<p><strong>ಢಾಕಾ</strong>: ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯನ್ನು ಬೆಂಕಿ ಹಚ್ಚಿ ಸಾಯಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.</p><p>ಬಾಂಗ್ಲಾದೇಶದ ನರಸಿಂಗ್ಡಿ ಜಿಲ್ಲೆಯ ನರಸಿಂಗ್ಡಿ ನಗರದ ಹೊರವಲಯದಲ್ಲಿ ಈ ಕೃತ್ಯ ಶನಿವಾರ ನಡೆದಿದೆ ಎಂದು ಎಸ್ಪಿ ಅಬ್ದುಲ್ಲ ಅಲ್ ಫಾರೂಕ್ ತಿಳಿಸಿದ್ದಾರೆ.</p><p>ಮೃತ ವ್ಯಕ್ತಿಯನ್ನು 25 ವರ್ಷ ವಯಸ್ಸಿನ ಚಂಚಲ್ ಭೂಮಿಕ್ ಎಂದು ಗುರುತಿಸಲಾಗಿದೆ. ಆತ ಸ್ಥಳೀಯ ಗ್ಯಾರೇಜ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಚಂಚಲ್ ಶುಕ್ರವಾರ ರಾತ್ರಿ ಕೆಲಸ ಮುಗಿಸಿ ಗ್ಯಾರೇಜ್ನಲ್ಲಿಯೇ ಮಲಗಿದ್ದ. ಈ ವೇಳೆ ಗ್ಯಾರೇಜ್ನಲ್ಲಿ ಬೆಂಕಿ ಅವಘಡದಿಂದಾಗಿ ಆತ ಸತ್ತಿದ್ದಾನೆ ಎಂದು ಅವರು ವಿವರಿಸಿದ್ದಾರೆ.</p><p>ಸಿಸಿಟಿವಿ ದೃಶ್ಯಗಳನ್ನು ಪರಿಶೀಲನೆ ನಡೆಸಿದಾಗ ಅನುಮಾನಾಸ್ಪದ ವ್ಯಕ್ತಿಗಳು ಸ್ಥಳದಲ್ಲಿ ಇದ್ದಿದ್ದು ಕಂಡು ಬಂದಿದೆ. ಅದಾಗ್ಯೂ ಈ ಘಟನೆ ಉದ್ದೇಶಪೂರ್ವಕವೋ? ಆಕಸ್ಮಿಕ ಬೆಂಕಿ ಅವಘಡವೋ? ಎಂಬುದು ಸಂಪೂರ್ಣ ತನಿಖೆಯಿಂದ ತಿಳಿದು ಬರಲಿದೆ ಎಂದು ಎಸ್ಪಿ ಅಬ್ದುಲ್ ತಿಳಿಸಿದ್ದಾರೆ.</p><p>ಕಳೆದ ತಿಂಗಳು ಉದ್ರಿಕ್ತರ ಗುಂಪೊಂದು ಬಾಂಗ್ಲಾದೇಶದಲ್ಲಿ ಹಿಂದೂ ವ್ಯಕ್ತಿಯೊಬ್ಬನನ್ನು ಬಹಿರಂಗವಾಗಿಯೇ ಬೆಂಕಿ ಹಚ್ಚಿ ಸಾಯಿಸಿದ್ದ ಘಟನೆ ಭಾರತ ಸೇರಿದಂತೆ ಪ್ರಪಂಚದ ಹಲವು ದೇಶಗಳಲ್ಲಿ ತಲ್ಲಣ ಸೃಷ್ಟಿಸಿತ್ತು.</p><p>ಬಾಂಗ್ಲಾದೇಶದಲ್ಲಿ ಇತ್ತೀಚೆಗೆ ವ್ಯಾಪಕವಾಗಿ ಹಿಂದೂ ಧರ್ಮೀಯರ ಮೇಲೆ ಉದ್ದೇಶಪೂರ್ವಕವಾಗಿ ಹಲ್ಲೆ, ಕೊಲೆಗಳು ನಡೆಯುತ್ತಿವೆ ಎಂದು ಆರೋಪಿಸಿ ಭಾರತದ ಹಲವೆಡೆ ಪ್ರತಿಭಟನೆಗಳು ನಡೆದಿವೆ. ಈ ಕುರಿತು ಎಎನ್ಐ ಸುದ್ದಿಸಂಸ್ಥೆ ಎಕ್ಸ್ ಮಾಹಿತಿ ಹಂಚಿಕೊಂಡಿದೆ.</p>.ಬಾಂಗ್ಲಾದೇಶ | ಹಿಂದೂ ಆಟೊ ಚಾಲಕನ ಕೊಲೆ: ಹರಿತವಾದ ಆಯುಧಗಳನ್ನು ಬಳಸಿ ಕೃತ್ಯ .ಬಾಂಗ್ಲಾದೇಶ: ಹಲ್ಲೆಯಿಂದ ಪಾರಾಗಲು ನಾಲೆಗೆ ಹಾರಿದ ಹಿಂದೂ ವ್ಯಕ್ತಿ ಸಾವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಢಾಕಾ</strong>: ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯನ್ನು ಬೆಂಕಿ ಹಚ್ಚಿ ಸಾಯಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.</p><p>ಬಾಂಗ್ಲಾದೇಶದ ನರಸಿಂಗ್ಡಿ ಜಿಲ್ಲೆಯ ನರಸಿಂಗ್ಡಿ ನಗರದ ಹೊರವಲಯದಲ್ಲಿ ಈ ಕೃತ್ಯ ಶನಿವಾರ ನಡೆದಿದೆ ಎಂದು ಎಸ್ಪಿ ಅಬ್ದುಲ್ಲ ಅಲ್ ಫಾರೂಕ್ ತಿಳಿಸಿದ್ದಾರೆ.</p><p>ಮೃತ ವ್ಯಕ್ತಿಯನ್ನು 25 ವರ್ಷ ವಯಸ್ಸಿನ ಚಂಚಲ್ ಭೂಮಿಕ್ ಎಂದು ಗುರುತಿಸಲಾಗಿದೆ. ಆತ ಸ್ಥಳೀಯ ಗ್ಯಾರೇಜ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಚಂಚಲ್ ಶುಕ್ರವಾರ ರಾತ್ರಿ ಕೆಲಸ ಮುಗಿಸಿ ಗ್ಯಾರೇಜ್ನಲ್ಲಿಯೇ ಮಲಗಿದ್ದ. ಈ ವೇಳೆ ಗ್ಯಾರೇಜ್ನಲ್ಲಿ ಬೆಂಕಿ ಅವಘಡದಿಂದಾಗಿ ಆತ ಸತ್ತಿದ್ದಾನೆ ಎಂದು ಅವರು ವಿವರಿಸಿದ್ದಾರೆ.</p><p>ಸಿಸಿಟಿವಿ ದೃಶ್ಯಗಳನ್ನು ಪರಿಶೀಲನೆ ನಡೆಸಿದಾಗ ಅನುಮಾನಾಸ್ಪದ ವ್ಯಕ್ತಿಗಳು ಸ್ಥಳದಲ್ಲಿ ಇದ್ದಿದ್ದು ಕಂಡು ಬಂದಿದೆ. ಅದಾಗ್ಯೂ ಈ ಘಟನೆ ಉದ್ದೇಶಪೂರ್ವಕವೋ? ಆಕಸ್ಮಿಕ ಬೆಂಕಿ ಅವಘಡವೋ? ಎಂಬುದು ಸಂಪೂರ್ಣ ತನಿಖೆಯಿಂದ ತಿಳಿದು ಬರಲಿದೆ ಎಂದು ಎಸ್ಪಿ ಅಬ್ದುಲ್ ತಿಳಿಸಿದ್ದಾರೆ.</p><p>ಕಳೆದ ತಿಂಗಳು ಉದ್ರಿಕ್ತರ ಗುಂಪೊಂದು ಬಾಂಗ್ಲಾದೇಶದಲ್ಲಿ ಹಿಂದೂ ವ್ಯಕ್ತಿಯೊಬ್ಬನನ್ನು ಬಹಿರಂಗವಾಗಿಯೇ ಬೆಂಕಿ ಹಚ್ಚಿ ಸಾಯಿಸಿದ್ದ ಘಟನೆ ಭಾರತ ಸೇರಿದಂತೆ ಪ್ರಪಂಚದ ಹಲವು ದೇಶಗಳಲ್ಲಿ ತಲ್ಲಣ ಸೃಷ್ಟಿಸಿತ್ತು.</p><p>ಬಾಂಗ್ಲಾದೇಶದಲ್ಲಿ ಇತ್ತೀಚೆಗೆ ವ್ಯಾಪಕವಾಗಿ ಹಿಂದೂ ಧರ್ಮೀಯರ ಮೇಲೆ ಉದ್ದೇಶಪೂರ್ವಕವಾಗಿ ಹಲ್ಲೆ, ಕೊಲೆಗಳು ನಡೆಯುತ್ತಿವೆ ಎಂದು ಆರೋಪಿಸಿ ಭಾರತದ ಹಲವೆಡೆ ಪ್ರತಿಭಟನೆಗಳು ನಡೆದಿವೆ. ಈ ಕುರಿತು ಎಎನ್ಐ ಸುದ್ದಿಸಂಸ್ಥೆ ಎಕ್ಸ್ ಮಾಹಿತಿ ಹಂಚಿಕೊಂಡಿದೆ.</p>.ಬಾಂಗ್ಲಾದೇಶ | ಹಿಂದೂ ಆಟೊ ಚಾಲಕನ ಕೊಲೆ: ಹರಿತವಾದ ಆಯುಧಗಳನ್ನು ಬಳಸಿ ಕೃತ್ಯ .ಬಾಂಗ್ಲಾದೇಶ: ಹಲ್ಲೆಯಿಂದ ಪಾರಾಗಲು ನಾಲೆಗೆ ಹಾರಿದ ಹಿಂದೂ ವ್ಯಕ್ತಿ ಸಾವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>