<p><strong>ಬಮಾಕೊ</strong> (ಮಾಲಿ): ಇಂಧನ ಆಮದಿನ ಮೇಲೆ ಜಿಹಾದಿ ಭಯೋತ್ಪಾದಕರು ಹೇರಿರುವ ನಿರ್ಬಂಧದಿಂದ ಪಶ್ಚಿಮ ಆಫ್ರಿಕಾದ ಮಾಲಿ ದೇಶದಲ್ಲಿ ಬಿಕ್ಕಟ್ಟು ಎದುರಾಗಿದೆ. ಹೀಗಾಗಿ ಮುಂದಿನ ಎರಡು ವಾರಗಳವರೆಗೆ ದೇಶದಾದ್ಯಂತ ಎಲ್ಲಾ ಶಾಲೆ ಹಾಗೂ ವಿಶ್ವವಿದ್ಯಾಲಯಗಳನ್ನು ಮುಚ್ಚುವುದಾಗಿ ಸರ್ಕಾರ ಘೋಷಿಸಿದೆ.</p>.<p>ಶಿಕ್ಷಣ ಸಚಿವ ಅಮಡೌ ಸೈ ಸವಾನೆ ಈ ಬಗ್ಗೆ ಮಾಹಿತಿ ನೀಡಿದ್ದು, ‘ಇಂಧನ ಪೂರೈಕೆಯಲ್ಲಿನ ವ್ಯತ್ಯಯದಿಂದಾಗಿ ಶಾಲಾ–ಕಾಲೇಜುಗಳ ಸಿಬ್ಬಂದಿಯ ಸಂಚಾರಕ್ಕೂ ತೊಡಕಾಗುತ್ತಿದೆ. ಹೀಗಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ’ ಎಂದಿದ್ದಾರೆ.</p>.<p>ಅಲ್ಲದೇ, ನವೆಂಬರ್ 10ರಂದು ಶಾಲೆಗಳನ್ನು ಮತ್ತೆ ತೆರೆಯಲಾಗುವುದು. ಅಷ್ಟರೊಳಗೆ ಸಹಜ ಸ್ಥಿತಿಯನ್ನು ಮರುಸ್ಥಾಪಿಸಲು ಆಡಳಿತ ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ ಎಂದೂ ಹೇಳಿದ್ದಾರೆ. </p>.<p class="title">ಅಲ್–ಖೈದಾ ಬೆಂಬಲಿತ ಜಮಾತ್ ನುಸೃತ್ ಅಲ್–ಇಸ್ಲಾಮ್ ವಾಲ್–ಮುಸ್ಲಿಮೀನ್ ಎಂಬ ಭಯೋತ್ಪಾದಕ ಸಂಘಟನೆಯು ಮಾಲಿಯ ಸುತ್ತ ಮುತ್ತಲಿನ ದೇಶಗಳಿಂದ ಇಂಧನ ಆಮದು ಮಾಡಿಕೊಳ್ಳದಂತೆ ಸೆಪ್ಟೆಂಬರ್ನಲ್ಲಿ ನಿರ್ಬಂಧ ಹೇರಿದೆ.</p>.<p class="title">ಇಂಧನ ಹೊತ್ತು ತರುವ ಟ್ಯಾಂಕರ್ಗಳನ್ನು ಗಡಿಯಲ್ಲೇ ತಡೆದು, ಅವುಗಳ ಮೇಲೆ ದಾಳಿ ನಡೆಸಿ, ಇಂಧನ ಪೂರೈಕೆಗೆ ಭಯೋತ್ಪಾದಕರು ತಡೆ ಒಡ್ಡಿದ್ದಾರೆ. ಇದು ಮಾಲಿಯಲ್ಲಿ ಆರ್ಥಿಕ, ಸಾಮಾಜಿಕ ಬಿಕ್ಕಟ್ಟಿಗೆ ಕಾರಣವಾಗಿದೆ. </p>.<p class="title">ಭಯೋತ್ಪಾದಕರಿಗೆ ಮೂಲಸೌಕರ್ಯ ಸಿಗುವುದನ್ನು ತಡೆಯುವ ನಿಟ್ಟಿನಲ್ಲಿ ದೂರದ ಸೂಕ್ಷ್ಮ ಪ್ರದೇಶಗಳಿಗೆ ಇಂಧನ ಪೂರೈಕೆ ನಿಲ್ಲಿಸುವುದಾಗಿ ಮಾಲಿಯ ಮಿಲಿಟರಿ ಆಡಳಿತ ಇತ್ತೀಚೆಗಷ್ಟೇ ಹೇಳಿತ್ತು.</p>.<p class="title">ಹೀಗಾಗಿ ಮಿಲಿಟರಿ ಆಡಳಿತಕ್ಕೆ ತಿರುಗೇಟು ನೀಡಲು ಭಯೋತ್ಪಾದಕರು ಇಂಧನ ಪೂರೈಕೆಯ ಮಾರ್ಗಗಳಲ್ಲೇ ದಾಳಿ ನಡೆಸುತ್ತಿದ್ದಾರೆ ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಮಾಕೊ</strong> (ಮಾಲಿ): ಇಂಧನ ಆಮದಿನ ಮೇಲೆ ಜಿಹಾದಿ ಭಯೋತ್ಪಾದಕರು ಹೇರಿರುವ ನಿರ್ಬಂಧದಿಂದ ಪಶ್ಚಿಮ ಆಫ್ರಿಕಾದ ಮಾಲಿ ದೇಶದಲ್ಲಿ ಬಿಕ್ಕಟ್ಟು ಎದುರಾಗಿದೆ. ಹೀಗಾಗಿ ಮುಂದಿನ ಎರಡು ವಾರಗಳವರೆಗೆ ದೇಶದಾದ್ಯಂತ ಎಲ್ಲಾ ಶಾಲೆ ಹಾಗೂ ವಿಶ್ವವಿದ್ಯಾಲಯಗಳನ್ನು ಮುಚ್ಚುವುದಾಗಿ ಸರ್ಕಾರ ಘೋಷಿಸಿದೆ.</p>.<p>ಶಿಕ್ಷಣ ಸಚಿವ ಅಮಡೌ ಸೈ ಸವಾನೆ ಈ ಬಗ್ಗೆ ಮಾಹಿತಿ ನೀಡಿದ್ದು, ‘ಇಂಧನ ಪೂರೈಕೆಯಲ್ಲಿನ ವ್ಯತ್ಯಯದಿಂದಾಗಿ ಶಾಲಾ–ಕಾಲೇಜುಗಳ ಸಿಬ್ಬಂದಿಯ ಸಂಚಾರಕ್ಕೂ ತೊಡಕಾಗುತ್ತಿದೆ. ಹೀಗಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ’ ಎಂದಿದ್ದಾರೆ.</p>.<p>ಅಲ್ಲದೇ, ನವೆಂಬರ್ 10ರಂದು ಶಾಲೆಗಳನ್ನು ಮತ್ತೆ ತೆರೆಯಲಾಗುವುದು. ಅಷ್ಟರೊಳಗೆ ಸಹಜ ಸ್ಥಿತಿಯನ್ನು ಮರುಸ್ಥಾಪಿಸಲು ಆಡಳಿತ ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ ಎಂದೂ ಹೇಳಿದ್ದಾರೆ. </p>.<p class="title">ಅಲ್–ಖೈದಾ ಬೆಂಬಲಿತ ಜಮಾತ್ ನುಸೃತ್ ಅಲ್–ಇಸ್ಲಾಮ್ ವಾಲ್–ಮುಸ್ಲಿಮೀನ್ ಎಂಬ ಭಯೋತ್ಪಾದಕ ಸಂಘಟನೆಯು ಮಾಲಿಯ ಸುತ್ತ ಮುತ್ತಲಿನ ದೇಶಗಳಿಂದ ಇಂಧನ ಆಮದು ಮಾಡಿಕೊಳ್ಳದಂತೆ ಸೆಪ್ಟೆಂಬರ್ನಲ್ಲಿ ನಿರ್ಬಂಧ ಹೇರಿದೆ.</p>.<p class="title">ಇಂಧನ ಹೊತ್ತು ತರುವ ಟ್ಯಾಂಕರ್ಗಳನ್ನು ಗಡಿಯಲ್ಲೇ ತಡೆದು, ಅವುಗಳ ಮೇಲೆ ದಾಳಿ ನಡೆಸಿ, ಇಂಧನ ಪೂರೈಕೆಗೆ ಭಯೋತ್ಪಾದಕರು ತಡೆ ಒಡ್ಡಿದ್ದಾರೆ. ಇದು ಮಾಲಿಯಲ್ಲಿ ಆರ್ಥಿಕ, ಸಾಮಾಜಿಕ ಬಿಕ್ಕಟ್ಟಿಗೆ ಕಾರಣವಾಗಿದೆ. </p>.<p class="title">ಭಯೋತ್ಪಾದಕರಿಗೆ ಮೂಲಸೌಕರ್ಯ ಸಿಗುವುದನ್ನು ತಡೆಯುವ ನಿಟ್ಟಿನಲ್ಲಿ ದೂರದ ಸೂಕ್ಷ್ಮ ಪ್ರದೇಶಗಳಿಗೆ ಇಂಧನ ಪೂರೈಕೆ ನಿಲ್ಲಿಸುವುದಾಗಿ ಮಾಲಿಯ ಮಿಲಿಟರಿ ಆಡಳಿತ ಇತ್ತೀಚೆಗಷ್ಟೇ ಹೇಳಿತ್ತು.</p>.<p class="title">ಹೀಗಾಗಿ ಮಿಲಿಟರಿ ಆಡಳಿತಕ್ಕೆ ತಿರುಗೇಟು ನೀಡಲು ಭಯೋತ್ಪಾದಕರು ಇಂಧನ ಪೂರೈಕೆಯ ಮಾರ್ಗಗಳಲ್ಲೇ ದಾಳಿ ನಡೆಸುತ್ತಿದ್ದಾರೆ ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>