<p><strong>ಕೊಲಂಬೊ</strong>: 2019ರ ಈಸ್ಟರ್ ಭಾನುವಾರದ ದಿನ ನಡೆದ ಭಯೋತ್ಪಾದಕ ದಾಳಿಯ ಸಂತ್ರಸ್ತರಿಗೆ ಪರಿಹಾರ ರೂಪದಲ್ಲಿ ನೀಡಬೇಕಿದ್ದ 100 ಮಿಲಿಯನ್ ಶ್ರೀಲಂಕಾ ರೂಪಾಯಿ (ಅಂದಾಜು ₹2.79 ಕೋಟಿ) ಮೊತ್ತವನ್ನು ಶ್ರೀಲಂಕಾದ ಮಾಜಿ ಅಧ್ಯಕ್ಷ ಮೈತ್ರಿಪಾಲ ಸಿರಿಸೇನ ಅವರು ಪೂರ್ತಿಯಾಗಿ ಪಾವತಿಸಿದ್ದಾರೆ. ಈ ದಾಳಿಯಲ್ಲಿ 270 ಮಂದಿ ಮೃತಪಟ್ಟಿದ್ದರು, ಇವರಲ್ಲಿ 11 ಮಂದಿ ಭಾರತೀಯರು.</p>.<p>ದೇಶದಲ್ಲಿ ದಾಳಿ ನಡೆಯಬಹುದು ಎಂಬ ನಂಬಲರ್ಹ ಮಾಹಿತಿ ಇದ್ದರೂ, ಅದನ್ನು ತಡೆಯುವ ಕೆಲಸದಲ್ಲಿ ಸಿರಿಸೇನ ಅವರು ವಿಫಲರಾಗಿದ್ದಾರೆ ಎಂಬ ಕಾರಣಕ್ಕೆ ಸಂತ್ರಸ್ತರಿಗೆ ಒಟ್ಟು 100 ಮಿಲಿಯನ್ ಶ್ರೀಲಂಕಾ ರೂಪಾಯಿಯನ್ನು ಪರಿಹಾರವಾಗಿ ನೀಡಬೇಕು ಎಂದು ಅಲ್ಲಿನ ಸುಪ್ರೀಂ ಕೋರ್ಟ್ ಆದೇಶಿಸಿತ್ತು.</p>.<p>ಸ್ಥಳೀಯ ಇಸ್ಲಾಮಿಕ್ ಸಂಘಟನೆಯಾದ ನ್ಯಾಷನಲ್ ತೌಹೀದ್ ಜಮಾತ್ಗೆ (ಎನ್ಟಿಜೆ) ಸೇರಿದ ಒಂಬತ್ತು ಮಂದಿ ಆತ್ಮಹತ್ಯಾ ಬಾಂಬರ್ಗಳು ಕ್ಯಾಥೊಲಿಕ್ ಸಮುದಾಯಕ್ಕೆ ಸೇರಿದ ಚರ್ಚ್ಗಳು ಹಾಗೂ ಐಷಾರಾಮಿ ಹೋಟೆಲ್ಗಳ ಮೇಲೆ ಈ ಭಯೋತ್ಪಾದಕ ದಾಳಿ ನಡೆಸಿದ್ದರು. ಈ ಸಂದರ್ಭದಲ್ಲಿ ಸಿರಿಸೇನ ಅವರು ದೇಶದ ರಕ್ಷಣಾ ಸಚಿವರೂ ಆಗಿದ್ದರು. ಎನ್ಟಿಜೆ ಸಂಘಟನೆಗೆ ಐಎಸ್ಐಎಸ್ ಜೊತೆ ನಂಟು ಇದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಲಂಬೊ</strong>: 2019ರ ಈಸ್ಟರ್ ಭಾನುವಾರದ ದಿನ ನಡೆದ ಭಯೋತ್ಪಾದಕ ದಾಳಿಯ ಸಂತ್ರಸ್ತರಿಗೆ ಪರಿಹಾರ ರೂಪದಲ್ಲಿ ನೀಡಬೇಕಿದ್ದ 100 ಮಿಲಿಯನ್ ಶ್ರೀಲಂಕಾ ರೂಪಾಯಿ (ಅಂದಾಜು ₹2.79 ಕೋಟಿ) ಮೊತ್ತವನ್ನು ಶ್ರೀಲಂಕಾದ ಮಾಜಿ ಅಧ್ಯಕ್ಷ ಮೈತ್ರಿಪಾಲ ಸಿರಿಸೇನ ಅವರು ಪೂರ್ತಿಯಾಗಿ ಪಾವತಿಸಿದ್ದಾರೆ. ಈ ದಾಳಿಯಲ್ಲಿ 270 ಮಂದಿ ಮೃತಪಟ್ಟಿದ್ದರು, ಇವರಲ್ಲಿ 11 ಮಂದಿ ಭಾರತೀಯರು.</p>.<p>ದೇಶದಲ್ಲಿ ದಾಳಿ ನಡೆಯಬಹುದು ಎಂಬ ನಂಬಲರ್ಹ ಮಾಹಿತಿ ಇದ್ದರೂ, ಅದನ್ನು ತಡೆಯುವ ಕೆಲಸದಲ್ಲಿ ಸಿರಿಸೇನ ಅವರು ವಿಫಲರಾಗಿದ್ದಾರೆ ಎಂಬ ಕಾರಣಕ್ಕೆ ಸಂತ್ರಸ್ತರಿಗೆ ಒಟ್ಟು 100 ಮಿಲಿಯನ್ ಶ್ರೀಲಂಕಾ ರೂಪಾಯಿಯನ್ನು ಪರಿಹಾರವಾಗಿ ನೀಡಬೇಕು ಎಂದು ಅಲ್ಲಿನ ಸುಪ್ರೀಂ ಕೋರ್ಟ್ ಆದೇಶಿಸಿತ್ತು.</p>.<p>ಸ್ಥಳೀಯ ಇಸ್ಲಾಮಿಕ್ ಸಂಘಟನೆಯಾದ ನ್ಯಾಷನಲ್ ತೌಹೀದ್ ಜಮಾತ್ಗೆ (ಎನ್ಟಿಜೆ) ಸೇರಿದ ಒಂಬತ್ತು ಮಂದಿ ಆತ್ಮಹತ್ಯಾ ಬಾಂಬರ್ಗಳು ಕ್ಯಾಥೊಲಿಕ್ ಸಮುದಾಯಕ್ಕೆ ಸೇರಿದ ಚರ್ಚ್ಗಳು ಹಾಗೂ ಐಷಾರಾಮಿ ಹೋಟೆಲ್ಗಳ ಮೇಲೆ ಈ ಭಯೋತ್ಪಾದಕ ದಾಳಿ ನಡೆಸಿದ್ದರು. ಈ ಸಂದರ್ಭದಲ್ಲಿ ಸಿರಿಸೇನ ಅವರು ದೇಶದ ರಕ್ಷಣಾ ಸಚಿವರೂ ಆಗಿದ್ದರು. ಎನ್ಟಿಜೆ ಸಂಘಟನೆಗೆ ಐಎಸ್ಐಎಸ್ ಜೊತೆ ನಂಟು ಇದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>