<p><strong>ಗಾಜಾಪಟ್ಟಿ</strong>:ಹಮಾಸ್ ಬಂಡುಕೋರರು ಕದನ ವಿರಾಮ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಇಸ್ರೇಲ್ ಸೇನೆ ಗಾಜಾಪಟ್ಟಿಯಲ್ಲಿ ರಾತ್ರೋರಾತ್ರಿ ನಡೆಸಿದ ಭಾರಿ ವಾಯು ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 81ಕ್ಕೆ ಏರಿಕೆಯಾಗಿದೆ. </p>.<p>ಮಂಗಳವಾರ ಸಂಜೆಯವರೆಗೆ 60 ಮಂದಿ ಮೃತಪಟ್ಟಿದ್ದರು. ಬುಧವಾರ ಏಳು ಮಹಿಳೆಯರು, ಆರು ಮಕ್ಕಳು ಸೇರಿ 21 ಜನರ ಮೃತದೇಹಗಳನ್ನು ಆಸ್ಪತ್ರೆಗೆ ತರಲಾಗಿದ್ದು, ಸಾವಿನ ಸಂಖ್ಯೆ 81ಕ್ಕೆ ಏರಿದೆ ಎಂದು ಗಾಜಾಪಟ್ಟಿಯ ಅಲ್ ಶಿಫಾ ಆಸ್ಪತ್ರೆಯ ನಿರ್ದೇಶಕ ಮಹಮದ್ ಅಬು ಸಲ್ಮಿಯಾ ತಿಳಿಸಿದ್ದಾರೆ. </p>.<p>ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ಗಂಭೀರ ಗಾಯಗಳೊಂದಿಗೆ 20 ಮಕ್ಕಳು ಸೇರಿ 45 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರಲ್ಲಿ ಅನೇಕರ ಸ್ಥಿತಿ ಚಿಂತಾಜನಕವಾಗಿದೆ ಎಂದು ಅವರು ಹೇಳಿದ್ದಾರೆ. </p>.<p><strong>‘ಕದನ ವಿರಾಮ ಮರುಸ್ಥಾಪನೆ’</strong></p>.<p>‘ಗಾಜಾಪಟ್ಟಿ ಒಳಗಿನ ಬಂಡುಕೋರರು ಮತ್ತು ಅವರ ನೆಲೆಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ ನಂತರವಷ್ಟೇ ಅಲ್ಲಿ ಕದನ ವಿರಾಮ ಮರುಸ್ಥಾಪನೆಗೊಂಡಿತು’ ಎಂದು ಇಸ್ರೇಲ್ ಸೇನೆ ಸಮರ್ಥಿಸಿಕೊಂಡಿದೆ.</p>.<p>‘ಪ್ಯಾಲೆಸ್ಟೀನಿಯರ ಪ್ರದೇಶದೊಳಗೆ ಸಕ್ರಿಯವಾಗಿದ್ದ 30 ಬಂಡುಕೋರರನ್ನು ಹೊಡೆದುರುಳಿಸಿದ್ದೇವೆ. ಕದನ ವಿರಾಮ ಒಪ್ಪಂದವನ್ನು ನಾವು ಎತ್ತಿ ಹಿಡಿಯುತ್ತೇವೆ. ಆದರೆ, ಯಾವುದೇ ರೀತಿಯ ಉಲ್ಲಂಘನೆಯನ್ನು ನಾವು ಸಹಿಸುವುದಿಲ್ಲ’ ಎಂದು ಇಸ್ರೇಲ್ ಸೇನೆ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಾಜಾಪಟ್ಟಿ</strong>:ಹಮಾಸ್ ಬಂಡುಕೋರರು ಕದನ ವಿರಾಮ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಇಸ್ರೇಲ್ ಸೇನೆ ಗಾಜಾಪಟ್ಟಿಯಲ್ಲಿ ರಾತ್ರೋರಾತ್ರಿ ನಡೆಸಿದ ಭಾರಿ ವಾಯು ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 81ಕ್ಕೆ ಏರಿಕೆಯಾಗಿದೆ. </p>.<p>ಮಂಗಳವಾರ ಸಂಜೆಯವರೆಗೆ 60 ಮಂದಿ ಮೃತಪಟ್ಟಿದ್ದರು. ಬುಧವಾರ ಏಳು ಮಹಿಳೆಯರು, ಆರು ಮಕ್ಕಳು ಸೇರಿ 21 ಜನರ ಮೃತದೇಹಗಳನ್ನು ಆಸ್ಪತ್ರೆಗೆ ತರಲಾಗಿದ್ದು, ಸಾವಿನ ಸಂಖ್ಯೆ 81ಕ್ಕೆ ಏರಿದೆ ಎಂದು ಗಾಜಾಪಟ್ಟಿಯ ಅಲ್ ಶಿಫಾ ಆಸ್ಪತ್ರೆಯ ನಿರ್ದೇಶಕ ಮಹಮದ್ ಅಬು ಸಲ್ಮಿಯಾ ತಿಳಿಸಿದ್ದಾರೆ. </p>.<p>ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ಗಂಭೀರ ಗಾಯಗಳೊಂದಿಗೆ 20 ಮಕ್ಕಳು ಸೇರಿ 45 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರಲ್ಲಿ ಅನೇಕರ ಸ್ಥಿತಿ ಚಿಂತಾಜನಕವಾಗಿದೆ ಎಂದು ಅವರು ಹೇಳಿದ್ದಾರೆ. </p>.<p><strong>‘ಕದನ ವಿರಾಮ ಮರುಸ್ಥಾಪನೆ’</strong></p>.<p>‘ಗಾಜಾಪಟ್ಟಿ ಒಳಗಿನ ಬಂಡುಕೋರರು ಮತ್ತು ಅವರ ನೆಲೆಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ ನಂತರವಷ್ಟೇ ಅಲ್ಲಿ ಕದನ ವಿರಾಮ ಮರುಸ್ಥಾಪನೆಗೊಂಡಿತು’ ಎಂದು ಇಸ್ರೇಲ್ ಸೇನೆ ಸಮರ್ಥಿಸಿಕೊಂಡಿದೆ.</p>.<p>‘ಪ್ಯಾಲೆಸ್ಟೀನಿಯರ ಪ್ರದೇಶದೊಳಗೆ ಸಕ್ರಿಯವಾಗಿದ್ದ 30 ಬಂಡುಕೋರರನ್ನು ಹೊಡೆದುರುಳಿಸಿದ್ದೇವೆ. ಕದನ ವಿರಾಮ ಒಪ್ಪಂದವನ್ನು ನಾವು ಎತ್ತಿ ಹಿಡಿಯುತ್ತೇವೆ. ಆದರೆ, ಯಾವುದೇ ರೀತಿಯ ಉಲ್ಲಂಘನೆಯನ್ನು ನಾವು ಸಹಿಸುವುದಿಲ್ಲ’ ಎಂದು ಇಸ್ರೇಲ್ ಸೇನೆ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>