‘ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ಭಾಗಿದಾರರನ್ನು ಹೊಣೆಗಾರರನ್ನಾಗಿ ಮಾಡಲು ನಾವು ನಡೆಸುತ್ತಿರುವ ತನಿಖೆಯ ಸ್ವರೂಪವನ್ನು ಈ ಬಂಧನವು ತೋರಿಸುತ್ತದೆ’ ಎಂದು ಐಎಚ್ಐಟಿ ವರಿಷ್ಠಾಧಿಕಾರಿ ಮಂದೀಪ್ ಮೂಕರ್ ತಿಳಿಸಿದ್ದಾರೆ.
2023ರ ಜೂನ್ 18ರಂದು ಸರ್ರೆ ಬ್ರಿಟಿಷ್ ಕೊಲಂಬಿಯಾದ ಗುರುನಾನಕ್ ಸಿಖ್ ಗುರುದ್ವಾರದ ಸಮೀಪದ ಹರ್ದೀಪ್ ಸಿಂಗ್ ನಿಜ್ಜರ್ನನ್ನು ಕೊಲೆ ಮಾಡಲಾಗಿತ್ತು.
ಪ್ರಕರಣ ಸಂಬಂಧ ಈಗಾಗಲೇ ಭಾರತ ಮೂಲದ ಕರಣ್ ಬ್ರಾರ್ (22), ಕಮಲ್ಪ್ರೀತ್ ಸಿಂಗ್ (22) ಹಾಗೂ ಕರಣ್ಪ್ರೀತ್ ಸಿಂಗ್ (28) ಎಂಬವರನ್ನು ಬಂಧಿಸಲಾಗಿದೆ.