<p><strong>ಜರುಸಲೇಂ:</strong> ಗಾಜಾದಲ್ಲಿ ಕ್ಷಾಮ ತಲೆದೋರಿದೆ ಎಂದು ವಿಶ್ವಸಂಸ್ಥೆ ಶುಕ್ರವಾರ ಘೋಷಿಸಿದೆ. ಇಸ್ರೇಲ್ ಮಾನವೀಯ ನೆರವು ನೀಡಲು ವ್ಯವಸ್ಥಿತವಾಗಿ ಅಡ್ಡಿ ಮಾಡಿದ್ದೇ ಇಂಥ ಸ್ಥಿತಿಗೆ ಕಾರಣ ಎಂದು ಅದು ಆರೋಪಿಸಿದೆ.</p>.<p>ಯುದ್ಧವನ್ನು ನಿಲ್ಲಿಸುವಂತೆ ಹಮಾಸ್ ಬಂಡುಕೋರರು ವಿಶ್ವಸಂಸ್ಥೆ ಮತ್ತು ಭದ್ರತಾ ಮಂಡಳಿಯನ್ನು ಒತ್ತಾಯಿಸಿದ್ದರು. ಅನಿರ್ಬಂಧಿತ ಆಹಾರ, ಔಷಧ, ನೀರು ಮತ್ತು ಇಂಧನ ಪೂರೈಕೆಗೆ ಮನವಿ ಮಾಡಿದ್ದರು.</p>.<h2>ವ್ಯಾಪಿಸುವ ಸಾಧ್ಯತೆ: </h2><p>ಗಾಜಾ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕ್ಷಾಮ ತಲೆದೋರಿದೆ. ಕದನ ವಿರಾಮ ಘೋಷಣೆಯಾಗದಿದ್ದರೆ ಮತ್ತು ಮಾನವೀಯ ನೆರವು ನೀಡಲು ಇರುವ ನಿರ್ಬಂಧ ಅಂತ್ಯಗೊಳ್ಳದಿದ್ದರೆ ಇತರ ಪ್ರದೇಶಗಳಿಗೂ ಕ್ಷಾಮ ಹಬ್ಬುವ ಸಾಧ್ಯತೆ ಇದೆ ಎಂದು ಆಹಾರ ಬಿಕ್ಕಟ್ಟು ಕುರಿತ ಸಂಸ್ಥೆ ಎಚ್ಚರಿಸಿದೆ.</p>.<p>ಸಮಗ್ರ ಆಹಾರ ಭದ್ರತಾ ವರ್ಗೀಕರಣ (ಐಪಿಸಿ) ಸಂಸ್ಥೆಯು, ಇಸ್ರೇಲ್ನಿಂದ ನಿರಂತರ ಆಕ್ರಮಣ, ಆಹಾರ ಮತ್ತು ಮಾನವೀಯ ನೆರವಿಗೆ ನಿರ್ಬಂಧ, ವ್ಯಾಪಕ ಸ್ಥಳಾಂತರ, ಉತ್ಪಾದನೆಯ ಕುಸಿತವು ಪ್ಯಾಲೆಸ್ಟೀನಿಯನ್ನರನ್ನು ಹಸಿವು, ಬರಗಾಲಕ್ಕೆ ದೂಡಿದೆ ಎಂದು ಹೇಳಿದೆ.</p>.<p>5 ಲಕ್ಷಕ್ಕೂ ಅಧಿಕ ಮಂದಿ ಅತ್ಯಂತ ಹಸಿವಿನಿಂದ ನಲುಗುತ್ತಿದ್ದಾರೆ, ಹಲವರು ಅಪೌಷ್ಟಿಕತೆ ಯಿಂದ ಸಾಯುವ ಹಂತ ತಲುಪಿದ್ದಾರೆ. ಸೆಪ್ಟೆಂಬರ್ ಅಂತ್ಯದ ವೇಳೆ ಈ ಸಂಖ್ಯೆಯು 6.41 ಲಕ್ಷಕ್ಕೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಐಪಿಸಿ ಹೇಳಿದೆ.</p>.<h2>ಷರತ್ತಿಗೆ ಒಪ್ಪದಿದ್ದರೆ ಗಾಜಾ ನಾಶ: ಇಸ್ರೇಲ್</h2><p> ಹಮಾಸ್ ಬಂಡುಕೋರರು ಇಸ್ರೇಲ್ ಷರತ್ತುಗಳಿಗೆ ಒಪ್ಪದಿದ್ದರೆ ಗಾಜಾ ನಗರವನ್ನೇ ನಾಶ ಮಾಡಬೇಕಾಗುತ್ತದೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಟ್ಜ್ ಶುಕ್ರವಾರ ಎಚ್ಚರಿಸಿದ್ದಾರೆ.</p><p>ಗಾಜಾ ಸಹ ರಫಾಹ್ ಮತ್ತು ಬೈತ್ ಹನೌನ್ ರೀತಿ ಭಗ್ನಾವಶೇಷವಾಗಲಿದೆ ಎಂದು ಅವರು ಹೇಳಿದ್ದಾರೆ.</p><p>ಗಾಜಾ ನಗರವನ್ನು ವಶಕ್ಕೆ ಪಡೆಯಲು ಮಹತ್ವದ ಕಾರ್ಯಾಚರಣೆ ನಡೆಸಲು ಸೇನೆಗೆ ಪರಮಾಧಿಕಾರ ನೀಡಲಾಗಿದೆ ಎಂದು ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಹೇಳಿಕೆ ನೀಡಿದ ಬಳಿಕ ಈ ಎಚ್ಚರಿಕೆ ನೀಡಿದ್ದಾರೆ.</p>.<div><blockquote>ಗಾಜಾದಲ್ಲಿನ ಕ್ಷಾಮವು ಮಾನವನಿರ್ಮಿತ ದುರಂತ. ನೈತಿಕತೆಯ ಅಧಃಪತನ, ಮಾನವೀಯತೆಯ ವೈಫಲ್ಯ. ಕೂಡಲೇ ಕದನ ವಿರಾಮ ಘೋಷಣೆಯಾಗಲಿ <br></blockquote><span class="attribution">ಆ್ಯಂಟೊನಿಯೊ ಗುಟೆರಸ್, ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜರುಸಲೇಂ:</strong> ಗಾಜಾದಲ್ಲಿ ಕ್ಷಾಮ ತಲೆದೋರಿದೆ ಎಂದು ವಿಶ್ವಸಂಸ್ಥೆ ಶುಕ್ರವಾರ ಘೋಷಿಸಿದೆ. ಇಸ್ರೇಲ್ ಮಾನವೀಯ ನೆರವು ನೀಡಲು ವ್ಯವಸ್ಥಿತವಾಗಿ ಅಡ್ಡಿ ಮಾಡಿದ್ದೇ ಇಂಥ ಸ್ಥಿತಿಗೆ ಕಾರಣ ಎಂದು ಅದು ಆರೋಪಿಸಿದೆ.</p>.<p>ಯುದ್ಧವನ್ನು ನಿಲ್ಲಿಸುವಂತೆ ಹಮಾಸ್ ಬಂಡುಕೋರರು ವಿಶ್ವಸಂಸ್ಥೆ ಮತ್ತು ಭದ್ರತಾ ಮಂಡಳಿಯನ್ನು ಒತ್ತಾಯಿಸಿದ್ದರು. ಅನಿರ್ಬಂಧಿತ ಆಹಾರ, ಔಷಧ, ನೀರು ಮತ್ತು ಇಂಧನ ಪೂರೈಕೆಗೆ ಮನವಿ ಮಾಡಿದ್ದರು.</p>.<h2>ವ್ಯಾಪಿಸುವ ಸಾಧ್ಯತೆ: </h2><p>ಗಾಜಾ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕ್ಷಾಮ ತಲೆದೋರಿದೆ. ಕದನ ವಿರಾಮ ಘೋಷಣೆಯಾಗದಿದ್ದರೆ ಮತ್ತು ಮಾನವೀಯ ನೆರವು ನೀಡಲು ಇರುವ ನಿರ್ಬಂಧ ಅಂತ್ಯಗೊಳ್ಳದಿದ್ದರೆ ಇತರ ಪ್ರದೇಶಗಳಿಗೂ ಕ್ಷಾಮ ಹಬ್ಬುವ ಸಾಧ್ಯತೆ ಇದೆ ಎಂದು ಆಹಾರ ಬಿಕ್ಕಟ್ಟು ಕುರಿತ ಸಂಸ್ಥೆ ಎಚ್ಚರಿಸಿದೆ.</p>.<p>ಸಮಗ್ರ ಆಹಾರ ಭದ್ರತಾ ವರ್ಗೀಕರಣ (ಐಪಿಸಿ) ಸಂಸ್ಥೆಯು, ಇಸ್ರೇಲ್ನಿಂದ ನಿರಂತರ ಆಕ್ರಮಣ, ಆಹಾರ ಮತ್ತು ಮಾನವೀಯ ನೆರವಿಗೆ ನಿರ್ಬಂಧ, ವ್ಯಾಪಕ ಸ್ಥಳಾಂತರ, ಉತ್ಪಾದನೆಯ ಕುಸಿತವು ಪ್ಯಾಲೆಸ್ಟೀನಿಯನ್ನರನ್ನು ಹಸಿವು, ಬರಗಾಲಕ್ಕೆ ದೂಡಿದೆ ಎಂದು ಹೇಳಿದೆ.</p>.<p>5 ಲಕ್ಷಕ್ಕೂ ಅಧಿಕ ಮಂದಿ ಅತ್ಯಂತ ಹಸಿವಿನಿಂದ ನಲುಗುತ್ತಿದ್ದಾರೆ, ಹಲವರು ಅಪೌಷ್ಟಿಕತೆ ಯಿಂದ ಸಾಯುವ ಹಂತ ತಲುಪಿದ್ದಾರೆ. ಸೆಪ್ಟೆಂಬರ್ ಅಂತ್ಯದ ವೇಳೆ ಈ ಸಂಖ್ಯೆಯು 6.41 ಲಕ್ಷಕ್ಕೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಐಪಿಸಿ ಹೇಳಿದೆ.</p>.<h2>ಷರತ್ತಿಗೆ ಒಪ್ಪದಿದ್ದರೆ ಗಾಜಾ ನಾಶ: ಇಸ್ರೇಲ್</h2><p> ಹಮಾಸ್ ಬಂಡುಕೋರರು ಇಸ್ರೇಲ್ ಷರತ್ತುಗಳಿಗೆ ಒಪ್ಪದಿದ್ದರೆ ಗಾಜಾ ನಗರವನ್ನೇ ನಾಶ ಮಾಡಬೇಕಾಗುತ್ತದೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಟ್ಜ್ ಶುಕ್ರವಾರ ಎಚ್ಚರಿಸಿದ್ದಾರೆ.</p><p>ಗಾಜಾ ಸಹ ರಫಾಹ್ ಮತ್ತು ಬೈತ್ ಹನೌನ್ ರೀತಿ ಭಗ್ನಾವಶೇಷವಾಗಲಿದೆ ಎಂದು ಅವರು ಹೇಳಿದ್ದಾರೆ.</p><p>ಗಾಜಾ ನಗರವನ್ನು ವಶಕ್ಕೆ ಪಡೆಯಲು ಮಹತ್ವದ ಕಾರ್ಯಾಚರಣೆ ನಡೆಸಲು ಸೇನೆಗೆ ಪರಮಾಧಿಕಾರ ನೀಡಲಾಗಿದೆ ಎಂದು ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಹೇಳಿಕೆ ನೀಡಿದ ಬಳಿಕ ಈ ಎಚ್ಚರಿಕೆ ನೀಡಿದ್ದಾರೆ.</p>.<div><blockquote>ಗಾಜಾದಲ್ಲಿನ ಕ್ಷಾಮವು ಮಾನವನಿರ್ಮಿತ ದುರಂತ. ನೈತಿಕತೆಯ ಅಧಃಪತನ, ಮಾನವೀಯತೆಯ ವೈಫಲ್ಯ. ಕೂಡಲೇ ಕದನ ವಿರಾಮ ಘೋಷಣೆಯಾಗಲಿ <br></blockquote><span class="attribution">ಆ್ಯಂಟೊನಿಯೊ ಗುಟೆರಸ್, ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>