<p><strong>ವಿಶ್ವಸಂಸ್ಥೆ:</strong> ವಿಶ್ವಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಭಾರತ ಸೇನೆ ನಿವೃತ್ತ ಅಧಿಕಾರಿ ಕರ್ನಲ್ ವೈಭವ್ ಅನಿಲ್ ಕಾಳೆ ರಫಾದಲ್ಲಿ ನಡೆದ ದಾಳಿಯಲ್ಲಿ ಮೃತಪಟ್ಟಿದ್ದಾರೆ. ಇವರು ಭಾರತೀಯ ಸೇನೆಯಿಂದ 2022ರಲ್ಲಿ ನಿವೃತ್ತರಾಗಿದ್ದರು.</p>.<p>ಭಾರತೀಯ ಸೇನೆಯ ಜಮ್ಮು ಮತ್ತು ಕಾಶ್ಮೀರ ರೈಫಲ್ಸ್ನಲ್ಲಿ ಅವರು ಸೇವೆ ಸಲ್ಲಿಸಿದ್ದರು. ಎರಡು ತಿಂಗಳ ಹಿಂದಷ್ಟೇ ಅವರು ಭದ್ರತಾ ಸಂಯೋಜಕ ಅಧಿಕಾರಿಯಾಗಿ ವಿಶ್ವಸಂಸ್ಥೆಯ ಸುರಕ್ಷತೆ ಮತ್ತು ಭದ್ರತಾ ವಿಭಾಗಕ್ಕೆ ಸೇರ್ಪಡೆಯಾಗಿದ್ದರು. </p>.<p>ರಫಾದಲ್ಲಿ ಇಸ್ರೇಲ್–ಹಮಾಸ್ ಬಂಡುಕೋರರ ನಡುವೆ ನಡುವೆ ಘರ್ಷಣೆ ನಡೆದಿದ್ದು, ಯೂರೋಪಿಯನ್ ಆಸ್ಪತ್ರೆಗೆ ತೆರಳುತ್ತಿದ್ದ ವಿಶ್ವಸಂಸ್ಥೆಯ ವಾಹನದ ಮೇಲೆ ದಾಳಿ ನಡೆದ ಸಂದರ್ಭದಲ್ಲಿ ಅವಘಢ ಸಂಭವಿಸಿದೆ. ದಾಳಿಯಲ್ಲಿ ಮತ್ತೊಬ್ಬ ಸಿಬ್ಬಂದಿ ಗಾಯಗೊಂಡರು.</p>.<p>ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೊನಿಯೊ ಗುಟೆರೆಸ್ ಅವರು, ‘ವಿಶ್ವಸಂಸ್ಥೆಯ ಸುರಕ್ಷತೆ ಮತ್ತು ಭದ್ರತಾ ವಿಭಾಗದ ಸಿಬ್ಬಂದಿಯ ಸಾವಿನಿಂದ ನೋವಾಗಿದೆ‘ ಎಂದು ಪ್ರತಿಕ್ರಿಯಿಸಿದರು. ಈ ದಾಳಿಯನ್ನು ಕುರಿತಂತೆ ಇಸ್ರೇಲ್ ತನಿಖೆಗೆ ಆದೇಶಿಸಿದೆ.</p>.<p>ಆಂಟೊನಿಯೊ ಗುಟೆರೆಸ್ ಅವರ ಉಪ ವಕ್ತಾರ ಪರ್ಹಾನ್ ಹಕ್ ಅವರು ಈ ಕುರಿತು ಹೇಳೀಕೆ ನೀಡಿದ್ದು, ಈ ದಾಳಿ ಬಗೆಗೆ ಸಮಗ್ರ ತನಿಖೆಗೆ ವಿಶ್ವಸಂಸ್ಥೆ ಒತ್ತಾಯಿಸಿದೆ ಎಂದು ತಿಳಿಸಿದರು. </p>.<p>‘ಗಾಜಾದಲ್ಲಿ ಇದುವರೆಗೂ ವಿಶ್ವಸಂಸ್ಥೆಯ 190 ಮಂದಿ ಸಿಬ್ಬಂದಿ ಮೃತಪಟ್ಟಿದ್ದಾರೆ. ಮಾನವೀಯ ನೆಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ರಕ್ಷಣೆ ನೀಡಬೇಕಾಗಿದೆ. ತಕ್ಷಣವೇ ಮಾನವೀಯ ನೆಲೆಯ ಕದನವಿರಾಮ ಘೋಷಿಸಬೇಕು’ ಎಂದು ಗುಟೆರೆಸ್ ಅಭಿಪ್ರಾಯಪಟ್ಟರು.</p>.<p>ವಿಶ್ವ ಆರೋಗ್ಯ ಸಂಘಟನೆ ಪ್ರಧಾನ ನಿರ್ದೇಶಕ ಟೆಡ್ರೊಸ್ ಅಧನೊಮ್ ಗೇಬ್ರೆಯೆಸುಸ್, ‘ಗಾಜಾದಲ್ಲಿ ನೆಲೆಸಿರುವ ಅನೇಕ ನಾಗರಿಕರು, ಮಾನವೀಯ ನೆಲೆಯ ಸಿಬ್ಬಂದಿ ಯುದ್ಧದಿಂದಾಗಿ ಜೀವ ಕಳೆದುಕೊಂಡಿದ್ದಾರೆ. ಶಾಂತಿ ಸ್ಥಾಪನೆಗಾಗಿ ಕದನವಿರಾಮ ಬೇಕಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಶ್ವಸಂಸ್ಥೆ:</strong> ವಿಶ್ವಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಭಾರತ ಸೇನೆ ನಿವೃತ್ತ ಅಧಿಕಾರಿ ಕರ್ನಲ್ ವೈಭವ್ ಅನಿಲ್ ಕಾಳೆ ರಫಾದಲ್ಲಿ ನಡೆದ ದಾಳಿಯಲ್ಲಿ ಮೃತಪಟ್ಟಿದ್ದಾರೆ. ಇವರು ಭಾರತೀಯ ಸೇನೆಯಿಂದ 2022ರಲ್ಲಿ ನಿವೃತ್ತರಾಗಿದ್ದರು.</p>.<p>ಭಾರತೀಯ ಸೇನೆಯ ಜಮ್ಮು ಮತ್ತು ಕಾಶ್ಮೀರ ರೈಫಲ್ಸ್ನಲ್ಲಿ ಅವರು ಸೇವೆ ಸಲ್ಲಿಸಿದ್ದರು. ಎರಡು ತಿಂಗಳ ಹಿಂದಷ್ಟೇ ಅವರು ಭದ್ರತಾ ಸಂಯೋಜಕ ಅಧಿಕಾರಿಯಾಗಿ ವಿಶ್ವಸಂಸ್ಥೆಯ ಸುರಕ್ಷತೆ ಮತ್ತು ಭದ್ರತಾ ವಿಭಾಗಕ್ಕೆ ಸೇರ್ಪಡೆಯಾಗಿದ್ದರು. </p>.<p>ರಫಾದಲ್ಲಿ ಇಸ್ರೇಲ್–ಹಮಾಸ್ ಬಂಡುಕೋರರ ನಡುವೆ ನಡುವೆ ಘರ್ಷಣೆ ನಡೆದಿದ್ದು, ಯೂರೋಪಿಯನ್ ಆಸ್ಪತ್ರೆಗೆ ತೆರಳುತ್ತಿದ್ದ ವಿಶ್ವಸಂಸ್ಥೆಯ ವಾಹನದ ಮೇಲೆ ದಾಳಿ ನಡೆದ ಸಂದರ್ಭದಲ್ಲಿ ಅವಘಢ ಸಂಭವಿಸಿದೆ. ದಾಳಿಯಲ್ಲಿ ಮತ್ತೊಬ್ಬ ಸಿಬ್ಬಂದಿ ಗಾಯಗೊಂಡರು.</p>.<p>ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೊನಿಯೊ ಗುಟೆರೆಸ್ ಅವರು, ‘ವಿಶ್ವಸಂಸ್ಥೆಯ ಸುರಕ್ಷತೆ ಮತ್ತು ಭದ್ರತಾ ವಿಭಾಗದ ಸಿಬ್ಬಂದಿಯ ಸಾವಿನಿಂದ ನೋವಾಗಿದೆ‘ ಎಂದು ಪ್ರತಿಕ್ರಿಯಿಸಿದರು. ಈ ದಾಳಿಯನ್ನು ಕುರಿತಂತೆ ಇಸ್ರೇಲ್ ತನಿಖೆಗೆ ಆದೇಶಿಸಿದೆ.</p>.<p>ಆಂಟೊನಿಯೊ ಗುಟೆರೆಸ್ ಅವರ ಉಪ ವಕ್ತಾರ ಪರ್ಹಾನ್ ಹಕ್ ಅವರು ಈ ಕುರಿತು ಹೇಳೀಕೆ ನೀಡಿದ್ದು, ಈ ದಾಳಿ ಬಗೆಗೆ ಸಮಗ್ರ ತನಿಖೆಗೆ ವಿಶ್ವಸಂಸ್ಥೆ ಒತ್ತಾಯಿಸಿದೆ ಎಂದು ತಿಳಿಸಿದರು. </p>.<p>‘ಗಾಜಾದಲ್ಲಿ ಇದುವರೆಗೂ ವಿಶ್ವಸಂಸ್ಥೆಯ 190 ಮಂದಿ ಸಿಬ್ಬಂದಿ ಮೃತಪಟ್ಟಿದ್ದಾರೆ. ಮಾನವೀಯ ನೆಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ರಕ್ಷಣೆ ನೀಡಬೇಕಾಗಿದೆ. ತಕ್ಷಣವೇ ಮಾನವೀಯ ನೆಲೆಯ ಕದನವಿರಾಮ ಘೋಷಿಸಬೇಕು’ ಎಂದು ಗುಟೆರೆಸ್ ಅಭಿಪ್ರಾಯಪಟ್ಟರು.</p>.<p>ವಿಶ್ವ ಆರೋಗ್ಯ ಸಂಘಟನೆ ಪ್ರಧಾನ ನಿರ್ದೇಶಕ ಟೆಡ್ರೊಸ್ ಅಧನೊಮ್ ಗೇಬ್ರೆಯೆಸುಸ್, ‘ಗಾಜಾದಲ್ಲಿ ನೆಲೆಸಿರುವ ಅನೇಕ ನಾಗರಿಕರು, ಮಾನವೀಯ ನೆಲೆಯ ಸಿಬ್ಬಂದಿ ಯುದ್ಧದಿಂದಾಗಿ ಜೀವ ಕಳೆದುಕೊಂಡಿದ್ದಾರೆ. ಶಾಂತಿ ಸ್ಥಾಪನೆಗಾಗಿ ಕದನವಿರಾಮ ಬೇಕಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>