‘ನ್ಯಾಯಾಂಗ ಇಲಾಖೆಯು ತನಿಖೆ ನಡೆಸುತ್ತಿರುವ ಕಾರಣ, ಈ ಬಗ್ಗೆ ಹೆಚ್ಚು ಮಾತನಾಡವುದಿಲ್ಲ. ಆದರೆ, ಎರಡು ವಿಷಯಗಳನ್ನು ಸ್ಪಷ್ಟಪಡಿಸಲು ಬಯಸುತ್ತೇನೆ. ಮೊದಲನೆದಾಗಿ ಭಾರತ ನಮ್ಮ ಮುಖ್ಯ ಪಾಲುದಾರ ದೇಶವಾಗಿ ಇರಲಿದೆ. ಎರಡನೆದಾಗಿ, ಈ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ನಾವು ಕಾರ್ಯಪ್ರವೃತ್ತರಾಗುತ್ತೇವೆ’ ಎಂದು ಕಿರ್ಬಿ ಹೇಳಿದ್ದಾರೆ.