ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ (ಯುಎನ್ಜಿಎ) ಮಾತನಾಡಿದ ಭಾರತದ ಕಾಯಂ ಪ್ರತಿನಿಧಿ ರುಚಿರಾ ಕಾಂಬೋಜ್ ಅವರು, ‘ಹೆಚ್ಚುತ್ತಿರುವ ಸವಾಲುಗಳನ್ನು ನಿಭಾಯಿಸುವಲ್ಲಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ನಿರ್ವಹಿಸುತ್ತಿರುವ ಪಾತ್ರ ಕನಿಷ್ಠ ಮಟ್ಟದಲ್ಲಿದೆ. ಅದರ ಕಾರ್ಯವೈಖರಿ ತುಂಬಾ ಹೀನಾಯವಾಗಿದೆ’ ಎಂದು ಅವರು ಹರಿಹಾಯ್ದಿದ್ದಾರೆ.