<p><strong>ಇಸ್ಲಾಮಾಬಾದ್</strong>: ಚುನಾವಣಾ ಅಕ್ರಮಗಳ ಆರೋಪಗಳ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಸಿಕಂದರ್ ಸುಲ್ತಾನ್ ರಾಜಾ ತಕ್ಷಣವೇ ರಾಜೀನಾಮೆ ನೀಡಬೇಕು ಎಂಬ ಬೇಡಿಕೆಯನ್ನು ಪಾಕಿಸ್ತಾನ್ ತೆಹ್ರೀಕ್ ಇ ಇನ್ಸಾಫ್ (ಪಿಟಿಐ) ಪಕ್ಷ ಆಗ್ರಹಿಸಿದೆ.</p>.<p>ಮಾಜಿ ಪ್ರಧಾನಿ ಇಮ್ರಾನ್ ಖಾನ್ ನೇತೃತ್ವದ ಪಿಟಿಐ ಪಕ್ಷದ ಮುಖಂಡರು, ರಾಷ್ಟ್ರೀಯ ಅಸೆಂಬ್ಲಿ ಸದಸ್ಯರು ಭಾನುವಾರ, ಸಿಇಸಿ ರಾಜೀನಾಮೆಗೆ ಆಗ್ರಹಪಡಿಸಿ ಸಂಸತ್ ಆವರಣದಿಂದ ಆಯೋಗದ ಕಚೇರಿಯವರೆಗೂ ಪ್ರತಿಭಟನಾ ಜಾಥಾ ನಡೆಸಿದರು. </p>.<p>ಪ್ರತಿಪಕ್ಷದ ನಯಕ ಒಮರ್ ಅಯೂಬ್ ನೇತೃತ್ವ ವಹಿಸಿದ್ದರು. ಫೆಬ್ರುವರಿಯಲ್ಲಿ ನಡೆದಿದ್ದ ಸಾರ್ವತ್ರಿಕ ಚುನಾವಣೆಯಲ್ಲಿ ಭಾರಿ ಅಕ್ರಮ ನಡೆದಿದೆ ಎಂದು ವಿಪಕ್ಷಗಳು ಆರೋಪಿಸಿವೆ.</p>.<p>ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸುವುದು ಆಯೋಗದ ಹೊಣೆಗಾರಿಕೆ. ಆದರೆ, ಆಯೋಗ ಇದರಲ್ಲಿ ವಿಫಲವಾಗಿದೆ ಎಂದು ಪ್ರತಿಭಟನಕಾರರು ಟೀಕಿಸಿದರು ಎಂದು ‘ದ ನ್ಯೂಸ್ ಇಂಟರ್ನ್ಯಾಷನಲ್’ ದೈನಿಕ ವರದಿ ಮಾಡಿದೆ.</p>.<p>ಇದೇ ಸಂದರ್ಭದಲ್ಲಿ ಪ್ರತಿಭಟನಕಾರರು, ಬಂಧನದಲ್ಲಿರುವ ಇಮ್ರಾನ್ ಖಾನ್ ಬಿಡುಗಡೆಗೆ ಆಗ್ರಹಪಡಿಸಿ ಘೋಷಣೆ ಕೂಗಿದರು. ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ಇಮ್ರಾನ್ ಖಾನ್, ಕಳೆದ ವರ್ಷ ಸೆಪ್ಟೆಂಬರ್ನಿಂದ ರಾವಲ್ಪಿಂಡಿಯ ಜೈಲಿನಲ್ಲಿ ಇದ್ದಾರೆ.</p>.<p>ಪಿಟಿಐ ಅಧ್ಯಕ್ಷ ಬ್ಯಾರಿಸ್ಟರ್ ಗೋಹರ್ ಖಾನ್ ಅವರು, ‘ವಿರೋಧ ಪಕ್ಷಗಳ ನಾಯಕರಿಗೆ ಕೋರ್ಟ್ಗಳ ಬಾಗಿಲುಗಳು ಮುಚ್ಚಿವೆ. ನಮ್ಮ ಮಹಿಳೆಯರು ಜೈಲಿನಲ್ಲಿ ಇದ್ದಾರೆ. ಇತಿಹಾಸ ಎಂದಿಗೂ ಈ ಸಂಗತಿಗಳನ್ನು ನೆನಪಿನಲ್ಲಿ ಇಡಲಿದೆ’ ಎಂದು ಕಿಡಿಕಾರಿದರು.</p>.<p>ಫೆಬ್ರುವರಿಯಲ್ಲಿ ನಡೆದಿದ್ದ ಸಾರ್ವತ್ರಿಕ ಚುನಾವಣೆಯಲ್ಲಿ, ಒಟ್ಟು 265 ಸದಸ್ಯ ಬಲದ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಪಿಟಿಐ 93 ಸ್ಥಾನಗಳನ್ನು ಗೆದ್ದುಕೊಂಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಸ್ಲಾಮಾಬಾದ್</strong>: ಚುನಾವಣಾ ಅಕ್ರಮಗಳ ಆರೋಪಗಳ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಸಿಕಂದರ್ ಸುಲ್ತಾನ್ ರಾಜಾ ತಕ್ಷಣವೇ ರಾಜೀನಾಮೆ ನೀಡಬೇಕು ಎಂಬ ಬೇಡಿಕೆಯನ್ನು ಪಾಕಿಸ್ತಾನ್ ತೆಹ್ರೀಕ್ ಇ ಇನ್ಸಾಫ್ (ಪಿಟಿಐ) ಪಕ್ಷ ಆಗ್ರಹಿಸಿದೆ.</p>.<p>ಮಾಜಿ ಪ್ರಧಾನಿ ಇಮ್ರಾನ್ ಖಾನ್ ನೇತೃತ್ವದ ಪಿಟಿಐ ಪಕ್ಷದ ಮುಖಂಡರು, ರಾಷ್ಟ್ರೀಯ ಅಸೆಂಬ್ಲಿ ಸದಸ್ಯರು ಭಾನುವಾರ, ಸಿಇಸಿ ರಾಜೀನಾಮೆಗೆ ಆಗ್ರಹಪಡಿಸಿ ಸಂಸತ್ ಆವರಣದಿಂದ ಆಯೋಗದ ಕಚೇರಿಯವರೆಗೂ ಪ್ರತಿಭಟನಾ ಜಾಥಾ ನಡೆಸಿದರು. </p>.<p>ಪ್ರತಿಪಕ್ಷದ ನಯಕ ಒಮರ್ ಅಯೂಬ್ ನೇತೃತ್ವ ವಹಿಸಿದ್ದರು. ಫೆಬ್ರುವರಿಯಲ್ಲಿ ನಡೆದಿದ್ದ ಸಾರ್ವತ್ರಿಕ ಚುನಾವಣೆಯಲ್ಲಿ ಭಾರಿ ಅಕ್ರಮ ನಡೆದಿದೆ ಎಂದು ವಿಪಕ್ಷಗಳು ಆರೋಪಿಸಿವೆ.</p>.<p>ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸುವುದು ಆಯೋಗದ ಹೊಣೆಗಾರಿಕೆ. ಆದರೆ, ಆಯೋಗ ಇದರಲ್ಲಿ ವಿಫಲವಾಗಿದೆ ಎಂದು ಪ್ರತಿಭಟನಕಾರರು ಟೀಕಿಸಿದರು ಎಂದು ‘ದ ನ್ಯೂಸ್ ಇಂಟರ್ನ್ಯಾಷನಲ್’ ದೈನಿಕ ವರದಿ ಮಾಡಿದೆ.</p>.<p>ಇದೇ ಸಂದರ್ಭದಲ್ಲಿ ಪ್ರತಿಭಟನಕಾರರು, ಬಂಧನದಲ್ಲಿರುವ ಇಮ್ರಾನ್ ಖಾನ್ ಬಿಡುಗಡೆಗೆ ಆಗ್ರಹಪಡಿಸಿ ಘೋಷಣೆ ಕೂಗಿದರು. ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ಇಮ್ರಾನ್ ಖಾನ್, ಕಳೆದ ವರ್ಷ ಸೆಪ್ಟೆಂಬರ್ನಿಂದ ರಾವಲ್ಪಿಂಡಿಯ ಜೈಲಿನಲ್ಲಿ ಇದ್ದಾರೆ.</p>.<p>ಪಿಟಿಐ ಅಧ್ಯಕ್ಷ ಬ್ಯಾರಿಸ್ಟರ್ ಗೋಹರ್ ಖಾನ್ ಅವರು, ‘ವಿರೋಧ ಪಕ್ಷಗಳ ನಾಯಕರಿಗೆ ಕೋರ್ಟ್ಗಳ ಬಾಗಿಲುಗಳು ಮುಚ್ಚಿವೆ. ನಮ್ಮ ಮಹಿಳೆಯರು ಜೈಲಿನಲ್ಲಿ ಇದ್ದಾರೆ. ಇತಿಹಾಸ ಎಂದಿಗೂ ಈ ಸಂಗತಿಗಳನ್ನು ನೆನಪಿನಲ್ಲಿ ಇಡಲಿದೆ’ ಎಂದು ಕಿಡಿಕಾರಿದರು.</p>.<p>ಫೆಬ್ರುವರಿಯಲ್ಲಿ ನಡೆದಿದ್ದ ಸಾರ್ವತ್ರಿಕ ಚುನಾವಣೆಯಲ್ಲಿ, ಒಟ್ಟು 265 ಸದಸ್ಯ ಬಲದ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಪಿಟಿಐ 93 ಸ್ಥಾನಗಳನ್ನು ಗೆದ್ದುಕೊಂಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>