<p><strong>ಢಾಕಾ</strong>: ಪ್ರಸ್ತುತ ಭಾರತದಲ್ಲಿರುವ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರು ನೀಡಿದ ‘ಪ್ರಚೋದನಕಾರಿ ಹೇಳಿಕೆ’ಗಳ ಬಗ್ಗೆ ಬಾಂಗ್ಲಾದೇಶದ ವಿದೇಶಾಂಗ ಕಚೇರಿಯು ಗಂಭೀರ ಕಳವಳ ವ್ಯಕ್ತಪಡಿಸಿ, ಭಾರತೀಯ ಹೈಕಮಿಷನರ್ ಪ್ರಣಯ್ ವರ್ಮಾ ಅವರಿಗೆ ಸಮನ್ಸ್ ನೀಡಿದೆ.</p>.<p>ಇದಾಗಿ ಗಂಟೆಗಳ ನಂತರ ಹೇಳಿಕೆ ನೀಡಿರುವ ಪ್ರಣಯ್ ಅವರು, ‘ಬಾಂಗ್ಲಾದೊಂದಿಗಿನ ಭಾರತದ ಸಂಬಂಧಗಳು ಅಲ್ಪಕಾಲಿಕವಲ್ಲ, ಬದಲಾಗಿ ಶಾಶ್ವತ’ ಎಂದು ಭಾನುವಾರ ಹೇಳಿದ್ದಾರೆ.</p>.<p>ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಸಂಘಟನೆಯಾದ ‘ಇತಿಹಾಸ್ ಒ ಒಯಿಟ್ಟಿಜ್ಜೋ ಪರಿಷತ್’ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಪ್ರಣಯ್ ಅವರು, ‘ಭಾರತ–ಬಾಂಗ್ಲಾ ಸಂಬಂಧ ಶಾಶ್ವತವಾಗಿದ್ದು, ಅದು ರಕ್ತ ಮತ್ತು ತ್ಯಾಗದಲ್ಲಿ ಬೆಸೆದುಕೊಂಡಿದೆ. ಅದನ್ನು ದುರ್ಬಲಗೊಳಿಸಲು ಸಾಧ್ಯವಿಲ್ಲ’ ಎಂದು ಹೇಳಿದ್ದಾರೆ.</p>.<p>‘1971ರ ವಿಮೋಚನಾ ಯುದ್ಧದ ಸಮಯದಲ್ಲಿ ಭಾರತವು ಬಾಂಗ್ಲಾದ ಜನರೊಂದಿಗೆ ನಿಂತಿತು. ಪ್ರಜಾಪ್ರಭುತ್ವ, ಸ್ಥಿರ, ಶಾಂತಿಯುತ, ಪ್ರಗತಿಪರ ಮತ್ತು ಎಲ್ಲರನ್ನೂ ಒಳಗೊಂಡ ರಾಷ್ಟ್ರದ ದೃಷ್ಟಿಕೋನವನ್ನು ಸಾಕಾರಗೊಳಿಸುವಲ್ಲಿ ಅವರಿಗೆ ಬೆಂಬಲ ನೀಡುವುದು ಭಾರತ ಮುಂದುವರಿಸುತ್ತದೆ’ ಎಂದು ಪ್ರಣಯ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಢಾಕಾ</strong>: ಪ್ರಸ್ತುತ ಭಾರತದಲ್ಲಿರುವ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರು ನೀಡಿದ ‘ಪ್ರಚೋದನಕಾರಿ ಹೇಳಿಕೆ’ಗಳ ಬಗ್ಗೆ ಬಾಂಗ್ಲಾದೇಶದ ವಿದೇಶಾಂಗ ಕಚೇರಿಯು ಗಂಭೀರ ಕಳವಳ ವ್ಯಕ್ತಪಡಿಸಿ, ಭಾರತೀಯ ಹೈಕಮಿಷನರ್ ಪ್ರಣಯ್ ವರ್ಮಾ ಅವರಿಗೆ ಸಮನ್ಸ್ ನೀಡಿದೆ.</p>.<p>ಇದಾಗಿ ಗಂಟೆಗಳ ನಂತರ ಹೇಳಿಕೆ ನೀಡಿರುವ ಪ್ರಣಯ್ ಅವರು, ‘ಬಾಂಗ್ಲಾದೊಂದಿಗಿನ ಭಾರತದ ಸಂಬಂಧಗಳು ಅಲ್ಪಕಾಲಿಕವಲ್ಲ, ಬದಲಾಗಿ ಶಾಶ್ವತ’ ಎಂದು ಭಾನುವಾರ ಹೇಳಿದ್ದಾರೆ.</p>.<p>ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಸಂಘಟನೆಯಾದ ‘ಇತಿಹಾಸ್ ಒ ಒಯಿಟ್ಟಿಜ್ಜೋ ಪರಿಷತ್’ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಪ್ರಣಯ್ ಅವರು, ‘ಭಾರತ–ಬಾಂಗ್ಲಾ ಸಂಬಂಧ ಶಾಶ್ವತವಾಗಿದ್ದು, ಅದು ರಕ್ತ ಮತ್ತು ತ್ಯಾಗದಲ್ಲಿ ಬೆಸೆದುಕೊಂಡಿದೆ. ಅದನ್ನು ದುರ್ಬಲಗೊಳಿಸಲು ಸಾಧ್ಯವಿಲ್ಲ’ ಎಂದು ಹೇಳಿದ್ದಾರೆ.</p>.<p>‘1971ರ ವಿಮೋಚನಾ ಯುದ್ಧದ ಸಮಯದಲ್ಲಿ ಭಾರತವು ಬಾಂಗ್ಲಾದ ಜನರೊಂದಿಗೆ ನಿಂತಿತು. ಪ್ರಜಾಪ್ರಭುತ್ವ, ಸ್ಥಿರ, ಶಾಂತಿಯುತ, ಪ್ರಗತಿಪರ ಮತ್ತು ಎಲ್ಲರನ್ನೂ ಒಳಗೊಂಡ ರಾಷ್ಟ್ರದ ದೃಷ್ಟಿಕೋನವನ್ನು ಸಾಕಾರಗೊಳಿಸುವಲ್ಲಿ ಅವರಿಗೆ ಬೆಂಬಲ ನೀಡುವುದು ಭಾರತ ಮುಂದುವರಿಸುತ್ತದೆ’ ಎಂದು ಪ್ರಣಯ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>