ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಪರಿಣತರು ಗುರುವಾರ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ, ವಿಶ್ವಸಂಸ್ಥೆಯ ವಿಶೇಷ ವರದಿಗಾರ್ತಿ ಮೇರಿ ಲಾವ್ಲೋರ್ ಅವರು ’ಫಾದರ್ ಸ್ವಾಮಿ ಅವರ ಸಾವಿನ ಪ್ರಕರಣ, ಎಲ್ಲ ದೇಶಗಳ ಮಾನವ ಹಕ್ಕುಗಳ ರಕ್ಷಕರನ್ನು ಎಚ್ಚರಿಸುತ್ತಿದೆ. ಹಾಗೆಯೇ, ಸೂಕ್ತ ಸಾಕ್ಷಿ, ಆಧಾರವಿಲ್ಲದೇ ಬಂಧಿಸಿರುವ ಎಲ್ಲ ಮಾನವ ಹಕ್ಕುಗಳ ಕಾರ್ಯಕರ್ತರನ್ನು ಬಿಡಗಡೆ ಮಾಡಬೇಕು ಎಂಬ ಸಂದೇಶವನ್ನು ನೀಡುತ್ತಿದೆ’ ಎಂದು ಹೇಳಿದ್ದಾರೆ.