<p><strong>ಕರಾಚಿ: </strong>ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದ ವ್ಯಾಪ್ತಿಯ ಜಿಲ್ಲೆಯೊಂದರಲ್ಲಿ ಗಸ್ತು ತಿರುಗುತ್ತಿದ್ದ ಭದ್ರತಾ ಪಡೆಗಳನ್ನು ಗುರಿಯಾಗಿಸಿ ಭಯೋತ್ಪಾದಕರು ನಡೆಸಿರುವ ದಾಳಿಯಲ್ಲಿ ಅರೆಸೇನಾ ಪಡೆಯ ಐವರು ಸೈನಿಕರು ಹತರಾಗಿದ್ದಾರೆ ಎಂದು ಶುಕ್ರವಾರ ಮಾಧ್ಯಮ ವರದಿ ತಿಳಿಸಿದೆ.</p>.<p>ಪಾಕಿಸ್ತಾನದ ಸಶಸ್ತ್ರ ಪಡೆಗಳ ಮಾಧ್ಯಮ ವಿಭಾಗವಾದ ಆಂತರಿಕ ಸೇವಾ ಸಾರ್ವಜನಿಕ ಸಂಪರ್ಕದ (ಐಎಸ್ಪಿಆರ್) ಪ್ರಕಾರ, ಬಲೂಚಿಸ್ತಾನದ ಫ್ರಂಟಿಯರ್ ಕಾರ್ಪ್ಸ್ಗೆ ಸೇರಿದ ಐವರು ಸೈನಿಕರು ಭಯೋತ್ಪಾದಕರೊಂದಿಗೆ ಗುಂಡಿನಕಾದಾಟ ನಡೆಸುವಾಗ ಸಾವನ್ನಪ್ಪಿದ್ದಾರೆ.</p>.<p>ಭಯೋತ್ಪಾದಕರನ್ನು ಹತ್ತಿಕ್ಕಲು ಶೋಧ ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಎಂದು ಐಎಸ್ಪಿಆರ್ ತಿಳಿಸಿದೆ.</p>.<p>ಬಲೂಚಿಸ್ತಾನದ ಸಿಬಿ ಜಿಲ್ಲೆಯ ಸಂಗನ್ ಪ್ರದೇಶದಲ್ಲಿ ಭಯೋತ್ಪಾದಕರ ವಿರುದ್ಧ ನಡೆದ ಈ ಕಾರ್ಯಾಚರಣೆಯಲ್ಲಿ ಭಯೋತ್ಪಾದಕರಿಗೆ ಭಾರಿ ನಷ್ಟವಾಗಿದೆ ಎಂದು ಡಾನ್ ಪತ್ರಿಕೆ ವರದಿ ಮಾಡಿದೆ.</p>.<p>ಆಂತರಿಕ ಭದ್ರತಾ ಸಚಿವ ಶೇಖ್ ರಶೀದ್ ಅಹ್ಮದ್ ಈ ದಾಳಿ ಖಂಡಿಸಿದ್ದಾರೆ. ‘ಇಂತಹ ಹೇಡಿತನದ ದಾಳಿಗಳನ್ನು ನಡೆಸುವ ಮೂಲಕ ಭಯೋತ್ಪಾದಕರು ನಮ್ಮನ್ನು ನಿರಾಶೆಗೊಳಿಸಲಾಗದು. ದೇಶವು ಭಯೋತ್ಪಾದಕರ ವಿರುದ್ಧ ತನ್ನ ಎಲ್ಲ ಶಕ್ತಿಯಿಂದ ಹೋರಾಡಲಿದೆ’ ಎಂದು ಅವರು ಹೇಳಿದರು.</p>.<p>ಈ ತಿಂಗಳ ಆರಂಭದಲ್ಲಿ, ಮಾರ್ಜೆಟ್-ಕ್ವೆಟ್ಟಾ ರಸ್ತೆಯಲ್ಲಿ ನಡೆದ ಸ್ಫೋಟದಲ್ಲಿ ಬಲೂಚಿಸ್ತಾನದ ಫ್ರಾಂಟಿಯರ್ ಕಾರ್ಪ್ಸ್ಗೆ ಸೇರಿದ ನಾಲ್ವರು ಸೈನಿಕರು ಸಾವನ್ನಪ್ಪಿದ್ದರು.</p>.<p>ಸಂಪನ್ಮೂಲದಲ್ಲಿ ಸಮೃದ್ಧವಾಗಿರುವ ಬಲೂಚಿಸ್ತಾನ ದೀರ್ಘಕಾಲದಿಂದಲೂ ತಾಲಿಬಾನ್ ಮತ್ತು ಬಲೂಚ್ ರಾಷ್ಟ್ರೀಯವಾದಿಗಳ ಹಿಂಸಾಚಾರಕ್ಕೆ ಗುರಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕರಾಚಿ: </strong>ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದ ವ್ಯಾಪ್ತಿಯ ಜಿಲ್ಲೆಯೊಂದರಲ್ಲಿ ಗಸ್ತು ತಿರುಗುತ್ತಿದ್ದ ಭದ್ರತಾ ಪಡೆಗಳನ್ನು ಗುರಿಯಾಗಿಸಿ ಭಯೋತ್ಪಾದಕರು ನಡೆಸಿರುವ ದಾಳಿಯಲ್ಲಿ ಅರೆಸೇನಾ ಪಡೆಯ ಐವರು ಸೈನಿಕರು ಹತರಾಗಿದ್ದಾರೆ ಎಂದು ಶುಕ್ರವಾರ ಮಾಧ್ಯಮ ವರದಿ ತಿಳಿಸಿದೆ.</p>.<p>ಪಾಕಿಸ್ತಾನದ ಸಶಸ್ತ್ರ ಪಡೆಗಳ ಮಾಧ್ಯಮ ವಿಭಾಗವಾದ ಆಂತರಿಕ ಸೇವಾ ಸಾರ್ವಜನಿಕ ಸಂಪರ್ಕದ (ಐಎಸ್ಪಿಆರ್) ಪ್ರಕಾರ, ಬಲೂಚಿಸ್ತಾನದ ಫ್ರಂಟಿಯರ್ ಕಾರ್ಪ್ಸ್ಗೆ ಸೇರಿದ ಐವರು ಸೈನಿಕರು ಭಯೋತ್ಪಾದಕರೊಂದಿಗೆ ಗುಂಡಿನಕಾದಾಟ ನಡೆಸುವಾಗ ಸಾವನ್ನಪ್ಪಿದ್ದಾರೆ.</p>.<p>ಭಯೋತ್ಪಾದಕರನ್ನು ಹತ್ತಿಕ್ಕಲು ಶೋಧ ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಎಂದು ಐಎಸ್ಪಿಆರ್ ತಿಳಿಸಿದೆ.</p>.<p>ಬಲೂಚಿಸ್ತಾನದ ಸಿಬಿ ಜಿಲ್ಲೆಯ ಸಂಗನ್ ಪ್ರದೇಶದಲ್ಲಿ ಭಯೋತ್ಪಾದಕರ ವಿರುದ್ಧ ನಡೆದ ಈ ಕಾರ್ಯಾಚರಣೆಯಲ್ಲಿ ಭಯೋತ್ಪಾದಕರಿಗೆ ಭಾರಿ ನಷ್ಟವಾಗಿದೆ ಎಂದು ಡಾನ್ ಪತ್ರಿಕೆ ವರದಿ ಮಾಡಿದೆ.</p>.<p>ಆಂತರಿಕ ಭದ್ರತಾ ಸಚಿವ ಶೇಖ್ ರಶೀದ್ ಅಹ್ಮದ್ ಈ ದಾಳಿ ಖಂಡಿಸಿದ್ದಾರೆ. ‘ಇಂತಹ ಹೇಡಿತನದ ದಾಳಿಗಳನ್ನು ನಡೆಸುವ ಮೂಲಕ ಭಯೋತ್ಪಾದಕರು ನಮ್ಮನ್ನು ನಿರಾಶೆಗೊಳಿಸಲಾಗದು. ದೇಶವು ಭಯೋತ್ಪಾದಕರ ವಿರುದ್ಧ ತನ್ನ ಎಲ್ಲ ಶಕ್ತಿಯಿಂದ ಹೋರಾಡಲಿದೆ’ ಎಂದು ಅವರು ಹೇಳಿದರು.</p>.<p>ಈ ತಿಂಗಳ ಆರಂಭದಲ್ಲಿ, ಮಾರ್ಜೆಟ್-ಕ್ವೆಟ್ಟಾ ರಸ್ತೆಯಲ್ಲಿ ನಡೆದ ಸ್ಫೋಟದಲ್ಲಿ ಬಲೂಚಿಸ್ತಾನದ ಫ್ರಾಂಟಿಯರ್ ಕಾರ್ಪ್ಸ್ಗೆ ಸೇರಿದ ನಾಲ್ವರು ಸೈನಿಕರು ಸಾವನ್ನಪ್ಪಿದ್ದರು.</p>.<p>ಸಂಪನ್ಮೂಲದಲ್ಲಿ ಸಮೃದ್ಧವಾಗಿರುವ ಬಲೂಚಿಸ್ತಾನ ದೀರ್ಘಕಾಲದಿಂದಲೂ ತಾಲಿಬಾನ್ ಮತ್ತು ಬಲೂಚ್ ರಾಷ್ಟ್ರೀಯವಾದಿಗಳ ಹಿಂಸಾಚಾರಕ್ಕೆ ಗುರಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>