ಭಾರತ ಪಾಕಿಸ್ತಾನದೊಂದಿಗೆ ದಾಳಿ ಬಗ್ಗೆ ತನಿಖಾ ಮಾಹಿತಿಗಳನ್ನು ಹಂಚಿಕೊಂಡರೆ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಫೆ. 19ರಂದು ಇಮ್ರಾನ್ ಖಾನ್ ಭರವಸೆ ನೀಡಿದ್ದರು. ಆದರೆ ಭಾರತ ಪ್ರತಿ ದಾಳಿ ನಡೆಸಿದರೆ ಸುಮ್ಮನಿರುವುದಿಲ್ಲ ಎಂದು ಎಚ್ಚರಿಕೆಯನ್ನೂ ನೀಡಿದ್ದರು.
ಆದಾಗ್ಯೂ , ದಾಳಿ ಬಗ್ಗೆ ತನಿಖೆ ಮಾಡುತ್ತೇವೆ ಎಂದು ಇಮ್ರಾನ್ ಹೇಳಿರುವುದು ಸುಳ್ಳು ನೆಪ.ಜೈಷ್- ಎ- ಮೊಹಮ್ಮದ್ ಸಂಘಟನೆ ಮತ್ತು ಅದರ ಮುಖಂಡ ಮಸೂದ್ ಅಜರ್ ಪಾಕಿಸ್ತಾನದವ ಎಂಬುದು ಗೊತ್ತಿರುವ ಸಂಗತಿ. ಹೀಗಿರುವಾಗ ಕ್ರಮ ತೆಗೆದುಕೊಳ್ಳಲು ಪಾಕಿಸ್ತಾನದ ಬಗೆ ಸಾಕಷ್ಟು ದಾಖಲೆಗಳು ಇವೆ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.