<p><strong>ಕೊಲಂಬೊ</strong>: ಶ್ರೀಲಂಕಾ ಬಿಟ್ಟು ಮಾಲ್ಡೀವ್ಸ್ಗೆ ಪರಾರಿಯಾಗಿರುವ ಅಧ್ಯಕ್ಷ ಗೊಟಬಯ ರಾಜಪಕ್ಸ ಅವರು, ಸಿಂಗಪುರಕ್ಕೆ ತೆರಳಲು ನಿಗದಿಯಾಗಿದ್ದ ವಿಮಾನವನ್ನು ಹತ್ತಿಲ್ಲ. ಭದ್ರತೆ ದೃಷ್ಟಿಯಿಂದ ಅವರು ಈ ನಿರ್ಧಾರ ಕೈಗೊಂಡಿದ್ದು, ಖಾಸಗಿ ವಿಮಾನಕ್ಕಾಗಿ ಕಾಯುತ್ತಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.</p>.<p>ಬುಧವಾರ ರಾಜೀನಾಮೆ ನೀಡುವುದಾಗಿ ಹೇಳಿದ್ದ ಅವರು, ಪ್ರಧಾನಿ ರಾನಿಲ್ ವಿಕ್ರಮ ಸಿಂಘೆ ಅವರನ್ನು ಪ್ರಭಾರಿ ಅಧ್ಯಕ್ಷರಾಗಿ ನೇಮಕ ಮಾಡಿ ದೇಶ ಬಿಟ್ಟು ತೆರಳಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾಗಿದ್ದು, ಪ್ರತಿಭಟನೆ ತೀವ್ರಗೊಂಡಿದೆ. ಹಾಗಾಗಿ, ತುರ್ತು ಪರಿಸ್ಥಿತಿ ಘೋಷಿಸಲಾಗಿದೆ.</p>.<p>ತಾವು ವಿದೇಶದಲ್ಲಿರುವ ಸಮಯದಲ್ಲಿ ಅಧ್ಯಕ್ಷರ ಕೆಲಸಗಳನ್ನು ನಿರ್ವಹಿಸಲು ಗೊಟಬಯ ರಾಜಪಕ್ಸ ಅವರು, ರಾನಿಲ್ ವಿಕ್ರಮಸಿಂಘೆ ಅವರನ್ನು ಪ್ರಭಾರಿ ಅಧ್ಯಕ್ಷರಾಗಿ ನೇಮಕ ಮಾಡಿದ್ದಾರೆ ಎಂದು ಸಂಸತ್ತಿನ ಸ್ಪೀಕರ್ ಮಹಿಂದಾ ಯಪ ಅಬ್ಯೆವರ್ದನ ಹೇಳಿದ್ದಾರೆ.<br /><br />ರಾಜಪಕ್ಸ, ಅವರ ಪತ್ನಿ ಹಾಗೂ ಇಬ್ಬರು ಭದ್ರತಾ ಸಿಬ್ಬಂದಿ ಮಾಲ್ಡೀವ್ಸ್ನಿಂದ ಎಸ್ಕ್ಯು 437 ವಿಮಾನದ ಮೂಲಕ ಸಿಂಗಪುರಕ್ಕೆ ತೆರಳಬೇಕಿತ್ತು. ಆದರೆ, ಬುಧವಾರ ರಾತ್ರಿ ರಾಜಪಕ್ಸ ಮತ್ತು ಅವರ ಕುಟುಂಬ ಭದ್ರತಾ ದೃಷ್ಟಿಯಿಂದ ವಿಮಾನ ಹತ್ತಲಿಲ್ಲ ಎಂದು ಡೈಲಿ ಮಿರರ್ ವರದಿ ತಿಳಿಸಿದೆ.<br /><br />ಶ್ರೀಲಂಕಾ ಅಧ್ಯಕ್ಷರಿಗೆಖಾಸಗಿ ವಿಮಾನ ವ್ಯವಸ್ಥೆ ಮಾಡುವ ಕುರಿತು ಮಾತುಕತೆ ನಡೆಯುತ್ತಿದೆ ಎಂದು ತಿಳಿದು ಬಂದಿದೆ.</p>.<p>ಈ ಮಧ್ಯೆ, ಗೊಟಬಯ ರಾಜಪಕ್ಸ ಅವರುರಾಜೀನಾಮೆ ನೀಡಿಲ್ಲ ಎಂದು ಸ್ಪೀಕರ್ ಹೇಳಿದ್ದಾರೆ.</p>.<p>2.2 ಕೋಟಿ ಜನಸಂಖ್ಯೆ ಇರುವ ಶ್ರೀಲಂಕಾದಲ್ಲಿ ಭೀಕರ ಆರ್ಥಿಕ ಬಿಕ್ಕಟ್ಟು ಎದುರಾಗಿದೆ. ಆಹಾರ, ಔಷಧಿ, ಇಂಧನ ಮತ್ತು ಇತರ ಅಗತ್ಯ ವಸ್ತುಗಳ ಖರೀದಿಗೂ ವಿದೇಶಿ ಕರೆನ್ಸಿಕೊರತೆ ಎದುರಾಗಿದೆ. ದೇಶ ದಿವಾಳಿಯಾಗಿದೆ ಎಂದು ಪ್ರಧಾನಿ ರಾನಿಲ್ ವಿಕ್ರಮ ಸಿಂಘೆ ವಾರದ ಹಿಂದೆ ಘೋಷಿಸಿದ್ದರು.</p>.<p>ಇವನ್ನೂ ಓದಿ..</p>.<p><a href="https://www.prajavani.net/world-news/it-is-important-that-the-root-causes-of-the-conflict-and-protestors-grievances-are-addressed-says-un-954230.html" itemprop="url">ಶ್ರೀಲಂಕಾ ಪ್ರತಿಭಟನಾಕಾರರ ಕುಂದುಕೊರತೆಗಳನ್ನು ಪರಿಹರಿಸುವುದು ಮುಖ್ಯ:ವಿಶ್ವಸಂಸ್ಥೆ </a></p>.<p><a href="https://www.prajavani.net/world-news/sri-lankas-acting-president-wickremesinghe-asks-speaker-to-nominate-pm-who-is-acceptable-to-all-954216.html" itemprop="url">ಆಡಳಿತ, ವಿಪಕ್ಷಗಳು ಒಪ್ಪುವ ವ್ಯಕ್ತಿಗೆ ಶ್ರೀಲಂಕಾ ಪ್ರಧಾನಿ ಗಾದಿ: ರಾನಿಲ್ ಸೂಚನೆ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಲಂಬೊ</strong>: ಶ್ರೀಲಂಕಾ ಬಿಟ್ಟು ಮಾಲ್ಡೀವ್ಸ್ಗೆ ಪರಾರಿಯಾಗಿರುವ ಅಧ್ಯಕ್ಷ ಗೊಟಬಯ ರಾಜಪಕ್ಸ ಅವರು, ಸಿಂಗಪುರಕ್ಕೆ ತೆರಳಲು ನಿಗದಿಯಾಗಿದ್ದ ವಿಮಾನವನ್ನು ಹತ್ತಿಲ್ಲ. ಭದ್ರತೆ ದೃಷ್ಟಿಯಿಂದ ಅವರು ಈ ನಿರ್ಧಾರ ಕೈಗೊಂಡಿದ್ದು, ಖಾಸಗಿ ವಿಮಾನಕ್ಕಾಗಿ ಕಾಯುತ್ತಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.</p>.<p>ಬುಧವಾರ ರಾಜೀನಾಮೆ ನೀಡುವುದಾಗಿ ಹೇಳಿದ್ದ ಅವರು, ಪ್ರಧಾನಿ ರಾನಿಲ್ ವಿಕ್ರಮ ಸಿಂಘೆ ಅವರನ್ನು ಪ್ರಭಾರಿ ಅಧ್ಯಕ್ಷರಾಗಿ ನೇಮಕ ಮಾಡಿ ದೇಶ ಬಿಟ್ಟು ತೆರಳಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾಗಿದ್ದು, ಪ್ರತಿಭಟನೆ ತೀವ್ರಗೊಂಡಿದೆ. ಹಾಗಾಗಿ, ತುರ್ತು ಪರಿಸ್ಥಿತಿ ಘೋಷಿಸಲಾಗಿದೆ.</p>.<p>ತಾವು ವಿದೇಶದಲ್ಲಿರುವ ಸಮಯದಲ್ಲಿ ಅಧ್ಯಕ್ಷರ ಕೆಲಸಗಳನ್ನು ನಿರ್ವಹಿಸಲು ಗೊಟಬಯ ರಾಜಪಕ್ಸ ಅವರು, ರಾನಿಲ್ ವಿಕ್ರಮಸಿಂಘೆ ಅವರನ್ನು ಪ್ರಭಾರಿ ಅಧ್ಯಕ್ಷರಾಗಿ ನೇಮಕ ಮಾಡಿದ್ದಾರೆ ಎಂದು ಸಂಸತ್ತಿನ ಸ್ಪೀಕರ್ ಮಹಿಂದಾ ಯಪ ಅಬ್ಯೆವರ್ದನ ಹೇಳಿದ್ದಾರೆ.<br /><br />ರಾಜಪಕ್ಸ, ಅವರ ಪತ್ನಿ ಹಾಗೂ ಇಬ್ಬರು ಭದ್ರತಾ ಸಿಬ್ಬಂದಿ ಮಾಲ್ಡೀವ್ಸ್ನಿಂದ ಎಸ್ಕ್ಯು 437 ವಿಮಾನದ ಮೂಲಕ ಸಿಂಗಪುರಕ್ಕೆ ತೆರಳಬೇಕಿತ್ತು. ಆದರೆ, ಬುಧವಾರ ರಾತ್ರಿ ರಾಜಪಕ್ಸ ಮತ್ತು ಅವರ ಕುಟುಂಬ ಭದ್ರತಾ ದೃಷ್ಟಿಯಿಂದ ವಿಮಾನ ಹತ್ತಲಿಲ್ಲ ಎಂದು ಡೈಲಿ ಮಿರರ್ ವರದಿ ತಿಳಿಸಿದೆ.<br /><br />ಶ್ರೀಲಂಕಾ ಅಧ್ಯಕ್ಷರಿಗೆಖಾಸಗಿ ವಿಮಾನ ವ್ಯವಸ್ಥೆ ಮಾಡುವ ಕುರಿತು ಮಾತುಕತೆ ನಡೆಯುತ್ತಿದೆ ಎಂದು ತಿಳಿದು ಬಂದಿದೆ.</p>.<p>ಈ ಮಧ್ಯೆ, ಗೊಟಬಯ ರಾಜಪಕ್ಸ ಅವರುರಾಜೀನಾಮೆ ನೀಡಿಲ್ಲ ಎಂದು ಸ್ಪೀಕರ್ ಹೇಳಿದ್ದಾರೆ.</p>.<p>2.2 ಕೋಟಿ ಜನಸಂಖ್ಯೆ ಇರುವ ಶ್ರೀಲಂಕಾದಲ್ಲಿ ಭೀಕರ ಆರ್ಥಿಕ ಬಿಕ್ಕಟ್ಟು ಎದುರಾಗಿದೆ. ಆಹಾರ, ಔಷಧಿ, ಇಂಧನ ಮತ್ತು ಇತರ ಅಗತ್ಯ ವಸ್ತುಗಳ ಖರೀದಿಗೂ ವಿದೇಶಿ ಕರೆನ್ಸಿಕೊರತೆ ಎದುರಾಗಿದೆ. ದೇಶ ದಿವಾಳಿಯಾಗಿದೆ ಎಂದು ಪ್ರಧಾನಿ ರಾನಿಲ್ ವಿಕ್ರಮ ಸಿಂಘೆ ವಾರದ ಹಿಂದೆ ಘೋಷಿಸಿದ್ದರು.</p>.<p>ಇವನ್ನೂ ಓದಿ..</p>.<p><a href="https://www.prajavani.net/world-news/it-is-important-that-the-root-causes-of-the-conflict-and-protestors-grievances-are-addressed-says-un-954230.html" itemprop="url">ಶ್ರೀಲಂಕಾ ಪ್ರತಿಭಟನಾಕಾರರ ಕುಂದುಕೊರತೆಗಳನ್ನು ಪರಿಹರಿಸುವುದು ಮುಖ್ಯ:ವಿಶ್ವಸಂಸ್ಥೆ </a></p>.<p><a href="https://www.prajavani.net/world-news/sri-lankas-acting-president-wickremesinghe-asks-speaker-to-nominate-pm-who-is-acceptable-to-all-954216.html" itemprop="url">ಆಡಳಿತ, ವಿಪಕ್ಷಗಳು ಒಪ್ಪುವ ವ್ಯಕ್ತಿಗೆ ಶ್ರೀಲಂಕಾ ಪ್ರಧಾನಿ ಗಾದಿ: ರಾನಿಲ್ ಸೂಚನೆ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>