ಕಠ್ಮಂಡು: ಮುಂಗಾರು ಆರ್ಭಟಕ್ಕೆ ನೇಪಾಳದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಮತ್ತು ಭೂಕುಸಿತ ಉಂಟಾಗಿದ್ದು, ಇದುವರೆಗೂ 113 ಮಂದಿ ಮೃತಪಟ್ಟಿದ್ದಾರೆ.
ಕಳೆದ ಎರಡು ವಾರಗಳಿಂದ ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಅವಘಡಗಳು ಸಂಭವಿಸುತ್ತಿವೆ.ರಾಜಧಾನಿ ಸೇರಿದಂತೆ ಮಧ್ಯ ಮತ್ತು ದಕ್ಷಿಣ ನೇಪಾಳದ ಹಲವು ಜಿಲ್ಲೆಗಳ ಜನರು ಸಂಕಷ್ಟಕ್ಕೆ ಸಿಲುಕಿದ್ದು, 38 ಮಂದಿ ಕಾಣೆಯಾಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸೇನೆ ಮತ್ತು ಪೊಲೀಸರು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಸಾಂಕ್ರಮಿಕ ರೋಗಗಳಭೀತಿ ಎದುರಾಗಿದೆ. ಈಗಾಗಲೇ 10 ಸಾವಿರಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ವೈದ್ಯಕೀಯ ನೆರವಿಗೆ ನೇಪಾಳ ಅಂತರರಾಷ್ಟ್ರೀಯ ಸಮುದಾಯವನ್ನು ಕೋರಿದೆ.