'ಉಕ್ರೇನ್ನಲ್ಲಿ ಯುದ್ಧಕ್ಕೆ ಸಂಬಂಧಿಸಿದಂತೆ ಕಳೆದ ವಾರದಿಂದ ಹಲವರಿಂದ ಪ್ರತಿಕ್ರಿಯೆಗಳನ್ನು ಪಡೆದಿದ್ದೇನೆ. ನಿಮ್ಮ ಅಭಿಪ್ರಾಯಗಳಿಗೆ ಧನ್ಯವಾದಗಳು. ನಾವು ರಷ್ಯಾದಲ್ಲಿ ನಮ್ಮ ಎಲ್ಲ ವ್ಯವಹಾರಗಳನ್ನು ಸ್ಥಗಿತಗೊಳಿಸಿದ್ದೇವೆ. ಆ ಭಾಗದಲ್ಲಿರುವ ನಮ್ಮ ಸಹೋದ್ಯೋಗಿಗಳಿಗೆ ಎಲ್ಲ ರೀತಿಯಲ್ಲೂ ಅಗತ್ಯ ಬೆಂಬಲ ನೀಡಿರುವುದರ ಕುರಿತು ಹೆಚ್ಚಿನ ವಿವರಗಳನ್ನು ಶೀಘ್ರದಲ್ಲೇ ಹಂಚಿಕೊಳ್ಳಲಿದ್ದೇನೆ,' ಎಂದು ಕೃಷ್ಣ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.