<p><strong>ಜೆರುಸಲೇಂ:</strong> ‘ಮುಂಬೈ ಭಯೋತ್ಪಾದಕ ದಾಳಿಯ ಆರೋಪಿ ತಹವ್ವುರ್ ಹುಸೇನ್ ರಾಣಾನನ್ನು ಅಮೆರಿಕವು ಭಾರತಕ್ಕೆ ಹಸ್ತಾಂತರಿಸಿತು. ಹಾಗೆಯೇ ಪಾಕಿಸ್ತಾನವು ಭಯೋತ್ಪಾದಕ ಹಫೀಜ್ ಸಯೀದ್, ಸಾಜಿದ್ ಮೀರ್, ಝಕಿಉರ್ ರೆಹಮಾನ್ ಲಖ್ವಿಯನ್ನು ಹಸ್ತಾಂತರ ಮಾಡಬೇಕು’ ಎಂದು ಇಸ್ರೇಲ್ನ ಭಾರತದ ರಾಯಭಾರಿ ಜೆ.ಪಿ.ಸಿಂಗ್ ಒತ್ತಾಯಿಸಿದ್ದಾರೆ.</p>.<p>‘ಭಯೋತ್ಪಾದನೆಯು ಜಾಗತಿಕ ಪಿಡುಗಾಗಿದ್ದು, ಅದನ್ನು ನಿಗ್ರಹಿಸಲು ಅಂತರರಾಷ್ಟ್ರೀಯ ಮಟ್ಟದಲ್ಲಿ ಸಂಘಟಿತರಾಗಬೇಕಾದ ಅಗತ್ಯವಿದೆ’ ಎಂದು ಪ್ರತಿಪಾದಿಸಿದರು.</p>.<p>ಇಸ್ರೇಲ್ನ ‘ಐ24’ ಸುದ್ದಿವಾಹಿನಿಗೆ ಸೋಮವಾರ ಸಂದರ್ಶನ ನೀಡಿ ಮಾತನಾಡಿದ ಅವರು, ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ, ಮುಗಿದಿಲ್ಲ’ ಎಂದರು.</p>.<p class="bodytext">‘ಪಹಲ್ಗಾಮ್ನಲ್ಲಿ ಭಯೋತ್ಪಾದಕರು ಧರ್ಮ ಕೇಳಿದ ನಂತರವೇ ಪ್ರವಾಸಿಗರನ್ನು ಹತ್ಯೆಗೈದಿದ್ದರು. ಇದರಿಂದ 26 ಅಮಾಯಕರು ಪ್ರಾಣ ಕಳೆದುಕೊಂಡರು. ಇದಾದ ಬಳಿಕ, ಭಯೋತ್ಪಾದಕರ ನೆಲೆಗಳನ್ನು ಗುರಿಯಾಗಿರಿಸಿಕೊಂಡು ಭಾರತವು ದಾಳಿ ನಡೆಸಿತ್ತು, ಅದಕ್ಕೆ ಪ್ರತಿಯಾಗಿ, ಸೇನಾ ಕೇಂದ್ರಗಳನ್ನು ಗುರಿಯಾಗಿರಿಸಿಕೊಂಡು ಪಾಕಿಸ್ತಾನ ದಾಳಿ ನಡೆಸಿತು. ಭಯೋತ್ಪಾದನೆಯ ಈ ಎಲ್ಲ ಸಮಸ್ಯೆಗಳ ಮೂಲ ಜೈಷ್–ಎ–ಮೊಹಮ್ಮದ್ ಹಾಗೂ ಲಷ್ಕರ್–ಎ–ತಯಬಾ ಸಂಘಟನೆಗಳು’ ಎಂದು ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೆರುಸಲೇಂ:</strong> ‘ಮುಂಬೈ ಭಯೋತ್ಪಾದಕ ದಾಳಿಯ ಆರೋಪಿ ತಹವ್ವುರ್ ಹುಸೇನ್ ರಾಣಾನನ್ನು ಅಮೆರಿಕವು ಭಾರತಕ್ಕೆ ಹಸ್ತಾಂತರಿಸಿತು. ಹಾಗೆಯೇ ಪಾಕಿಸ್ತಾನವು ಭಯೋತ್ಪಾದಕ ಹಫೀಜ್ ಸಯೀದ್, ಸಾಜಿದ್ ಮೀರ್, ಝಕಿಉರ್ ರೆಹಮಾನ್ ಲಖ್ವಿಯನ್ನು ಹಸ್ತಾಂತರ ಮಾಡಬೇಕು’ ಎಂದು ಇಸ್ರೇಲ್ನ ಭಾರತದ ರಾಯಭಾರಿ ಜೆ.ಪಿ.ಸಿಂಗ್ ಒತ್ತಾಯಿಸಿದ್ದಾರೆ.</p>.<p>‘ಭಯೋತ್ಪಾದನೆಯು ಜಾಗತಿಕ ಪಿಡುಗಾಗಿದ್ದು, ಅದನ್ನು ನಿಗ್ರಹಿಸಲು ಅಂತರರಾಷ್ಟ್ರೀಯ ಮಟ್ಟದಲ್ಲಿ ಸಂಘಟಿತರಾಗಬೇಕಾದ ಅಗತ್ಯವಿದೆ’ ಎಂದು ಪ್ರತಿಪಾದಿಸಿದರು.</p>.<p>ಇಸ್ರೇಲ್ನ ‘ಐ24’ ಸುದ್ದಿವಾಹಿನಿಗೆ ಸೋಮವಾರ ಸಂದರ್ಶನ ನೀಡಿ ಮಾತನಾಡಿದ ಅವರು, ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ, ಮುಗಿದಿಲ್ಲ’ ಎಂದರು.</p>.<p class="bodytext">‘ಪಹಲ್ಗಾಮ್ನಲ್ಲಿ ಭಯೋತ್ಪಾದಕರು ಧರ್ಮ ಕೇಳಿದ ನಂತರವೇ ಪ್ರವಾಸಿಗರನ್ನು ಹತ್ಯೆಗೈದಿದ್ದರು. ಇದರಿಂದ 26 ಅಮಾಯಕರು ಪ್ರಾಣ ಕಳೆದುಕೊಂಡರು. ಇದಾದ ಬಳಿಕ, ಭಯೋತ್ಪಾದಕರ ನೆಲೆಗಳನ್ನು ಗುರಿಯಾಗಿರಿಸಿಕೊಂಡು ಭಾರತವು ದಾಳಿ ನಡೆಸಿತ್ತು, ಅದಕ್ಕೆ ಪ್ರತಿಯಾಗಿ, ಸೇನಾ ಕೇಂದ್ರಗಳನ್ನು ಗುರಿಯಾಗಿರಿಸಿಕೊಂಡು ಪಾಕಿಸ್ತಾನ ದಾಳಿ ನಡೆಸಿತು. ಭಯೋತ್ಪಾದನೆಯ ಈ ಎಲ್ಲ ಸಮಸ್ಯೆಗಳ ಮೂಲ ಜೈಷ್–ಎ–ಮೊಹಮ್ಮದ್ ಹಾಗೂ ಲಷ್ಕರ್–ಎ–ತಯಬಾ ಸಂಘಟನೆಗಳು’ ಎಂದು ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>