<p class="title"><strong>ಷಿಕಾಗೊ:</strong>‘ಹಿಂದೂ ಸಮುದಾಯವು ಸಮಾಜವಾಗಿ ಕಾರ್ಯನಿರ್ವಹಿಸಿದರೆ ಮಾತ್ರ ಏಳಿಗೆ ಹೊಂದಲು ಸಾಧ್ಯ. ಈ ನಿಟ್ಟಿನಲ್ಲಿ ಸಮುದಾಯದ ನಾಯಕರು ಒಗ್ಗೂಡಬೇಕು’ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದರು.</p>.<p class="title">ಇಲ್ಲಿ ನಡೆದ ವಿಶ್ವ ಹಿಂದೂ ಸಮಾವೇಶದಲ್ಲಿ ಮಾತನಾಡಿದ ಅವರು, ‘ನಮ್ಮ ಅಹಂಕಾರವನ್ನು ನಿಯಂತ್ರಿಸಿಕೊಳ್ಳುವುದು ಮತ್ತು ಎಲ್ಲವನ್ನು ಒಪ್ಪಿಕೊಳ್ಳುವುದನ್ನು ಕಲಿತರೆ ಇಡೀ ವಿಶ್ವವೇ ಒಂದು ತಂಡವಾಗಿ ಕೆಲಸ ಮಾಡಲು ಸಾಧ್ಯವಾಗುತ್ತದೆ’ ಎಂದರು.</p>.<p class="title">‘ಸಿಂಹವು ಒಂಟಿಯಾಗಿದ್ದರೆ, ಕಾಡು ನಾಯಿಗಳು ದಾಳಿ ಮಾಡಿ ಅದನ್ನು ಕೊಂದೇ ಬಿಡಬಹುದು. ಇದನ್ನು ನಾವು ಮರೆಯಬಾರದು. ಹಿಂದೂಗಳು ಪ್ರಾಬಲ್ಯ ಸಾಧಿಸಬೇಕು ಎಂಬ ಮಹತ್ವಾಕಾಂಕ್ಷೆ ಹೊಂದಿಲ್ಲ. ಆದರೆ, ಜಗತ್ತಿನ ಸುಧಾರಣೆಗೆ ಕೊಡುಗೆ ನೀಡುವುದು ನಮ್ಮ ಉದ್ದೇಶ’ ಎಂದರು.</p>.<p class="title">‘ನಾವು ಆಧುನಿಕತೆಯ ವಿರೋಧಿಯಲ್ಲ. ಆದರೆ, ಭವಿಷ್ಯದ ಪರವಾದಿ. ಅಂದರೆ, ಹಿಂದೂಧರ್ಮ ಪ್ರಾಚೀನವಾದುದು ಮತ್ತು ಆಧುನಿಕೋತ್ತರವಾದುದು’ ಎಂದು ಭಾಗವತ್ ಅಭಿಪ್ರಾಯಪಟ್ಟರು.</p>.<p class="title"><strong>ಇದನ್ನೂ ಓದಿ:<a href="https://www.prajavani.net/stories/international/protesters-briefly-disrupt-571833.html" target="_blank">ಅಲ್ಪಸಂಖ್ಯಾತರ ವಿರುದ್ಧ ಕ್ರಮ: ಷಿಕಾಗೊದಲ್ಲಿ ಆರ್ಎಸ್ಎಸ್ ವಿರುದ್ಧ ಪ್ರತಿಭಟನೆ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಷಿಕಾಗೊ:</strong>‘ಹಿಂದೂ ಸಮುದಾಯವು ಸಮಾಜವಾಗಿ ಕಾರ್ಯನಿರ್ವಹಿಸಿದರೆ ಮಾತ್ರ ಏಳಿಗೆ ಹೊಂದಲು ಸಾಧ್ಯ. ಈ ನಿಟ್ಟಿನಲ್ಲಿ ಸಮುದಾಯದ ನಾಯಕರು ಒಗ್ಗೂಡಬೇಕು’ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದರು.</p>.<p class="title">ಇಲ್ಲಿ ನಡೆದ ವಿಶ್ವ ಹಿಂದೂ ಸಮಾವೇಶದಲ್ಲಿ ಮಾತನಾಡಿದ ಅವರು, ‘ನಮ್ಮ ಅಹಂಕಾರವನ್ನು ನಿಯಂತ್ರಿಸಿಕೊಳ್ಳುವುದು ಮತ್ತು ಎಲ್ಲವನ್ನು ಒಪ್ಪಿಕೊಳ್ಳುವುದನ್ನು ಕಲಿತರೆ ಇಡೀ ವಿಶ್ವವೇ ಒಂದು ತಂಡವಾಗಿ ಕೆಲಸ ಮಾಡಲು ಸಾಧ್ಯವಾಗುತ್ತದೆ’ ಎಂದರು.</p>.<p class="title">‘ಸಿಂಹವು ಒಂಟಿಯಾಗಿದ್ದರೆ, ಕಾಡು ನಾಯಿಗಳು ದಾಳಿ ಮಾಡಿ ಅದನ್ನು ಕೊಂದೇ ಬಿಡಬಹುದು. ಇದನ್ನು ನಾವು ಮರೆಯಬಾರದು. ಹಿಂದೂಗಳು ಪ್ರಾಬಲ್ಯ ಸಾಧಿಸಬೇಕು ಎಂಬ ಮಹತ್ವಾಕಾಂಕ್ಷೆ ಹೊಂದಿಲ್ಲ. ಆದರೆ, ಜಗತ್ತಿನ ಸುಧಾರಣೆಗೆ ಕೊಡುಗೆ ನೀಡುವುದು ನಮ್ಮ ಉದ್ದೇಶ’ ಎಂದರು.</p>.<p class="title">‘ನಾವು ಆಧುನಿಕತೆಯ ವಿರೋಧಿಯಲ್ಲ. ಆದರೆ, ಭವಿಷ್ಯದ ಪರವಾದಿ. ಅಂದರೆ, ಹಿಂದೂಧರ್ಮ ಪ್ರಾಚೀನವಾದುದು ಮತ್ತು ಆಧುನಿಕೋತ್ತರವಾದುದು’ ಎಂದು ಭಾಗವತ್ ಅಭಿಪ್ರಾಯಪಟ್ಟರು.</p>.<p class="title"><strong>ಇದನ್ನೂ ಓದಿ:<a href="https://www.prajavani.net/stories/international/protesters-briefly-disrupt-571833.html" target="_blank">ಅಲ್ಪಸಂಖ್ಯಾತರ ವಿರುದ್ಧ ಕ್ರಮ: ಷಿಕಾಗೊದಲ್ಲಿ ಆರ್ಎಸ್ಎಸ್ ವಿರುದ್ಧ ಪ್ರತಿಭಟನೆ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>