<p class="title"><strong>ಬಂಜುಲ್, ಗಾಂಬಿಯಾ:</strong>ಪಶ್ಚಿಮ ಆಫ್ರಿಕಾದ ಗಾಂಬಿಯಾದಲ್ಲಿ ಕೆಮ್ಮು ಮತ್ತು ಶೀತ ಸಿರಪ್ಗಳ ಸೇವನೆಯಿಂದಾಗಿ ಮೂತ್ರಪಿಂಡ ಸಮಸ್ಯೆಯಿಂದ 60ಕ್ಕೂ ಹೆಚ್ಚು ಮಕ್ಕಳು ಸಾವಿಗೀಡಾಗಿದ್ದು, ಈ ಸಿರಪ್ಗಳನ್ನು ಹಿಂಪಡೆಯಲು ಅಭಿಯಾನವನ್ನು ಪ್ರಾರಂಭಿಸಲಾಗಿದೆ.</p>.<p class="title">ಈ ಸಂಬಂಧ ಮನೆ ಮನೆಗೆ ತೆರಳಿ, ಕೆಮ್ಮಿನ ಸಿರಪ್ನ ಸೀಸೆಗಳನ್ನು ಸಂಗ್ರಹಿಸಲಾಗುತ್ತಿದೆ. ಈ ಉದ್ದೇಶಕ್ಕಾಗಿ, ಆರೋಗ್ಯ ಸಚಿವಾಲಯವು ಅಲ್ಲಿನ ರೆಡ್ ಕ್ರಾಸ್ ಸೊಸೈಟಿಯ ಸಹಯೋಗದಲ್ಲಿ ನೂರಾರು ಯುವಕರ ತಂಡಗಳನ್ನು ರಚಿಸಿದೆ.</p>.<p>‘ತೀವ್ರ ಮೂತ್ರಪಿಂಡ ಸಮಸ್ಯೆಯಿಂದ ಮಕ್ಕಳು ಸಾವಿಗೀಡಾಗಿರುವ ಘಟನೆಯು ದೇಶದ ಜನರಲ್ಲಿ ಆತಂಕ ಸೃಷ್ಟಿಸಿದೆ’ ಎಂದು ಗಾಂಬಿಯಾದ ಆರೋಗ್ಯ ನಿರ್ದೇಶಕ ಡಾ. ಮುಸ್ತಾಫಾ ಬಿಟ್ಟಾಯೆ ಅವರು ತಿಳಿಸಿದ್ದಾರೆ.</p>.<p>‘ಈ ಘಟನೆಯ ಬಗ್ಗೆ, ಭಾರತದಲ್ಲಿರುವ ಔಷಧ ತಯಾರಕ ಕಂಪನಿ ಮೈಡನ್ ಫಾರ್ಮಾಸ್ಯುಟಿಕಲ್ಸ್ನ ಪ್ರಧಾನ ಕಚೇರಿಗೆ ಕಡೆ ಮಾಡಿದರೂ ಯಾವುದೇ ಪ್ರತಿಕ್ರಿಯೆ ದೊರೆಯಲಿಲ್ಲ. ಭಾರತದ ಆರೋಗ್ಯ ಸಚಿವಾಲಯ, ಡಿಸಿಜಿಎ ಉತ್ತರಿಸಲಿಲ್ಲ’ ಎಂದು ‘ಅಸೋಸಿಯೇಟೆಡ್ ಪ್ರೆಸ್’ ಸುದ್ದಿಸಂಸ್ಥೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಬಂಜುಲ್, ಗಾಂಬಿಯಾ:</strong>ಪಶ್ಚಿಮ ಆಫ್ರಿಕಾದ ಗಾಂಬಿಯಾದಲ್ಲಿ ಕೆಮ್ಮು ಮತ್ತು ಶೀತ ಸಿರಪ್ಗಳ ಸೇವನೆಯಿಂದಾಗಿ ಮೂತ್ರಪಿಂಡ ಸಮಸ್ಯೆಯಿಂದ 60ಕ್ಕೂ ಹೆಚ್ಚು ಮಕ್ಕಳು ಸಾವಿಗೀಡಾಗಿದ್ದು, ಈ ಸಿರಪ್ಗಳನ್ನು ಹಿಂಪಡೆಯಲು ಅಭಿಯಾನವನ್ನು ಪ್ರಾರಂಭಿಸಲಾಗಿದೆ.</p>.<p class="title">ಈ ಸಂಬಂಧ ಮನೆ ಮನೆಗೆ ತೆರಳಿ, ಕೆಮ್ಮಿನ ಸಿರಪ್ನ ಸೀಸೆಗಳನ್ನು ಸಂಗ್ರಹಿಸಲಾಗುತ್ತಿದೆ. ಈ ಉದ್ದೇಶಕ್ಕಾಗಿ, ಆರೋಗ್ಯ ಸಚಿವಾಲಯವು ಅಲ್ಲಿನ ರೆಡ್ ಕ್ರಾಸ್ ಸೊಸೈಟಿಯ ಸಹಯೋಗದಲ್ಲಿ ನೂರಾರು ಯುವಕರ ತಂಡಗಳನ್ನು ರಚಿಸಿದೆ.</p>.<p>‘ತೀವ್ರ ಮೂತ್ರಪಿಂಡ ಸಮಸ್ಯೆಯಿಂದ ಮಕ್ಕಳು ಸಾವಿಗೀಡಾಗಿರುವ ಘಟನೆಯು ದೇಶದ ಜನರಲ್ಲಿ ಆತಂಕ ಸೃಷ್ಟಿಸಿದೆ’ ಎಂದು ಗಾಂಬಿಯಾದ ಆರೋಗ್ಯ ನಿರ್ದೇಶಕ ಡಾ. ಮುಸ್ತಾಫಾ ಬಿಟ್ಟಾಯೆ ಅವರು ತಿಳಿಸಿದ್ದಾರೆ.</p>.<p>‘ಈ ಘಟನೆಯ ಬಗ್ಗೆ, ಭಾರತದಲ್ಲಿರುವ ಔಷಧ ತಯಾರಕ ಕಂಪನಿ ಮೈಡನ್ ಫಾರ್ಮಾಸ್ಯುಟಿಕಲ್ಸ್ನ ಪ್ರಧಾನ ಕಚೇರಿಗೆ ಕಡೆ ಮಾಡಿದರೂ ಯಾವುದೇ ಪ್ರತಿಕ್ರಿಯೆ ದೊರೆಯಲಿಲ್ಲ. ಭಾರತದ ಆರೋಗ್ಯ ಸಚಿವಾಲಯ, ಡಿಸಿಜಿಎ ಉತ್ತರಿಸಲಿಲ್ಲ’ ಎಂದು ‘ಅಸೋಸಿಯೇಟೆಡ್ ಪ್ರೆಸ್’ ಸುದ್ದಿಸಂಸ್ಥೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>