<p><strong>ನವದೆಹಲಿ</strong>: ‘ಹಿಂದೂಗಳು ಸೇರಿದಂತೆ ಅಲ್ಪಸಂಖ್ಯಾತರ ರಕ್ಷಣೆ ಮಾಡುವಲ್ಲಿ ಮಧ್ಯಂತರ ಸರ್ಕಾರದ ಮುಖ್ಯಸ್ಥ ಮೊಹಮ್ಮದ್ ಯೂನುಸ್ ವಿಫಲರಾಗಿದ್ದು, ಬಾಂಗ್ಲಾದೇಶದ ಸದ್ಯದ ಪರಿಸ್ಥಿತಿಗೆ ಅವರೇ ಕಾರಣ’ ಎಂದು ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಬುಧವಾರ ವಾಗ್ದಾಳಿ ನಡೆಸಿದ್ದಾರೆ.</p>.<p>‘ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ‘ನರಹತ್ಯೆ’ಗೆ ಯೂನುಸ್ ಅವರೇ ಹೊಣೆ’ ಎಂದೂ ಆರೋಪಿಸಿದ್ದಾರೆ.</p>.<p>ನ್ಯೂಯಾರ್ಕ್ನಲ್ಲಿರುವ ತಮ್ಮ ಬೆಂಬಲಿಗರನ್ನು ಉದ್ಧೇಶಿಸಿ ವರ್ಚುವಲ್ ಆಗಿ ಮಾತನಾಡಿದ ಅವರು, ‘ನಮ್ಮ ತಂದೆ ಶೇಖ್ ಮುಜಿಬುರ್ ರೆಹಮಾನ್ ಅವರನ್ನು 1975ರಲ್ಲಿ ಹತ್ಯೆ ಮಾಡಲಾಗಿತ್ತು. ಅದೇ ರೀತಿಯಲ್ಲಿಯೇ ನನ್ನನ್ನು, ನನ್ನ ಸಹೋದರಿ ಶೇಖ್ ರೆಹಾನಾಳನ್ನು ಕೊಲೆ ಮಾಡಲು ಸಂಚು ರೂಪಿಸಲಾಗಿತ್ತು’ ಎಂದು ಆರೋಪಿಸಿದ್ದಾರೆ.</p>.<p>‘ಯೂನುಸ್ ಒಬ್ಬ ಅಧಿಕಾರ ದಾಹಿ’ ಎಂದು ಟೀಕಿಸಿದ ಅವರು, ‘ಬಾಂಗ್ಲಾದೇಶದಲ್ಲಿನ ದೇವಾಲಯಗಳ ಮೇಲೆ ದಾಳಿ ನಡೆಯುತ್ತಿದೆ. ದೇಶದಲ್ಲಿ ಉದ್ಭವಿಸಿರುವ ಪರಿಸ್ಥಿತಿ ನಿಭಾಯಿಸುವಲ್ಲಿ ಪ್ರಸ್ತುತ ಸರ್ಕಾರ ಸಂಪೂರ್ಣ ವಿಫಲವಾಗಿದೆ’ ಎಂದು ಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ಹಿಂದೂಗಳು ಸೇರಿದಂತೆ ಅಲ್ಪಸಂಖ್ಯಾತರ ರಕ್ಷಣೆ ಮಾಡುವಲ್ಲಿ ಮಧ್ಯಂತರ ಸರ್ಕಾರದ ಮುಖ್ಯಸ್ಥ ಮೊಹಮ್ಮದ್ ಯೂನುಸ್ ವಿಫಲರಾಗಿದ್ದು, ಬಾಂಗ್ಲಾದೇಶದ ಸದ್ಯದ ಪರಿಸ್ಥಿತಿಗೆ ಅವರೇ ಕಾರಣ’ ಎಂದು ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಬುಧವಾರ ವಾಗ್ದಾಳಿ ನಡೆಸಿದ್ದಾರೆ.</p>.<p>‘ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ‘ನರಹತ್ಯೆ’ಗೆ ಯೂನುಸ್ ಅವರೇ ಹೊಣೆ’ ಎಂದೂ ಆರೋಪಿಸಿದ್ದಾರೆ.</p>.<p>ನ್ಯೂಯಾರ್ಕ್ನಲ್ಲಿರುವ ತಮ್ಮ ಬೆಂಬಲಿಗರನ್ನು ಉದ್ಧೇಶಿಸಿ ವರ್ಚುವಲ್ ಆಗಿ ಮಾತನಾಡಿದ ಅವರು, ‘ನಮ್ಮ ತಂದೆ ಶೇಖ್ ಮುಜಿಬುರ್ ರೆಹಮಾನ್ ಅವರನ್ನು 1975ರಲ್ಲಿ ಹತ್ಯೆ ಮಾಡಲಾಗಿತ್ತು. ಅದೇ ರೀತಿಯಲ್ಲಿಯೇ ನನ್ನನ್ನು, ನನ್ನ ಸಹೋದರಿ ಶೇಖ್ ರೆಹಾನಾಳನ್ನು ಕೊಲೆ ಮಾಡಲು ಸಂಚು ರೂಪಿಸಲಾಗಿತ್ತು’ ಎಂದು ಆರೋಪಿಸಿದ್ದಾರೆ.</p>.<p>‘ಯೂನುಸ್ ಒಬ್ಬ ಅಧಿಕಾರ ದಾಹಿ’ ಎಂದು ಟೀಕಿಸಿದ ಅವರು, ‘ಬಾಂಗ್ಲಾದೇಶದಲ್ಲಿನ ದೇವಾಲಯಗಳ ಮೇಲೆ ದಾಳಿ ನಡೆಯುತ್ತಿದೆ. ದೇಶದಲ್ಲಿ ಉದ್ಭವಿಸಿರುವ ಪರಿಸ್ಥಿತಿ ನಿಭಾಯಿಸುವಲ್ಲಿ ಪ್ರಸ್ತುತ ಸರ್ಕಾರ ಸಂಪೂರ್ಣ ವಿಫಲವಾಗಿದೆ’ ಎಂದು ಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>