<p><strong>ಹಾಂಗ್ಕಾಂಗ್:</strong> ಹಾಂಗ್ಕಾಂಗ್ನ ಬಹುಮಹಡಿ ಕಟ್ಟಡಗಳಲ್ಲಿ ಸಂಭವಿಸಿದ ಭೀಕರ ಬೆಂಕಿ ದುರಂತದ ಕುರಿತು ತನಿಖೆ ನಡೆಸುವ ಸಲುವಾಗಿ ನ್ಯಾಯಾಧೀಶರೊಬ್ಬರ ನೇತೃತ್ವದಲ್ಲಿ ಸ್ವತಂತ್ರ ಸಮಿತಿಯನ್ನು ರಚಿಸಲು ಸ್ಥಳೀಯ ಆಡಳಿತ ನಿರ್ಧರಿಸಿದೆ.</p>.<p>ಈ ಸಮಿತಿಯು ದುರಂತದ ಕಾರಣವನ್ನು ಪತ್ತೆಮಾಡಲು ಮತ್ತು ಮುಂದೆ ಈ ರೀತಿಯ ದುರಂತಗಳು ಮತ್ತೆ ಸಂಭವಿಸದಂತೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಶಿಫಾರಸುಗಳನ್ನು ಮಾಡಲಿದೆ ಎಂದು ಹಾಂಗ್ಕಾಂಗ್ನ ಕಾರ್ಯನಿರ್ವಾಹಕ ಮುಖ್ಯಸ್ಥ ಜಾನ್ ಲೀ ತಿಳಿಸಿದ್ದಾರೆ.</p>.<p>‘ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆಗೆ 14 ಜನರನ್ನು ಬಂಧಿಸಲಾಗಿದೆ’ ಎಂದು ಲೀ ತಿಳಿಸಿದ್ದಾರೆ.</p>.<p class="title">ದುರಂತದಲ್ಲಿ ಕನಿಷ್ಠ 156 ಜನರು ಮೃತಪಟ್ಟಿದ್ದು, 40 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಇನ್ನೂ 30 ಜನರು ನಾಪತ್ತೆಯಾಗಿದ್ದಾರೆ.</p>.<p class="title">ಕಳೆದ ಬುಧವಾರ ಮಧ್ಯಾಹ್ನ ವಾಂಗ್ ಫುಕ್ ಕೋರ್ಟ್ ಎಂಬ ವಸತಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಬಳಿಕ ಅದು ಇತರ ಏಳು ಕಟ್ಟಡಗಳಿಗೂ ವ್ಯಾಪಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಂಗ್ಕಾಂಗ್:</strong> ಹಾಂಗ್ಕಾಂಗ್ನ ಬಹುಮಹಡಿ ಕಟ್ಟಡಗಳಲ್ಲಿ ಸಂಭವಿಸಿದ ಭೀಕರ ಬೆಂಕಿ ದುರಂತದ ಕುರಿತು ತನಿಖೆ ನಡೆಸುವ ಸಲುವಾಗಿ ನ್ಯಾಯಾಧೀಶರೊಬ್ಬರ ನೇತೃತ್ವದಲ್ಲಿ ಸ್ವತಂತ್ರ ಸಮಿತಿಯನ್ನು ರಚಿಸಲು ಸ್ಥಳೀಯ ಆಡಳಿತ ನಿರ್ಧರಿಸಿದೆ.</p>.<p>ಈ ಸಮಿತಿಯು ದುರಂತದ ಕಾರಣವನ್ನು ಪತ್ತೆಮಾಡಲು ಮತ್ತು ಮುಂದೆ ಈ ರೀತಿಯ ದುರಂತಗಳು ಮತ್ತೆ ಸಂಭವಿಸದಂತೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಶಿಫಾರಸುಗಳನ್ನು ಮಾಡಲಿದೆ ಎಂದು ಹಾಂಗ್ಕಾಂಗ್ನ ಕಾರ್ಯನಿರ್ವಾಹಕ ಮುಖ್ಯಸ್ಥ ಜಾನ್ ಲೀ ತಿಳಿಸಿದ್ದಾರೆ.</p>.<p>‘ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆಗೆ 14 ಜನರನ್ನು ಬಂಧಿಸಲಾಗಿದೆ’ ಎಂದು ಲೀ ತಿಳಿಸಿದ್ದಾರೆ.</p>.<p class="title">ದುರಂತದಲ್ಲಿ ಕನಿಷ್ಠ 156 ಜನರು ಮೃತಪಟ್ಟಿದ್ದು, 40 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಇನ್ನೂ 30 ಜನರು ನಾಪತ್ತೆಯಾಗಿದ್ದಾರೆ.</p>.<p class="title">ಕಳೆದ ಬುಧವಾರ ಮಧ್ಯಾಹ್ನ ವಾಂಗ್ ಫುಕ್ ಕೋರ್ಟ್ ಎಂಬ ವಸತಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಬಳಿಕ ಅದು ಇತರ ಏಳು ಕಟ್ಟಡಗಳಿಗೂ ವ್ಯಾಪಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>