದೆಗೆ ಮಂಗಳವಾರ ರಾಜೀನಾಮೆ ನೀಡಿದ್ದಾರೆ.</p><p>ಓಲಿ ರಾಜೀನಾಮೆಯನ್ನು ಅಂಗೀಕರಿಸಿರುವ ಪೌಡೆಲ್, ಹೊಸ ಸಚಿವ ಸಂಪುಟ ರಚನೆಯಾಗುವವರೆಗೆ ಸರ್ಕಾರ ಮುಂದುವರಿಯಲಿದೆ ಎಂದು ಹೇಳಿದ್ದರು.</p><p>ದೇಶದಾದ್ಯಂತ ನಡೆದ ಪ್ರತಿಭಟನೆ ವೇಳೆ ಮೃತಪಟ್ಟವರ ಸಂಖ್ಯೆ 34ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.</p>.ಸಂಪಾದಕೀಯ | ಯುವಶಕ್ತಿಯ ಆಕ್ರೋಶ ಸ್ಫೋಟ; ಮಗ್ಗುಲು ಬದಲಿಸಿದ ನೇಪಾಳ .ನೇಪಾಳ | ಪ್ರಧಾನಿ ಕುರ್ಚಿಗೆ ಕುತ್ತು ತಂದ ‘ನಿಷೇಧ’.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಠ್ಮಂಡು: </strong>ನಿವೃತ್ತಿ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕರ್ಕಿ ಅವರು ನೇಪಾಳ ಮಧ್ಯಂತರ ಸರ್ಕಾರ ಉಸ್ತುವಾರಿಯಾಗಿ ನೇಮಕವಾಗುವ ಸಾಧ್ಯತೆ ದಟ್ಟವಾಗಿದೆ. ಈ ಸರ್ಕಾರವು, ಪ್ರತಿಭಟನಾಕಾರರ ಬೇಡಿಕೆಗಳನ್ನು ಈಡೇರಿಸಲಿದ್ದು, ಹೊಸದಾಗಿ ಚುನಾವಣೆಗಳನ್ನು ನಡೆಸಲಿದೆ ಎಂದು ಮೂಲಗಳು ತಿಳಿಸಿವೆ.</p><p>ಸರ್ಕಾರದ ವಿರುದ್ಧ 'ಜೆನ್ ಝೀ' ಗುಂಪುಗಳು ನಡೆಸುತ್ತಿದ್ದ ಪ್ರತಿಭಟನೆಯು ನೇಪಾಳ ಅಧ್ಯಕ್ಷ ಹಾಗೂ ಸೇನಾ ಪಡೆ ಮುಖ್ಯಸ್ಥ ರಾಮಚಂದ್ರ ಪೌಡೆಲ್ ಸೇರಿದಂತೆ ವಿವಿಧ ಪಾಲುದಾರರು ನಡೆಸಿದ ಮಾತುಕತೆಯ ಫಲವಾಗಿ ಗುರುವಾರ ಮಧ್ಯರಾತ್ರಿ ಅನಿರ್ದಿಷ್ಟಾವಧಿಗೆ ಕೊನೆಯಾಗಿದೆ.</p><p>ಆದಾಗ್ಯೂ, 'ಜೆನ್–ಝೀ' ಗುಂಪುಗಳು ನೂತನ ಪ್ರಧಾನಿ ಹುದ್ದೆಗೆ ಕರ್ಕಿ ಅವರ ಹೆಸರನ್ನು ಪ್ರಸ್ತಾಪಿಸಿವೆ. ಹಾಗಾಗಿ, ಅಧ್ಯಕ್ಷ ಪೌಡೆಲ್ ಅವರು ಕರ್ಕಿ ಅವರನ್ನು ನೇಪಾಳದ ಮೊದಲ ಮಹಿಳಾ ಪ್ರಧಾನಿಯನ್ನಾಗಿ ಶುಕ್ರವಾರ ನೇಮಕ ಮಾಡಲಿದ್ದಾರೆ ಎಂಬುದಾಗಿ ವರದಿಯಾಗಿದೆ.</p><p>ಪ್ರಸ್ತುತ ತಲೆದೋರಿರುವ ರಾಜಕೀಯ ಬಿಕ್ಕಟ್ಟನ್ನು ಶಮನಗೊಳಿಸುವ ನಿಟ್ಟಿನಲ್ಲಿ ಪೌಡೆಲ್ ಅವರು ವಿವಿಧ ಪಕ್ಷಗಳ ರಾಜಕೀಯ ನಾಯಕರು ಮತ್ತು ಸಾಂವಿಧಾನಿಕ ತಜ್ಞರೊಂದಿಗೆ ಸಮಾಲೋಚನೆ ನಡೆಸುತ್ತಿದ್ದಾರೆ ಎಂಬ ಸುದ್ದಿ ಅಧ್ಯಕ್ಷರ ಆಪ್ತ ವಲಯದಿಂದ ಬಂದಿದೆ.</p>.ಸಂಸತ್ ವಿಸರ್ಜಿಸಿ, ಸಂವಿಧಾನಕ್ಕೆ ತಿದ್ದುಪಡಿ ತನ್ನಿ: ಬೇಡಿಕೆ ಎತ್ತಿದ ಜೆನ್-ಝಿ .ನೇಪಾಳ: ಮಧ್ಯಂತರ ಸರ್ಕಾರ ರಚನೆ ಕಗ್ಗಂಟು.<p>ಪ್ರತಿಭಟನಾನಿರತರು ಸಾಂವಿಧಾನಿಕ ಚೌಕಟ್ಟಿಲ್ಲಿಯೇ ಪರಿಹಾರ ಕಂಡುಕೊಳ್ಳಲು ಒಪ್ಪಿಗೆ ಸೂಚಿಸಿದ್ದಾರೆ. ಹಾಗಾಗಿ, ಸದ್ಯದ ಸಂಸತ್ ಅನ್ನು ವಿಸರ್ಜಿಸುವುದು ಅಥವಾ ಅದನ್ನೇ ಮುಂದುವರಿಸುವ ಆಯ್ಕೆಗಳನ್ನು ಪರಿಗಣಿಸಲಾಗಿದೆ ಎನ್ನಲಾಗಿದೆ.</p><p>ಏತನ್ಮಧ್ಯೆ, ರಾತ್ರಿಯಿಡೀ ಹೇರಲಾಗಿದ್ದ ಕರ್ಫ್ಯೂ ಅನ್ನು ಸಡಿಲಿಸಲಾಗಿದೆ. ದೈನಂದಿನ ವ್ಯವಹಾರಗಳಿಗೆ ಅನುಕೂಲವಾಗುವಂತೆ ಬೆಳಿಗ್ಗೆ 7ರಿಂದ 11ರವರೆಗೆ ಸಮಯಾವಕಾಶ ನೀಡಲಾಗಿದೆ. ನಂತರ, ಸಂಜೆ 5ರ ವರೆಗೆ ರಾಷ್ಟ್ರದಾದ್ಯಂತ ನಿರ್ಬಂಧ ಕ್ರಮಗಳು ಜಾರಿಯಲ್ಲಿರಲಿದೆ.</p><p>ಭ್ರಷ್ಟಾಚಾರ ಹಾಗೂ ಸಾಮಾಜಿಕ ಮಾಧ್ಯಮಗಳ ಮೇಲಿನ ನಿರ್ಬಂಧವನ್ನು ಖಂಡಿಸಿ ಸರ್ಕಾರದ ವಿರುದ್ಧ ಪ್ರತಿಭಟನೆಗಳು ತೀವ್ರಗೊಳ್ಳುತ್ತಿದ್ದಂತೆ ಕೆ.ಪಿ. ಶರ್ಮಾ ಓಲಿ ಅವರು ಪ್ರಧಾನಿ ಹುದ್ದೆಗೆ ಮಂಗಳವಾರ ರಾಜೀನಾಮೆ ನೀಡಿದ್ದಾರೆ.</p><p>ಓಲಿ ರಾಜೀನಾಮೆಯನ್ನು ಅಂಗೀಕರಿಸಿರುವ ಪೌಡೆಲ್, ಹೊಸ ಸಚಿವ ಸಂಪುಟ ರಚನೆಯಾಗುವವರೆಗೆ ಸರ್ಕಾರ ಮುಂದುವರಿಯಲಿದೆ ಎಂದು ಹೇಳಿದ್ದರು.</p><p>ದೇಶದಾದ್ಯಂತ ನಡೆದ ಪ್ರತಿಭಟನೆ ವೇಳೆ ಮೃತಪಟ್ಟವರ ಸಂಖ್ಯೆ 34ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.</p>.ಸಂಪಾದಕೀಯ | ಯುವಶಕ್ತಿಯ ಆಕ್ರೋಶ ಸ್ಫೋಟ; ಮಗ್ಗುಲು ಬದಲಿಸಿದ ನೇಪಾಳ .ನೇಪಾಳ | ಪ್ರಧಾನಿ ಕುರ್ಚಿಗೆ ಕುತ್ತು ತಂದ ‘ನಿಷೇಧ’.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>