<p class="bodytext"><strong>ಢಾಕಾ</strong>: ಬಾಂಗ್ಲಾದೇಶದ ದಕ್ಷಿಣ ಭಾಗದಲ್ಲಿ ಸುರಿಯುತ್ತಿರುವ ಭಾರಿ ಮಳೆಯ ಕಾರಣ ಇಲ್ಲಿನ ರೋಹಿಂಗ್ಯಾ ನಿರಾಶ್ರಿತರ ಹಲವು ಶಿಬಿರಗಳು ನಾಶಗೊಂಡಿದ್ದು, ಸಹಸ್ರಾರು ಮಂದಿಗೆ ಹತ್ತಿರದ ಇತರ ಶಿಬಿರಗಳಲ್ಲಿ ಹಾಗೂ ಸಮುದಾಯ ಭವನಗಳಲ್ಲಿ ವಸತಿ ಸೌಕರ್ಯ ಕಲ್ಪಿಸಲಾಗಿದೆ.</p>.<p class="bodytext">ಕಾಕ್ಸ್ ಬಜಾರ್ ಜಿಲ್ಲೆಯಲ್ಲಿ ಬುಧವಾರ ಒಂದೇ ದಿನ ಸುಮಾರು 30 ಸೆಂ.ಮೀ ಮಳೆಯಾಗಿದೆ. ಈ ಜಿಲ್ಲೆಯಲ್ಲೇ ಸುಮಾರು 8 ಲಕ್ಷ ರೋಹಿಂಗ್ಯಾ ನಿರಾಶ್ರಿತರಿಗೆ ಆಶ್ರಯ ಕಲ್ಪಿಸಲಾಗಿದೆ ಎಂದು ವಿಶ್ವಸಂಸ್ಥೆಯ ನಿರಾಶ್ರಿತರ ಏಜೆನ್ಸಿ ತಿಳಿಸಿದೆ.</p>.<p class="bodytext">ಈ ಪ್ರದೇಶದಲ್ಲಿ ಜುಲೈ ತಿಂಗಳಲ್ಲಿ ಸುರಿಯುವ ಸರಾಸರಿ ಮಳೆಯ ಅರ್ಧದಷ್ಟು ಮಳೆ ಒಂದೇ ದಿನ ಸುರಿದಿದೆ. ಇನ್ನೂ ಕೆಲ ದಿನಗಳು ಮಳೆ ಬರುವ ಸಾಧ್ಯತೆ ಇದೆ. ಈ ವಾರದ ಆರಂಭದಲ್ಲಿ ಮಳೆ, ಪ್ರವಾಹ ಮತ್ತು ಭೂ ಕುಸಿತದಿಂದ ಶಿಬಿರಗಳಲ್ಲಿನ ಆರು ಜನರು ಸಾವನ್ನಪ್ಪಿದ್ದಾರೆ. ಇದರಲ್ಲಿ ಒಂದು ಮಗುವೂ ಸೇರಿದೆ.</p>.<p class="bodytext">ಭಾರಿ ಮಳೆಯಿಂದ 12 ಸಾವಿರಕ್ಕೂ ಹೆಚ್ಚು ನಿರಾಶ್ರಿತರಿಗೆ ತೊಂದರೆ ಆಗಿದೆ. ಅಂದಾಜು 2,500 ತಾತ್ಕಾಲಿಕ ಮನೆಗಳುನಾಶವಾಗಿವೆ ಅಥವಾ ಹಾನಿಗೊಂಡಿವೆ. 5 ಸಾವಿರಕ್ಕೂ ಹೆಚ್ಚು ನಿರಾಶ್ರಿತರನ್ನು ಸಮೀಪದ ಇತರ ನಿರಾಶ್ರಿತರ ಶಿಬಿರಗಳಲ್ಲಿ ಅಥವಾ ಸಮುದಾಯ ಭವನಗಳಲ್ಲಿ ಉಳಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ವಿಶ್ವಸಂಸ್ಥೆಯ ನಿರಾಶ್ರಿತರ ಏಜೆನ್ಸಿ ಪ್ರಕಟಣೆಯಲ್ಲಿ ತಿಳಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="bodytext"><strong>ಢಾಕಾ</strong>: ಬಾಂಗ್ಲಾದೇಶದ ದಕ್ಷಿಣ ಭಾಗದಲ್ಲಿ ಸುರಿಯುತ್ತಿರುವ ಭಾರಿ ಮಳೆಯ ಕಾರಣ ಇಲ್ಲಿನ ರೋಹಿಂಗ್ಯಾ ನಿರಾಶ್ರಿತರ ಹಲವು ಶಿಬಿರಗಳು ನಾಶಗೊಂಡಿದ್ದು, ಸಹಸ್ರಾರು ಮಂದಿಗೆ ಹತ್ತಿರದ ಇತರ ಶಿಬಿರಗಳಲ್ಲಿ ಹಾಗೂ ಸಮುದಾಯ ಭವನಗಳಲ್ಲಿ ವಸತಿ ಸೌಕರ್ಯ ಕಲ್ಪಿಸಲಾಗಿದೆ.</p>.<p class="bodytext">ಕಾಕ್ಸ್ ಬಜಾರ್ ಜಿಲ್ಲೆಯಲ್ಲಿ ಬುಧವಾರ ಒಂದೇ ದಿನ ಸುಮಾರು 30 ಸೆಂ.ಮೀ ಮಳೆಯಾಗಿದೆ. ಈ ಜಿಲ್ಲೆಯಲ್ಲೇ ಸುಮಾರು 8 ಲಕ್ಷ ರೋಹಿಂಗ್ಯಾ ನಿರಾಶ್ರಿತರಿಗೆ ಆಶ್ರಯ ಕಲ್ಪಿಸಲಾಗಿದೆ ಎಂದು ವಿಶ್ವಸಂಸ್ಥೆಯ ನಿರಾಶ್ರಿತರ ಏಜೆನ್ಸಿ ತಿಳಿಸಿದೆ.</p>.<p class="bodytext">ಈ ಪ್ರದೇಶದಲ್ಲಿ ಜುಲೈ ತಿಂಗಳಲ್ಲಿ ಸುರಿಯುವ ಸರಾಸರಿ ಮಳೆಯ ಅರ್ಧದಷ್ಟು ಮಳೆ ಒಂದೇ ದಿನ ಸುರಿದಿದೆ. ಇನ್ನೂ ಕೆಲ ದಿನಗಳು ಮಳೆ ಬರುವ ಸಾಧ್ಯತೆ ಇದೆ. ಈ ವಾರದ ಆರಂಭದಲ್ಲಿ ಮಳೆ, ಪ್ರವಾಹ ಮತ್ತು ಭೂ ಕುಸಿತದಿಂದ ಶಿಬಿರಗಳಲ್ಲಿನ ಆರು ಜನರು ಸಾವನ್ನಪ್ಪಿದ್ದಾರೆ. ಇದರಲ್ಲಿ ಒಂದು ಮಗುವೂ ಸೇರಿದೆ.</p>.<p class="bodytext">ಭಾರಿ ಮಳೆಯಿಂದ 12 ಸಾವಿರಕ್ಕೂ ಹೆಚ್ಚು ನಿರಾಶ್ರಿತರಿಗೆ ತೊಂದರೆ ಆಗಿದೆ. ಅಂದಾಜು 2,500 ತಾತ್ಕಾಲಿಕ ಮನೆಗಳುನಾಶವಾಗಿವೆ ಅಥವಾ ಹಾನಿಗೊಂಡಿವೆ. 5 ಸಾವಿರಕ್ಕೂ ಹೆಚ್ಚು ನಿರಾಶ್ರಿತರನ್ನು ಸಮೀಪದ ಇತರ ನಿರಾಶ್ರಿತರ ಶಿಬಿರಗಳಲ್ಲಿ ಅಥವಾ ಸಮುದಾಯ ಭವನಗಳಲ್ಲಿ ಉಳಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ವಿಶ್ವಸಂಸ್ಥೆಯ ನಿರಾಶ್ರಿತರ ಏಜೆನ್ಸಿ ಪ್ರಕಟಣೆಯಲ್ಲಿ ತಿಳಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>